AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ

ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ.

ಮುಖ್ಯಮಂತ್ರಿ ಕಚೇರಿಯಿಂದ ಯಡಿಯೂರಪ್ಪ ತಂಡ ಹೊರಕ್ಕೆ: ವಿಶೇಷ ಅಧಿಕಾರಿಗಳ ಕಾರ್ಯಮುಕ್ತಿ ಆದೇಶ ಪ್ರಕಟ
ವಿಧಾನಸೌಧ
TV9 Web
| Edited By: |

Updated on: Aug 01, 2021 | 6:15 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್​ ಆದೇಶ ಹೊರಡಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಎ.ಲೋಕೇಶ್, ಎಚ್​.ಎಸ್.ಸತೀಶ್, ಟಿ.ಎಂ.ಸುರೇಶ್, ಅರುಣ್​ ಕುಮಾರ್ ಹಡಗಲಿ, ಅರುಣ್ ಪುರ್ಟಾಡೋ, ಕೆ.ಎಸ್.ಕಿರಣ್​ಕುಮಾರ್, ಕೆ.ರಾಜಪ್ಪ, ಆರ್.ಕೆ.ಮಹೇಶ್, ಎಸ್.ನಾಗರಾಜಯ್ಯ, ಎಸ್.ರಮೇಶ್, ಎಸ್.ಶಾಂತಾರಾಮ್, ಗಣೇಶ್ ಯಾಜಿ, ಎಸ್.ಎ.ಅಂಗಡಿ, ಎ.ಆರ್.ರವಿ, ಕೆ.ಗಂಗಯ್ಯ, ಜಿ.ಎಸ್.ಸುನಿಲ್. ಪ್ರೊ.ಕೆ.ಜಿ.ಲೋಕೇಶ್, ಡಾ.ಆರ್.ಎಂ.ರಂಗನಾಥ್ ಅವರನ್ನು ಕಾರ್ಯಮುಕ್ತಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದಿಢೀರ್‌ ದೆಹಲಿಗೆ ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದಿಢೀರ್‌ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನಿಂದ ಬುಲಾವ್‌ ಹಿನ್ನೆಲೆಯಲ್ಲಿ ಸಿಎಂ ಇಂದು (ಆಗಸ್ಟ್ 1) ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಯಾಗಿ ಕರ್ನಾಟಕ ಸಚಿವ ಸಂಪುಟ ಅಂತಿಮಗೊಳಿಸುತ್ತೇವೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ತೆರಳಿದ್ದಾರೆ. ವರಿಷ್ಠರಿಂದ ಒಪ್ಪಿಗೆ ಪಡೆದು ನಾಳೆಯೇ ಸಿಎಂ ವಾಪಸ್ ಆಗಲಿದ್ದಾರೆ. ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆ ಎಂಬ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಒಂದೆಡೆ, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ, ಪಕ್ಷದ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ ಎಂಬ ಕುರಿತು ಮಾಹಿತಿ ಲಭ್ಯವಾಗಿದೆ.

(Karnataka govt removes bs Yediyurappa team from chief ministers office)

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ಬೆಂಬಲ ನೀಡುತ್ತೇವೆ: ಮಾಜಿ ಪ್ರಧಾನಿ ದೇವೇಗೌಡ ಅಭಯ

ಇದನ್ನೂ ಓದಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ