AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂ., ರೈತ ಮೃತಪಟ್ಟರೆ 2 ಲಕ್ಷ ರೂ. ಕೊಡಲು ತೀರ್ಮಾನ: ಯಡಿಯೂರಪ್ಪ

ಮತ್ತೆ ಬಿಜೆಪಿ ಸರ್ಕಾರ ರಚನೆಯಾದರೆ ರಾಜ್ಯದಲ್ಲಿ ಮೊದಲ ಬಾರಿಗೆ ರೈತರಿಗೆ ಜೀವ ವಿಮೆ‌ ಜಾರಿಗೆ ತರುತ್ತೇವೆ, ಬಡರೈತ ಮಹಿಳೆಯರಿಗೆ ಇನ್ಮುಂದೆ ತಿಂಗಳಿಗೆ 1000 ಕೊಡಲು ತೀರ್ಮಾನ ಮಾಡಿದ್ದೇವೆ. ತಾಯಂದಿರು ಇದನ್ನು ಮನೆ ಮನೆಗೆ ಹೋಗಿ ಹೇಳಬೇಕು ಎಂದು ಯಡಿಯೂರಪ್ಪ ಹೇಳಿದರು.

ರೈತ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂ., ರೈತ ಮೃತಪಟ್ಟರೆ 2 ಲಕ್ಷ ರೂ. ಕೊಡಲು ತೀರ್ಮಾನ: ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ ಮತ್ತು ರಮೇಶ್ ಜಾರಕಿಹೊಳಿ
Rakesh Nayak Manchi
|

Updated on:Mar 15, 2023 | 4:04 PM

Share

ಬಾಗಲಕೋಟೆ: ಮತ್ತೆ ಬಿಜೆಪಿ ಸರ್ಕಾರ ರಚನೆಯಾದರೆ ರಾಜ್ಯದಲ್ಲಿ ಮೊದಲ ಬಾರಿಗೆ ರೈತರಿಗೆ ಜೀವ ವಿಮೆ‌ ಜಾರಿಗೆ ತರುತ್ತೇವೆ. ರೈತ ಮಹಿಳೆಯರಿಗೆ ತಿಂಗಳಿಗೆ 1 ಸಾವಿರ ರೂಪಾಯಿ ನೀಡುತ್ತೇವೆ. ತಾಯಂದಿರು ಇದನ್ನು ಮನೆ ಮನೆಗೆ ಹೋಗಿ ಹೇಳಬೇಕು. ಮಾತ್ರವಲ್ಲದೆ, ಆಕಸ್ಮಿಕವಾಗಿ ರೈತ ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ರೂ. ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (BS Yediyurappa) ಹೇಳಿದರು. ಜಿಲ್ಲೆಯ ಇಳಕಲ್​ನಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ (BJP Sankalpa Yatra Convention At Ilkal) ಭರವಸೆ ನೀಡಿದ ಅವರು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಕೊಡುತ್ತಿದ್ದೇವೆ. ನೀವೆಲ್ಲ ಆಶೀರ್ವಾದ ಮಾಡಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿ ಎಂದು ಮನವಿ ಮಾಡಿದರು.

ನೇಕಾರರಿಗೆ ನಾವು (ಬಿಜೆಪಿ ಸರ್ಕಾರ) ಕೊಟ್ಟಷ್ಟು ಸವಲತ್ತು ಬೇರೆ ಯಾರು ಕೊಟ್ಟಿಲ್ಲ. ಈ ಬಗ್ಗೆ ನಾಳೆಯಿಂದ ಮನೆ ಮನೆಗೆ ಹೋಗಿ ಕೇಳಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳು ಒಂದೇ ಒಂದು ಮನೆಗೆ ಸಿಕ್ಕಿಲ್ಲ ಅನ್ನೋದನ್ನ ತೋರಿಸಿ ಎಂದು ಸವಾಲ್ ಹಾಕಿದರು. ನಾನು ನಿಮಗೆ ಕೈ ಜೋಡಿಸಿ ಪ್ರಾರ್ಥನೆ ಮಾಡುತ್ತೇನೆ. ದೊಡ್ಡನಗೌಡ ಪಾಟೀಲ ಸಿಕ್ಕಿರುವುದು ನಿಮ್ಮ ಪುಣ್ಯ. ಮಾದರಿಯಾಗಿ ಕೆಲಸ ಮಾಡುತ್ತಿದ್ದಾರೆ, ಈ ಸಾರಿ ಬಿಜೆಪಿ ಗೆಲ್ಲಬೇಕು. ನಿಮ್ಮೆಲ್ಲರ ಆಶೀರ್ವಾದದ ಮೂಲಕ ಇಡೀ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿ ಎಂದರು.

ಇದನ್ನೂ ಓದಿ: Bengaluru: ಯಡಿಯೂರಪ್ಪರಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭ; ಜೆಪಿ ನಡ್ಡಾ

ನಿಜವಾದ ಕೋಮುವಾದಿ ಪಕ್ಷ ಕಾಂಗ್ರೆಸ್: ರಮೇಶ್ ಜಾರಕಿಹೊಳಿ

ಸಮಾವೇಶದಲ್ಲಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ನಿಜವಾದ ಕೋಮುವಾದಿ ಪಕ್ಷ ಅಂದರೆ ಕಾಂಗ್ರೆಸ್, ಸುಳ್ಳು ಹೇಳುವ ಈ ಪಕ್ಷವನ್ನು ಮನೆಗೆ ಕಳಿಸುವ ಕಾಲ ಬಂದಿದೆ ಎಂದು ಹೇಳಿ ನೇರವಾಗಿ ವಿಜಯಾನಂದ ಕಾಶಪ್ಪನವರ್​ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಕಾಶಪ್ಪನವರ್​ಗೆ ಬೇರೆ ಸಮುದಾಯದವರ ಮತ ಕೇಳುವ ಹಕ್ಕಿಲ್ಲ. ಕಾಶಪ್ಪನವರ್​ ಅಪ್ಪ ಒಳ್ಳೆಯವರಿದ್ದರು. ಆದರೆ ಕಾಶಪ್ಪನವರ್​ಗೆ SC, ST ಸಮುದಾಯದವರು ಮತ ಹಾಕಬಾರದು. ಏಕೆಂದರೆ ಆತ ಬೆಳಗಾವಿ ಜಿಲ್ಲೆಯಲ್ಲಿ ನಿಮಗೆ ಬಹಳ ಅವಮಾನ ಮಾಡಿದ್ದಾನೆ. ವಿಜಯಾನಂದ ಕಾಶಪ್ಪನವರ್ ಶಾಸಕನಾಗಲು ಲಾಯಕ್ಕಿಲ್ಲ. ಚುನಾವಣೆಯಲ್ಲಿ ಕಾಶಪ್ಪನವರ್​ನನ್ನು ಸೋಲಿಸುವಂತೆ ಕರೆ ನೀಡಿದರು. ಅಲ್ಲದೆ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣ ಕಹಳೆ ಮೊಳಗಿಸಿರುವ ಬಿಜೆಪಿ, ವಿಜಯ ಸಂಕಲ್ಪ ಯಾತ್ರೆ ಮೂಲಕ ಮತದಾರರನ್ನು ಸೆಳೆಯುತ್ತಿದೆ. ಪಕ್ಷದ ಮಹತ್ವದ ಚುನಾವಣಾ ಪ್ರಚಾರ ಅಭಿಯಾನವಾಗಿರುವ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಚಾಲನೆ ನೀಡಿದ್ದರು. ರಾಜ್ಯ ಮತ್ತು ಕೇಂದ್ರ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ದೃಷ್ಟಿಯಿಂದ ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ರಥ ಯಾತ್ರೆ ಮಾಡುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 15 March 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್