Karnataka Polls 2023: ಚುನಾವಣೆ ಸಿದ್ದತೆ ಪರಿಶೀಲನೆಗಾಗಿ ಮಾ.9ರಂದು ಕರ್ನಾಟಕಕ್ಕೆ ಕೇಂದ್ರ ಚುನಾವಣಾ ಆಯೋಗ ಭೇಟಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಗಳು ಜೋರಾಗಿ ನಡೆಯುತ್ತಿದೆ. ಇವುಗಳ ಅಬ್ಬರದ ಪ್ರಚಾರದ ನಡುವೆ ಮಾರ್ಚ್ 9ರಂದು ಭಾರತದ ಚುನಾವಣಾ ಆಯೋಗವು ರಾಜ್ಯದ ಚುನಾವಣೆ ಸಿದ್ದತೆಗಳ ಪರಿಶೀಲನೆಗಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ.

Karnataka Polls 2023: ಚುನಾವಣೆ ಸಿದ್ದತೆ ಪರಿಶೀಲನೆಗಾಗಿ ಮಾ.9ರಂದು ಕರ್ನಾಟಕಕ್ಕೆ ಕೇಂದ್ರ ಚುನಾವಣಾ ಆಯೋಗ ಭೇಟಿ
Follow us
|

Updated on:Mar 05, 2023 | 10:54 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಗಳು ಜೋರಾಗಿ ನಡೆಯುತ್ತಿದೆ. ಇವುಗಳ ಅಬ್ಬರದ ಪ್ರಚಾರದ ನಡುವೆ ಮಾರ್ಚ್ 9ರಂದು ಭಾರತದ ಚುನಾವಣಾ ಆಯೋಗವು (Election Commission Of India) ರಾಜ್ಯದ ಚುನಾವಣೆ ಸಿದ್ದತೆಗಳ ಪರಿಶೀಲನೆಗಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದೆ. ಈ ಬಗ್ಗೆ ಜಂಟಿ ಮುಖ್ಯ ಚುನಾವಣಾಧಿಕಾರಿ ಟಿ.ಯೋಗೇಶ ಅವರು ಸಭಾ ಸೂಚನಾ ಪತ್ರ ಹೊರಡಿಸಿದ್ದು, ಮಾರ್ಚ್ 9ರಂದು ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಿದ್ದತೆಯನ್ನು ಪರಿಶೀಲಿಸಲು ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡುತ್ತಿದೆ ಎಂದು ತಿಳಿಸಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡುವ ದಿನದಂದು ವಿವಿಧ ಪಕ್ಷಗಳ ಜೊತೆ ಸಭೆಯೂ ನಡೆಯಲಿದೆ. ಈ ಬಗ್ಗೆ ಸೂಚನಾ ಪತ್ರದಲ್ಲಿ ತಿಳಿಸಲಾಗಿದ್ದು, ಆಯೋಗದೊಂದಿಗೆ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಸಭೆಯನ್ನು ನಿಗದಿತ ಸಮಯಕ್ಕೆ ವಿಕಾಸ ಸೌಧದ ಕೊಠಡಿ ಸಂಖ್ಯೆ 422ರಲ್ಲಿ ಕರೆಯಲಾಗಿದೆ. ಅದರಂತೆ ತಾವು ಅಥವಾ ತಮ್ಮ ಪ್ರತಿನಿಧಿಗಳು ಸದರಿ ಸಭೆಗೆ ಹಾಜರಾಗುವಂತೆ ಕೋರಲಾಗಿದೆ.

ಇದನ್ನೂ ಓದಿ: Amit Shah: ಮಾರ್ಚ್​ 12 ರಂದು ಅಮಿತ್​ ಶಾ ಮಧ್ಯ ಕರ್ನಾಟಕ ದಾವಣಗೆರೆಗೆ ಭೇಟಿ

ಯಾವ ಪಕ್ಷಕ್ಕೆ ಯಾವ ಸಮಯದಲ್ಲಿ ಸಭೆ?

ಕರ್ನಾಟಕ ರಾಜ್ಯದಲ್ಲಿನ ರಾಷ್ಟ್ರೀಯ ಹಾಗೂ ಸ್ಥಳೀಯ ಪಕ್ಷಗಳ ಸಭೆ ಪ್ರತ್ಯೇಕವಾಗಿ ಬೇರೆಬೇರೆ ಸಮಯದಲ್ಲಿ ನಡೆಯಲಿದೆ. ಅಖಿಲ ಭಾರತ ತೃಣಮೂಲ ಕಾಂಗ್ರೆಸ್​ ಪಕ್ಷಕ್ಕೆ ಮಧ್ಯಾಹ್ನ 2.30ರಿಂದ 2.40ರವರೆಗೆ ಸಮಯ ನಿಗದಿ ಮಾಡಲಾಗಿದ್ದು, ಬಹುಜನ ಸಮಾಜ ಪಕ್ಷದ ಜೊತೆ 2.40ರಿಂದ 2.50ರವರೆಗೆ, ಬಿಜೆಪಿ ಜೊತೆ 2.50ರಿಂದ 3 ಗಂಟೆವರೆಗೆ, ಭಾರತೀಯ ಕಮ್ಯುನಿಸ್ಟ್ ಪಕ್ಷದ ಜೊತೆ 3 ಗಂಟೆಯಿಂದ 3.10ರವರೆಗೆ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ಜೊತೆ 3.10ರಿಂದ 3.20ರವರೆಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಜೊತೆ 3.20ರಿಂದ 3.30ರವರೆಗೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಜೊತೆ 3.30ರಿಂದ 3.40ರವರೆಗೆ, ನ್ಯಾಷನಲ್ ಪೀಪಕ್ಸ್ ಪಾರ್ಟಿ ಜೊತೆ 3.40ರಿಂದ 3.50ರವರೆಗೆ ಹಾಗೂ ಜೆಡಿಎಸ್ ಪಕ್ಷದ ಜೊತೆಗೆ 3.50ರಿಂದ 4 ಗಂಟೆವರೆಗೆ ಸಭೆ ನಡೆಯಲಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sun, 5 March 23

Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
‘ಬಿಗ್ ಬಾಸ್ ಕನ್ನಡ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್
ಕಾಡಿಂದ ಹೊರಬಂದು ಎಂಜಾಯ್ ಮಾಡಿದ ಕರಡಿಗಳ ವಿಡಿಯೋ ವೈರಲ್