AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?

ರಾಜ್ಯದಲ್ಲಿ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ನಡುವೆ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ - 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿದ್ರೆ ಶಿಕ್ಷೆ ವಿಧಿಸಲು ಚಿಂತನೆ ನಡೆಸಲಾಗಿದೆ.

RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?
RSSಗೆ ಅಂಕುಶ
ಪ್ರಸನ್ನ ಗಾಂವ್ಕರ್​
| Updated By: ಪ್ರಸನ್ನ ಹೆಗಡೆ|

Updated on:Oct 16, 2025 | 1:04 PM

Share

ಬೆಂಗಳೂರು, ಅಕ್ಟೋಬರ್​ 16: ತೀವ್ರ ಆಕ್ಷೇಪದ ನಡುವೆಯೂ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರ ಸಂಬಂಧ ಹೊಸ ವಿಧೇಯಕ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ಇಲಾಖೆಯಿಂದ ಈಗಾಗಲೇ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿ RSS ಚಟುವಟಿಕೆಗಳನ್ನು ನಡೆಸಿದರೆ ಶಿಕ್ಷೆ ವಿಧಿಸಲು ಚಿಂತನೆ ನಡೆದಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಲಿದೆ.

ಹೊಸ ವಿಧೇಯಕದಲ್ಲಿ ಏನಿದೆ?

  • ಯಾವುದೇ ಧಾರ್ಮಿಕ, ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂಬ ನಿಯಮ
  • ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿಗೆ ಅನುಮತಿ ನೀಡುವ ಅಧಿಕಾರ
  • ನಿಯಮ ಮೀರಿ ಚಟುವಟಿಕೆ ನಡೆಸಿದರೆ ಎರಡು ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ
  • ಎರಡನೇ ಬಾರಿ ನಿಯಮ ಮೀರಿದ್ರೆ ಮೂರು ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
  • ಇದಕ್ಕೂ ಮೀರಿ ಮುಂದುವರೆದರೆ ಪ್ರತೀ ದಿನ 5 ಸಾವಿರ ರೂ. ದಂಡ ವಿಧಿಸುವ ನಿಯಮ

ಇದನ್ನೂ ಓದಿ: ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ಹಾಕಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

‘ಪ್ರಿಯಾಂಕ್ ಖರ್ಗೆ ಬಲಿಪಶು’

RSS ಚಟುವಟಿಕೆಯಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ವಿಚಾರವಾಗಿ ವಿಪಕ್ಷ ನಾಯಕ ಆರ್​.ಅಶೋಕ್​ ಕಿಡಿ ಕಾರಿದ್ದಾರೆ. ಈ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಯನ್ನು ಬಲಿಪಶು ಮಾಡಲಾಗುತ್ತಿದ್ದು, ಇದು ಸಿಎಂ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ನಾಟಕ. ಪ್ರಿಯಾಂಕ್ ಪತ್ರದ ಆಧಾರದಲ್ಲಿ ನಾನು ಕೂಡ ಸರ್ಕಾರಿ ನೌಕರ. ಮೊನ್ನೆಯಷ್ಟೇ ನಾನು ಗಣವೇಷಧಾರಿಯಾಗಿ ಹೋಗಿದ್ದೇನೆ. ನನ್ನನ್ನು ಯಾವಾಗ ಕಳುಹಿಸುತ್ತೀಯಪ್ಪ, ಆ ತಾಕತ್ ಇದೆಯಾ? ಎಂದು ಅಶೋಕ್​ ಪ್ರಶ್ನಿಸಿದ್ದಾರೆ.

‘ಐ ಲವ್ RSS’ ಅಭಿಯಾನ

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ನಿರ್ಬಂಧ ವಿಧಿಸುವ ಸರ್ಕಾರದ ಚಿಂತನ ವಿರೋಧಿಸಿ ಹಿಂದೂ ಪರ ಕಾರ್ಯಕರ್ತರಿಂದ ಮೈಸೂರಿನ ಚೆಲುವಾಂಬ ಪಾರ್ಕ್​ ನಲ್ಲಿ ‘ಐ ಲವ್ RSS’ ಅಭಿಯಾನ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:58 pm, Thu, 16 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!