ಆವಾಸ್ ಯೋಜನೆ ಅಡಿ ಕರ್ನಾಟಕದಲ್ಲಿ ಮನೆ ನಿರ್ಮಾಣ ಗುರಿ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವಿಜಯೇಂದ್ರ

ಕರ್ನಾಟಕಕ್ಕೆ 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಕುರಿತಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಆವಾಸ್ ಯೋಜನೆ ಅಡಿ ಕರ್ನಾಟಕದಲ್ಲಿ ಮನೆ ನಿರ್ಮಾಣ ಗುರಿ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವಿಜಯೇಂದ್ರ
ಆವಾಸ್ ಯೋಜನೆ ಅಡಿ ಕರ್ನಾಟಕದಲ್ಲಿ ಮನೆ ನಿರ್ಮಾಣ ಗುರಿ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ವಿಜಯೇಂದ್ರ

Updated on: Jan 18, 2025 | 9:20 PM

ಬೆಂಗಳೂರು, ಜನವರಿ 18: 2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awaas Yojana)  ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿ. ವೈ ವಿಜಯೇಂದ್ರ, ಈ ಹಿಂದೆ ನೀಡಲಾಗಿದ್ದ 2,26,175 ಮನೆಗಳ ನಿರ್ಮಾಣದ ಗುರಿಯ ಜೊತೆಗೆ ಹೆಚ್ಚುವರಿ 4,76,556 ಮನೆಗಳನ್ನು ನಿರ್ಮಿಸುವ ಉದ್ದೇಶವನ್ನು ಸಾಧಿಸಲು ಸರ್ವರಿಗೂ ಸೂರು ಕಲ್ಪಿಸುವ ಮಹತ್ವದ ಗುರಿ ತಲುಪುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಬಿ. ವೈ ವಿಜಯೇಂದ್ರ ಟ್ವೀಟ್​

ಈ ನಿರ್ಧಾರದಿಂದ ಗ್ರಾಮೀಣ ಕುಟುಂಬಗಳಿಗೆ ಅಗತ್ಯ ಸೌಕರ್ಯಗಳೊಂದಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಂಡು ನಾಡಿನ ಬಡವರ ಸ್ವಂತ ಸೂರು ಹೊಂದುವ ಕನಸುಗಳನ್ನು ಈಡೇರಿಸುತ್ತದೆ.

ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡಿ ಸಿದ್ದರಾಮಯ್ಯ ಸರ್ಕಾರ ಬಿಜೆಪಿ ಶಾಸಕರಿಗೆ ಉಪಕಾರವೇನೂ ಮಾಡಿಲ್ಲ: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಲಿ. ಸದರಿ ಯೋಜನೆಯು ನಾಡಿನ 7 ಲಕ್ಷ ಬಡ ಕುಟುಂಬಗಳಿಗೆ ಸದುಪಯೋಗವಾಗಲಿದ್ದು, ಸುಸಜ್ಜಿತ ಮನೆ ಹಾಗೂ ಮೂಲಸೌಕರ್ಯಗಳೊಂದಿಗೆ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us