AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BS Yediyurappa Resign: ಬಿ.ಎಸ್.ಯಡಿಯೂರಪ್ಪಗೆ ಆಷಾಢ ಕಂಟಕ ಮತ್ತೆ ಸಾಬೀತು

ಈ ಹಿಂದೆ ಅಂದರೆ 2011ರ ಜುಲೈನಲ್ಲಿ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡಿತ್ತು. ಲೋಕಾಯುಕ್ತ ವರದಿ ಸಲ್ಲಿಕೆ ಬೆನ್ನಲ್ಲೇ ರಾಜೀನಾಮೆಗೆ ಸೂಚನೆ ನೀಡಲಾಗಿತ್ತು. ಆಗ ಆಷಾಢದ ಬಳಿಕ ರಾಜೀನಾಮೆ ನೀಡುತ್ತೇನೆ ಎಂದು

BS Yediyurappa Resign: ಬಿ.ಎಸ್.ಯಡಿಯೂರಪ್ಪಗೆ ಆಷಾಢ ಕಂಟಕ ಮತ್ತೆ ಸಾಬೀತು
ಬಿ.ಎಸ್.ಯಡಿಯೂರಪ್ಪ
TV9 Web
| Edited By: sandhya thejappa|

Updated on: Jul 26, 2021 | 1:23 PM

Share

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ (BS Yediyurappa) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ (Resign) ನೀಡುವುದಾಗಿ ಘೋಷಿಸಿದ್ದಾರೆ. ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ಭಾವುಕರಾಗಿ ಘೋಷಿಸಿದ್ದಾರೆ. ಜುಲೈ 22ಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದರು. ಇದನ್ನು ಗಮನಿಸಿದಾಗ ಬಿಎಸ್​ವೈಗೆ ಆಷಾಢ ಕಂಟಕವುಂಟಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಇದೀಗ ಸಾಬೀತಾಗಿದೆ. ಈ ಹಿಂದೆ ಯಡಿಯೂರಪ್ಪ ಆಷಾಢದಲ್ಲೇ ರಾಜೀನಾಮೆ ನೀಡಿದ್ದರು. ಮತ್ತೆ ಇದೀಗ ಆಷಾಢದಲ್ಲೇ ರಾಜೀನಾಮೆ ನೀಡುತ್ತಿದ್ದಾರೆ. ಹೀಗಾಗಿ ಆಷಾಢ ಮಾಸ ಯಡಿಯೂರಪ್ಪಗೆ ಕಾಡಿರುವುದು ಸಾಬೀತಾಗಿದೆ.

ಈ ಹಿಂದೆ ಅಂದರೆ 2011ರ ಜುಲೈನಲ್ಲಿ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡಿತ್ತು. ಲೋಕಾಯುಕ್ತ ವರದಿ ಸಲ್ಲಿಕೆ ಬೆನ್ನಲ್ಲೇ ರಾಜೀನಾಮೆಗೆ ಸೂಚನೆ ನೀಡಲಾಗಿತ್ತು. ಆಗ ಆಷಾಢದ ಬಳಿಕ ರಾಜೀನಾಮೆ ನೀಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದರು. ಇದೀಗ ಮತ್ತೆ ಆಷಾಢದಲ್ಲಿಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಅಧಿಕಾರಕ್ಕೆ ಬಂದು ಎರಡನೇ ವರ್ಷದ ದಿನವೇ ರಾಜೀನಾಮೆ ಅಧಿಕಾರಕ್ಕೆ ಬಂದು ಎರಡನೇ ವರ್ಷದ ದಿನವೇ ಬಿಎಸ್​ವೈ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. 4 ಬಾರಿ ಸಿಎಂ ಆದರೂ 5 ವರ್ಷ ಪೂರ್ಣಾವಧಿಯನ್ನು ಯಡಿಯೂರಪ್ಪ ಪೂರೈಸಿಲ್ಲ. 2007ರಲ್ಲಿ ಮೊದಲ ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಜೆಡಿಎಸ್ ಬೆಂಬಲದೊಂದಿಗೆ ಯಡಿಯೂರಪ್ಪ ಸರ್ಕಾರ ರಚಿಸಿದ್ದರು. ಜೆಡಿಎಸ್ ಬೆಂಬಲ ವಾಪಸ್ ಪಡೆದ ಹಿನ್ನೆಲೆ 8 ದಿನಕ್ಕೆ ರಾಜೀನಾಮೆ ನೀಡಿದರು.

2008ರಲ್ಲಿ 2ನೇ ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. 3 ವರ್ಷ ಪೂರೈಸುವ ಮೊದಲೇ ಬಿಎಸ್​ವೈ ರಾಜೀನಾಮೆ ನೀಡಿದ್ದರು. 2018ರಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು. ಆಗ ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಕೇವಲ ಮೂರೇ ದಿನಕ್ಕೆ ರಾಜೀನಾಮೆ ನೀಡಿದ್ದರು. 2019ರಲ್ಲಿ ಮತ್ತೆ ಸಿಎಂ ಆಗಿ ಆಯ್ಕೆಯಾಗಿದ್ದ ಯಡಿಯೂರಪ್ಪ, ಎರಡು ವರ್ಷಕ್ಕೆ ಮತ್ತೆ ರಾಜೀನಾಮೆ ನೀಡುತ್ತಿದ್ದಾರೆ.

ಇದನ್ನೂ ಓದಿ

BS Yediyurapap Resignation: ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿರುವ ಬಿ.ಎಸ್. ಯಡಿಯೂರಪ್ಪ

BJP ಸಾಧನಾ ಸಮಾವೇಶದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಕಣ್ಣೀರು

(Karnataka Ex CM BS Yediyurappa is facing Ashadha Masa Crisis in his life here is the examples)

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ