AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!

Veerappa Moily Retirement: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ಈ ಬಾರಿ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ವೀರಪ್ಪ ಮೊಯ್ಲಿ ಅವರು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡದಿರಲು ತೀರ್ಮಾನಿಸಿದ್ದಾರೆ.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಮಾಜಿ ಸಿಎಂ ವೀರಪ್ಪ ಮೊಯ್ಲಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 08, 2024 | 3:21 PM

ಚಿಕ್ಕಬಳ್ಳಾಪುರ, (ಏಪ್ರಿಲ್, 08): ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ(Veerappa Moily) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ವೀರಪ್ಪ ಮೊಯ್ಲಿ ಕೊಂಚ ನಿರಾಸೆಯಲ್ಲಿದ್ದರು. ಇದೀಗ ಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ವೀರಪ್ಪ ಮೊಯ್ಲಿ, ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ಟಿಕೆಟ್​​ ನೀಡಬೇಕೆಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಆದ್ರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮಾನವಿ ಮಾಡಿತ್ತು. ಹೈಕಮಾಂಡ್​​ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ. ನನ್ನ ಬೆಂಬಲಿಗರು ನಮ್ಮ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲಿಸಬೇಕೆಂದು ಕರೆ ನೀಡಿದರು. ಈ ಮೂಲಕ ಟಿಕೆಟ್​ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ವೀರಪ್ಪ ಮೊಯ್ಲಿ ಅಂತಿಮವಾಗಿ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಘೋಷಿಸಿದರು.

ವೀರಪ್ಪ ಮೊಯ್ಲಿ ರಾಜಕೀಯ ಹಾದಿ ಹೇಗಿತ್ತು?

  • 2012: ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ.
  • 2011–2012: ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಕ್ಯಾಬಿನೆಟ್ ಮಂತ್ರಿ
  • 2009–2011: ಕಾನೂನು ಮತ್ತು ನ್ಯಾಯದ ಕ್ಯಾಬಿನೆಟ್ ಮಂತ್ರಿ
  • 2006–2009: ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ OBC ಗಳಿಗೆ 27 ಪ್ರತಿಶತ ಮೀಸಲಾತಿಯ ಅನುಷ್ಠಾನಕ್ಕಾಗಿ ಉಸ್ತುವಾರಿ ಸಮಿತಿಯ ಅಧ್ಯಕ್ಷ.
  • 2002–2004: ಕಂದಾಯ ಸುಧಾರಣಾ ಆಯೋಗದ ಅಧ್ಯಕ್ಷರು
  • 2005–2009:2ನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು
  • 2000–2002: ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷರು
  • 1992–1994: ಕರ್ನಾಟಕದ ಮುಖ್ಯಮಂತ್ರಿ
  • 1989–1992: ಕಾನೂನು, ಯುವಜನ ಸೇವೆ, ಸಂಸ್ಕೃತಿ, ಮಾಹಿತಿ, ಸಂಸದೀಯ ವ್ಯವಹಾರಗಳು ಮತ್ತು ಶಿಕ್ಷಣ ಸಚಿವ
  • 1983–1985: ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ನಾಯಕ.
  • 1980–1982: ಕರ್ನಾಟಕ ಹಣಕಾಸು ಮತ್ತು ಯೋಜನಾ ಸಚಿವ.
  • 1974–1977: ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವ.

ವೀರಪ್ಪ ಮೊಯ್ಲಿ ರಾಜಕಾರಣದ ಜತೆಗೆ ಸಾಹಿತಿ

ವೀರಪ್ಪ ಮೊಯ್ಲಿಯವರು ಕೇವಲ ರಾಜಕಾರಣಿ ಅಲ್ಲ ಸಾಹಿತಿ ಸಹ ಆಗಿದ್ದಾರೆ. ಅವರ ಹೆಂಡತಿ ಮಾಲತಿ ಮೊಯ್ಲಿ ಸಹ ಲೇಖಕಿಯಾಗಿದ್ದಾರೆ. ಇನ್ನು ಮೊಯ್ಲಿಯವರ ಕೃತಿಗಳು ಯಾವುವು ಎನ್ನುವುದನ್ನು ನೋಡುವುದಾದರೆ.

ಕಾದಂಬರಿ: ಸುಳಿಗಾಳಿ, ಸಾಗರದೀಪ. ಕೊಟ್ಟ. ತೆಂಬರೆ ನಾಟಕಗಳು: ಮಿಲನ, ಪ್ರೇಮವೆಂದರೆ, ಪರಾಜಿತ. ಕವನ ಸಂಕಲನ: ಹಾಲು ಜೇನು, ಮತ್ತೆ ನಡೆಯಲಿ ಸಮರ, ಯಕ್ಷಪ್ರಶ್ನೆ ಜೊತೆಯಾಗಿ ನಡೆಯೋಣ ( ಮಾಲತಿ ಮೊಯಿಲಿಯವರ ಜೊತೆಯಲ್ಲಿ) ಮಹಾಕಾವ್ಯ: ಶ್ರೀರಾಮಾಯಣ ಮಹಾನ್ವೇಷಣಂ, ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ

ಪುರಸ್ಕಾರ

  • 2000ರಲ್ಲಿ ಮೊಯಿಲಿಯವರಿಗೆ ಅಲ್-ಅಮೀನ್ ಸದ್ಭಾವನಾ ಪ್ರಶಸ್ತಿ ಲಭಿಸಿದೆ.
  • 2001ರಲ್ಲಿ ಹಿಂದುಳಿದ ಹಾಗು ಅಲ್ಪಸಂಖ್ಯಾತ ವರ್ಗದವರ ಸುಧಾರಣೆಗಾಗಿ ಕೊಡಮಾಡುವ ದೇವರಾಜ ಅರಸ ಪ್ರಶಸ್ತಿ ಸಿಕ್ಕಿದೆ.
  • 2001ರ ಆರ್ಯಭಟ ಪುರಸ್ಕಾರ.
  • 2002ರಲ್ಲಿ ಗೊರೂರು ಪ್ರತಿಷ್ಠಾನದ ಸಮಗ್ರ ಸಾಹಿತ್ಯ ಪುರಸ್ಕಾರ ಲಭಿಸಿದೆ.
  • 2020 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ಶ್ರೀ ಬಾಹುಬಲಿ ಅಹಿಂಸಾದಿಗ್ವಿಜಯ ಮಹಾಕಾವ್ಯಕ್ಕೆ)

Published On - 2:51 pm, Mon, 8 April 24

ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ