Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ ನೀಡಿದೆ. ಏಕಾಏಕಿ ಕೇಂದ್ರ ಗೃಹ ಇಲಾಖೆಯೇ ಭದ್ರತೆ ಹೆಚ್ಚಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಯಡಿಯೂರಪ್ಪನವರಿಗೆ ಏನಾದರೂ ಬೆದರಿಕೆಗಳು ಇವೆಯೇ? ಯಡಿಯೂರಪ್ಪನವರೇ ಭದ್ರತೆ ನೀಡುವಂತೆ ಕೇಂದ್ರ ಗೃಹ ಇಲಾಖೆಗೆ ಮನವಿ ಮಾಡಿದ್ರಾ? ಎನ್ನುವ ಪ್ರಶ್ನಿಗಳು ಉದ್ಭವಿಸಿವೆ.

ಮಾಜಿ ಸಿಎಂ ಯಡಿಯೂರಪ್ಪಗೆ ದಿಢೀರ್ ಝಡ್ ಶ್ರೇಣಿ ಭದ್ರತೆ ಒದಗಿಸಿದ ಕೇಂದ್ರ, ಕಾರಣವೇನು?
ಬಿಎಸ್ ಯಡಿಯೂರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 26, 2023 | 12:38 PM

ಬೆಂಗಳೂರು, (ಅಕ್ಟೋಬರ್ 26): ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ (Karnataka Ex CM BS Yediyurappa ) ಅವರಿಗೆ ಕೇಂದ್ರ ಗೃಹ ಇಲಾಖೆ ಝೆಡ್ ಶ್ರೇಣಿ ಭದ್ರತೆ(Z category security) ನೀಡಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರಿಗೆ ಇದ್ದ ಭದ್ರತೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿತ್ತು. ಇದೀಗ ಕೇಂದ್ರ ಗೃಹ ಸಚಿವಾಲಯವೇ ಖುದ್ದು ಯಡಿಯೂರಪ್ಪನವರಿಗೆ ಉನ್ನತ ಮಟ್ಟದ ಭದ್ರತೆ ನೀಡಿರುವುದು ಅಚ್ಚರಿಕೆ ಕಾರಣವಾಗಿದೆ.

ಮೂಲಗಳ ಪ್ರಕಾರ ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಕೇಂದ್ರ ಗೃಹ ಇಲಾಖೆಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ  ಕೇಂದ್ರ ಗೃಹ ಸಚಿವಾಲಯ ಈ  ಭದ್ರತೆ ಒದಗಿಸಿದೆ ಎನ್ನಲಾಗಿದೆ. ಗೃಹ ಸಚಿವಾಲಯ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರ ಉನ್ನತ ಶ್ರೇಣಿಯ  ಭದ್ರತೆ ನೀಡಿದೆ ಎನ್ನಲಾಗಿದೆ.

ಕೇಂದ್ರ ಗೃಹ ಇಲಾಖೆಯ ನಿರ್ದೇಶನದಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಶೀಘ್ರವೇ ಭದ್ರತಾ ಉಸ್ತುವಾರಿ ವಹಿಸಿಕೊಳ್ಳಲಿದ್ದು,  ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‌ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ಹಗಲು-ರಾತ್ರಿ ದಿನದ 24 ಗಂಟೆ ಕಾಯುತ್ತಿರುತ್ತಾರೆ. ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುವುದು. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು ಇಬ್ಬರು ವೀಕ್ಷಕರನ್ನು ಶಿಫ್ಟ್‌ಗಳಲ್ಲಿ ನಿಯೋಜಿಸಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ