AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ನಿಗಮ ಮಂಡಳಿಗೆ ಪದಾಧಿಕಾರಿಗಳ ನೇಮಕ: ಯಾರ್ಯಾರಿಗೆ ಜವಾಬ್ದಾರಿ?

ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಸೇರಿ 4 ನಿಗಮ ಮಂಡಳಿಗೆ ರಾಜ್ಯ ಸರ್ಕಾರ ಪದಾಧಿಕಾರಿಗಳ ಘೋಷಣೆ ಮಾಡಿದೆ. ಹೈಕಮಾಂಡ್​ ರವಾನಿಸಿದ್ದ ಪಟ್ಟಿಗೆ ತಮ್ಮದೇ ಆದ ಲೆಕ್ಕಾಚಾರದಲ್ಲಿ ಸರ್ಜರಿ ಮಾಡಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿಯ ಹಂಚಿಕೆ ಮಾಡಿದ್ದರೂ, ಸಾಕಷ್ಟು ಗೊಂದಲಗಳು ಮಾತ್ರ ಈ ವಿಚಾರದಲ್ಲಿ ಮುಂದುವರಿದಿವೆ.

4 ನಿಗಮ ಮಂಡಳಿಗೆ ಪದಾಧಿಕಾರಿಗಳ ನೇಮಕ: ಯಾರ್ಯಾರಿಗೆ ಜವಾಬ್ದಾರಿ?
4 ನಿಗಮ ಮಂಡಳಿಗೆ ಪದಾಧಿಕಾರಿಗಳ ನೇಮಕ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 30, 2025 | 3:00 PM

Share

ಬೆಂಗಳೂರು, ಸೆಪ್ಟೆಂಬರ್​ 30: 4 ನಿಗಮ ಮಂಡಳಿಗಳಿಗೆ ( Corporation Board ) ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಡ್ಯದ ಎಂ.ಎಸ್. ಆತ್ಮಾನಂದ , ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಜ್ಞಾನಮೂರ್ತಿ ಅವರನ್ನ ನೇಮಿಸಲಾಗಿದೆ. ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ವಿ. ರಾಮಪ್ರಸಾದ್ ಮತ್ತು ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಜಿ.ವಿ. ಬಾಲಾಜಿ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

BMTC ಅಧ್ಯಕ್ಷ ಸ್ಥಾನ ಬದಲು

ನಿನ್ನೆ 5 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಹೆಸರು ಘೋಷಣೆಯಾಗಿತ್ತು. ಅದರ ಜೊತೆಗೆ ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯಗೆ, ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಿ ಸರ್ಕಾರ ಆದೇಶಿಸಿತ್ತು. BMTC ಅಧ್ಯಕ್ಷರಾಗಿ ವಿ.ಎಸ್. ಆರಾಧ್ಯ ಅವರನ್ನ ನೇಮಕ ಮಾಡಲಾಗಿತ್ತು. ಇದರಿಂದಾಗಿ ಅದಗಾಲೇ ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ನಿಕೇತ್ ರಾಜ್ ಮೌರ್ಯಗೆ ಮುಜುಗರ ಉಂಟಾದ ಪ್ರಸಂಗವೂ ನಡೆದಿತ್ತು.

ಇದನ್ನೂ ಓದಿ: ನಿಗಮ ಮಂಡಳಿ ನೇಮಕದಲ್ಲಿ ಮತ್ತೆ ಗೊಂದಲ: ಅಧ್ಯಕ್ಷ-ಉಪಾಧ್ಯಕ್ಷರ ಅದಲು-ಬದಲು

ಕೊಟ್ಟ ಆಶ್ವಾಸನೆ ಉಳಿಸಿಕೊಂಡಿದ್ದ ಸಿಎಂ

ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದ ರಾಜು ಕಾಗೆ ಅವರನ್ನೂ ಹುದ್ದೆಯಿಂದ ಕೈಬಿಟ್ಟ ಬಗ್ಗೆ ಸುದ್ದಿಯಾಗಿ ಆರಂಭದಲ್ಲಿ ಒಂದಿಷ್ಟು ಗೊಂದಲಗಳು ಉಂಟಾಗಿದ್ದವು. ಎಐಸಿಸಿ ರವಾನಿಸಿದ್ದ ಪಟ್ಟಿಯಲ್ಲಿ NWKRTC ಅಧ್ಯಕ್ಷರಾಗಿ ಅರುಣ್‌ ಕುಮಾರ್‌ ಪಾಟೀಲ್‌ ಹೆಸರನ್ನು ಉಲ್ಲೇಖಿಸಲಾಗಿದ್ದ ಕಾರಣ, ರಾಜು ಕಾಗೆ ಸಿಎಂ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು. ಆ ವೇಳೆ ನಿಮ್ಮನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸೋದಾಗಿ ಸಿಎಂ ಆಶ್ವಾಸನೆ ನೀಡಿದ್ದರು. ಅದರಂತೆ ರಾಜು ಕಾಗೆ ಅವರನ್ನೇ ನಿಗಮದ ಅಧ್ಯಕ್ಷರಾಗಿ ಮುಂದುವರಿಸಲಾಗಿತ್ತು.

ಹೈಕಮಾಂಡ್​ ಕಳುಹಿಸಿದ್ದ ಲಿಸ್ಟ್ ಗೆ ತಮ್ಮದೇ ಆದ ಸರ್ಜರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ, AICC ಕಳುಹಿಸಿದ್ದ ಪಟ್ಟಿಯಲ್ಲಿ ಹೆಸರೇ ಇಲ್ಲದ ನಿಕೇತ್ ರಾಜ್ ಮೌರ್ಯ ಸೇರಿ ಕೆಲವರಿಗೆ ಮಣೆ ಹಾಕಿದ್ದರು. ಉಂಟಾಗಿರುವ ಗೊಂದಲಗಳಿಗೆ ಆ ಮೂಲಕ ತೆರೆ ಎಳೆಯುವ ಪ್ರಯತ್ನವನ್ನು ಮಾಡಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:59 pm, Tue, 30 September 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?