AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿದ ಶಾಸಕ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ

ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮತ್ತೆ ವಿಧಾನಸಭೆಗೆ ಪ್ರವೇಶ ಮಾಡುವ ಮೂಲಕ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ.

ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿದ ಶಾಸಕ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ
ಜನಾರ್ದನ ರೆಡಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 05, 2023 | 10:32 AM

Share

ಕೊಪ್ಪಳ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಆಚೆ ಬಂದಿರುವ ಗಾಲಿ ಜನಾರ್ದನ ರೆಡ್ಡಿ(janardhana reddy ), ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಮತ್ತೆ ವಿಧಾನಸಭೆಗೆ ಪ್ರವೇಶ ಮಾಡಿದ್ದಾರೆ. ಆದ್ರೆ, ಈ ಸಂದರ್ಭದಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟವೊಂದು ಎದುರಾಗಿದೆ. ಜನಾರ್ದನ ರಡ್ಡಿ ನಾಮಪತ್ರದಲ್ಲಿನ ದೋಷದ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾಧಿಕಾರಿ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: Janardhan Reddy: ಜನಾರ್ದನ ರೆಡ್ಡಿ ದಂಪತಿಗೆ ಸಂಕಷ್ಟ: ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್​ ಆದೇಶ

ಜನಾದರ್ನ ರೆಡ್ಡಿ ನಾಮಪತ್ರ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಿಲ್ಲ. ವಾಹನಗಳು, ಆಸ್ತಿ ವಿವರ ಸರಿಯಾಗಿ ನೀಡಿಲ್ಲ ಎಂದು ಆರೋಪಿಸಿ ಅನಂತಪುರದ ಗಣಿ ಉದ್ಯಮಿ ಟಪಾಲು ಶ್ಯಾಮ್​ ಪ್ರಸಾದ್ ಎನ್ನುವರು ಚುನಾವಣಾ ಆಯೋಕ್ಕೆ ದೂರು ನೀಡಿದ್ದರು. ಈ ದೂರನ್ನು ಚುನಾವಣಾ ಆಯೋಗ ಸಹ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಇದರಿಂದ ಜನಾದರ್ನ ರೆಡ್ಡಿಗೆ ಢವ ಢವ ಶುರುವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಒಟ್ಟು 65791 ಮತಗಳನ್ನು ಪಡೆದುಕೊಂಡಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್​ನ ಇಕ್ಬಾಲ್ ಅನ್ಸಾರಿ 57674 ಮತಗಳನ್ನು ಪಡೆದುಕೊಂಡು ಎರಡನೇ ಸ್ಥಾನಲ್ಲೆ ತೃಪ್ತಿಪಟ್ಟುಕೊಂಡಿದ್ದರು. ಇನ್ನು ಹಾಲಿ ಶಾಸಕರಾಗಿದ್ದ ಬಿಜೆಪಿಯ ಪರಣ್ಣ ಮುನವಳ್ಳಿ 29918 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದ್ದರು.

ಇತ್ತೀಚೆಗಷ್ಟೇ ಜನಾರ್ದನ ರೆಡ್ಡಿಯವರ ಅಕ್ರಮ ಆಸ್ತಿ ಜಪ್ತಿ ಮಾಡಲು ಈ ಹಿಂದಿನ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಇದೀಗ ನಾಮಪತ್ರದಲ್ಲಿ ದೋಷ ಆರೋಪ ಕೇಳಿಬಂದಿದೆ. ಜೈಲಿಗೆ ಹೋಗಿಬಂದ ಬಳಿಕ ಹೊಸ ರಾಜಕೀಯ ಜೀವನ ಆರಂಭಿಸಿರುವ ಗಣಿ ಧಣಿಗೆ ಒಂದಲ್ಲ ಒಂದು ರಾಜಕೀಯ ಅಡೆತಡೆಗಳು ಬರುತ್ತಲೇ ಇವೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:56 am, Wed, 5 July 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು