AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಂತೂ ಇಲ್ಲ; ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನೇನು?

Karnataka BJP: ಮೂಲ ಬಿಜೆಪಿ ಸಚಿವರ ಕೈಬಿಡುವ ಬಗ್ಗೆ ವರಿಷ್ಠರ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಸಂಪುಟ ಪುನಾರಚನೆ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸ್ಥಾನ ಸಿಗುವುದು ಬಹುತೇಕ ನಿಶ್ಚಿತ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಂತೂ ಇಲ್ಲ; ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಏನೇನು?
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Jan 10, 2022 | 4:19 PM

Share

ಬೆಂಗಳೂರು: ಕರ್ನಾಟಕ ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯದಲ್ಲಂತೂ ನಡೆಯುವುದಿಲ್ಲ ಎಂಬ ಬಗ್ಗೆ ತಿಳಿದುಬಂದಿದೆ. ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 5 ರಾಜ್ಯಗಳ ವಿಧಾನಸಭಾ ಚುನಾವಣೆ ಬಳಿಕವೇ ಸಂಪುಟ ಪುನಾರಚನೆಗೆ ಚಾಲನೆ ನೀಡಲಾಗುವುದು. ಪಂಚರಾಜ್ಯಗಳ ಚುನಾವಣೆ ನಡೆದ ಬಳಿಕವಷ್ಟೇ ಕರ್ನಾಟಕ ರಾಜ್ಯದ ಚಟುವಟಿಕೆಗಳಿಗೆ ಚಾಲನೆ ಎಂದು ಹೈಕಮಾಂಡ್ ಹೇಳಿದೆ ಎಂಬ ಬಗ್ಗೆ ತಿಳಿದುಬಂದಿದೆ. ಮಾರ್ಚ್ 10ರವರೆಗೂ ಯಾವುದೇ ಚರ್ಚೆ ಇಲ್ಲ ಎಂದು ತಿಳಿಸಲಾಗಿದೆ.

ರಾಜ್ಯ ಬಿಜೆಪಿ ಘಟಕಕ್ಕೆ ಶುಕ್ರವಾರ ಹೈಕಮಾಂಡ್ ಈ ವಿಚಾರ ಸ್ಪಷ್ಟಪಡಿಸಿದೆ ಎಂದು ತಿಳಿದುಬಂದಿದೆ. ಖಾಲಿ ಇರುವ 4 ಸಚಿವ ಸ್ಥಾನಗಳ ಜೊತೆ, ಹಾಲಿ ಸಚಿವರ ಪೈಕಿ 2-3 ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ವಲಸಿಗ ಸಚಿವರ ಬದಲಾಗಿ ಮೂಲ ಬಿಜೆಪಿ ಸಚಿವರನ್ನು ಕೈಬಿಡುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಮೂಲ ಬಿಜೆಪಿ ಸಚಿವರ ಕೈಬಿಡುವ ಬಗ್ಗೆ ವರಿಷ್ಠರ ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಸಂಪುಟ ಪುನಾರಚನೆ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸ್ಥಾನ ಸಿಗುವುದು ಬಹುತೇಕ ನಿಶ್ಚಿತ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ನಾಳೆಯಿಂದ 3 ದಿನ ಸಿಎಂ ಕಾಮಗಾರಿಗಳ ಪರಿಶೀಲನಾ ಸಭೆ

ನಾಳೆಯಿಂದ 3 ದಿನ ಸಿಎಂ ಬಸವರಾಜ ಬೊಮ್ಮಾಯಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬೆಂಗಳೂರು ಜಲ ಮಂಡಳಿಯ ಕಾವೇರಿ ಕಾಮಗಾರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಯಶವಂತಪುರ, ಗೋವಿಂದರಾಜನಗರ, ಬೊಮ್ಮನಹಳ್ಳಿ, ಮಲ್ಲೇಶ್ವರಂ, ಕೆ.ಆರ್. ಪುರಂ, ಮಹದೇವಪುರ, ಬಸವನಗುಡಿ, ಚಿಕ್ಕಪೇಟೆ, ಸಿ.ವಿ. ರಾಮನ್​​ನಗರ ಕ್ಷೇತ್ರದ ಕಾಮಗಾರಿ ಪರಿಶೀಲನೆ ಮಾಡಲಿದ್ದಾರೆ.

ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ‌ಆರೋಗ್ಯ ಸಚಿವ ಡಾ. ಸುಧಾಕರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಯೋಜನಾ ಇಲಾಖೆ ಎಸಿಎಸ್ ಶಾಲಿನಿ ರಜನೀಶ್, ಡಿಪಿಎಆರ್ ಕಾರ್ಯದರ್ಶಿ ಹೇಮಲತಾ, ಡಿಪಿಎಆರ್ (ಆಡಳಿತ ಸುಧಾರಣೆ) ಕಾರ್ಯದರ್ಶಿ ಮನೀಶ್ ಮೌದ್ಗಿಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ತೊರೆದ ಗೋವಾ ಸಚಿವ ಮೈಕೆಲ್ ಲೋಬೊ, ಕಾಂಗ್ರೆಸ್ ಸೇರುವ ನಿರೀಕ್ಷೆ

ಇದನ್ನೂ ಓದಿ: Assembly Elections 2022: ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಪಂಚರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ

Published On - 4:19 pm, Mon, 10 January 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ