AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್

ವಿದ್ಯುತ್​ ಬಿಲ್​ ದುಪ್ಪಟ್ಟು ಬಂದಿರುವ ಬಗ್ಗೆ ಸಾರ್ವಜನಿಕರು ಸರ್ಕಾರ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಇಂಧನ ಸಚಿವ ಸ್ಪಷ್ಟನೆ ನೀಡಿದ್ದಾರೆ.

Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್
ಇಂಧನ ಸಚಿವ ಕೆಜೆ ಜಾರ್ಜ್
ರಮೇಶ್ ಬಿ. ಜವಳಗೇರಾ
|

Updated on: Jun 22, 2023 | 3:10 PM

Share

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಲ್​ ದುಪ್ಪಟ್ಟು ಬರುತ್ತಿರುವುದರಿಂದ ಸಾರ್ಜಜನಿಕರು ರಾಜ್ಯ ಸರ್ಕಾರದ ಕಿಡಿಕಾರುತ್ತಿದ್ದಾರೆ. ಏಕಾಏಕಿ ಏಕೆ ಕರೆಂಟ್​ ಬಿಲ್​ ಡಬಲ್​ ಬಂದಿದೆ ಎಂದು ಸಾಮಾನ್ಯ ಜನರಿಗೆ ಅರ್ಥವಾಗದೇ ತಲೆಕೆಡಿಸಿಕೊಂಡಿದ್ದಾರೆ. ಕೆಲ ಕೆಲವೆಡೆ ವಿದ್ಯುತ್ ಬಿಲ್ ಲಕ್ಷಾನುಗಟ್ಟಲೇ ಬಂದಿರುವುದು ವರದಿಯಾಗುತ್ತಿವೆ. ಇನ್ನು ಬಗ್ಗೆ ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯಿಸಿದ್ದು, ​ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಆಗಿದ್ದಕ್ಕೆ ಕಾರಣ ನಾವಲ್ಲ. ಹಿಂದಿನ ಸರ್ಕಾರವಿದ್ದಾಗ KERC ವಿದ್ಯುತ್​ ದರ ಏರಿಕೆ ಮಾಡಿದೆ. ಏಪ್ರಿಲ್, ಮೇ ತಿಂಗಳಿನ ಬಿಲ್​ ಕಲೆಕ್ಟ್​​ ಮಾಡಲು ಹೇಳಿದ್ದಾರೆ. ಹೀಗಾಗಿ ಒಂದೇ ಬಾರಿ ಎರಡು ತಿಂಗಳ ವಿದ್ಯುತ್​ ಏರಿಕೆ ಹಿನ್ನೆಲೆಯಲ್ಲಿ ಬಿಲ್ ಜಾಸ್ತಿ ಬರುತ್ತಿದೆ.​ ಇನ್ನು ಕೆಲವೆಡೆ ಮೀಟರ್​ ಸಮಸ್ಯೆಯಿಂದ ವಿದ್ಯುತ್​ ದರ ಹೆಚ್ಚಳ ಆಗಿದೆ. ನಮ್ಮ ಸಾಫ್ಟ್​​ವೇರ್ ಹಳೆಯದು, ಹೊಸ ಸಾಫ್ಟ್​​ವೇರ್​​​ ಹಾಕಬೇಕು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಕೆಲ ಮನೆಗಳಲ್ಲಿ ಮೀಟರ್ ಪ್ರಾಬ್ಲಮ್​ ಆಗಿದೆ. ಒಂದೇ ಬಾರಿ ಎರಡು ತಿಂಗಳಗಳ ಬಿಲ್ ಬಂದಿದೆ. ನಮ್ಮ ಸರ್ಕಾರದಿಂದ ಪ್ರಾಬ್ಲಮ್ ಆಗಿಲ್ಲ. ನಮ್ಮ ಸಾಫ್ಟವೇರ್ ಕೂಡ 12 ವರ್ಷ ಹಳೆಯದು. ತಕ್ಷಣ ಬದಲಾವಣೆ ಮಾಡುವುದು ಕಷ್ಟ. ಕೊಪ್ಪಳದಲ್ಲೂ ಕೂಡ ಇದೇ ಸಮಸ್ಯೆ ಆಗಿದೆ. ಕೊಪ್ಪಳದ ಅಜ್ಜಿ ಮನೆಗೆ 1 ಲಕ್ಷ ರೂ. ಕರೆಂಟ್​ ಬಿಲ್​ ಬಂದಿದೆ ಮೀಟರ್ ಬಿಲ್ ಸಮಸ್ಯೆಯಿಂದ ಬಿಲ್​ ಹೆಚ್ಚಿಗೆ ಬಂದಿದೆ. ಆ ಅಜ್ಜಿ‌ ಕರೆಂಟ್ ಬಿಲ್ ಅಷ್ಟು ಕಟ್ಟಬೇಕಿಲ್ಲ. ಕರೆಂಟ್ ಬಿಲ್ಲ ಹೆಚ್ಚಳ ಆಗಿರೋದಕ್ಕೆ ಕಾರಣ ನಾವಲ್ಲ ಎಂದು ತಿಳಿಸಿದರು.

ವಿದ್ಯುತ್​ ದರ ಹೆಚ್ಚಳ ಕಾರಣ ನಾವಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೇ ವಿದ್ಯುತ್​ ದರ ಹೆಚ್ಚಳಕ್ಕೆ ಆದೇಶಿಸಿತ್ತು. ಆದ್ರೆ ಚುನಾವಣೆ ಇದ್ದದ್ದರಿಂದ ಅದನ್ನು ತಡೆಹಿಡಿಯಲಾಗಿತ್ತು ಎನ್ನುವುದು ಕಾಂಗ್ರೆಸ್ ನಾಯಕರ ವಾದ.

ಇನ್ನು ಇದಕ್ಕೆ ಬಿಜೆಪಿ ನಾಯಕರು ಸಹ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡುತ್ತಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಹಣ ಕ್ರೂಢೀಕರಣಕ್ಕೆ ಕಾಂಗ್ರೆಸ್​ ದರ ಹೆಚ್ಚಳ ಮಾಡಿದೆ ಎನ್ನುತ್ತಿದ್ದಾರೆ. ಅಲ್ಲದೇ ನಮ್ಮ ಸರ್ಕಾರ ಅವಧಿಯಲ್ಲಿನ ಎಲ್ಲಾ ಅನುದಾನ ತಡೆಹಿಡಿದಂತೆ ಈ ವಿದ್ಯುತ್ ದರ ಏರಿಕೆ ಆದೇಶವನ್ನು ತಡೆಹಿಡಿಯಬಹುದಿತ್ತು ಅಲ್ವಾ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!