AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಆರೋಪ

ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಯ ನಷ್ಟವನ್ನು ಭರಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಯೋಜಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸರ್ಕಾರವು ಸಾರಿಗೆ ಇಲಾಖೆಯ 7154 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂಬ ಆರೋಪವನ್ನೂ ಬಿಜೆಪಿ ಮಾಡಿದೆ. ಇಂಧನ, ಸಿಬ್ಬಂದಿ ವೇತನ ಮುಂತಾದ ಹೆಚ್ಚುವರಿ ಹೊರೆಯಿಂದಾಗಿ ಸಾರಿಗೆ ನಿಗಮಕ್ಕೆ ಭಾರಿ ನಷ್ಟವಾಗುತ್ತಿದೆ ಎಂದು ಬಿಜೆಪಿ ಹೇಳಿದೆ. ಸಾರಿಗೆ ನಿಗಮದ ಭೂಮಿಯನ್ನು ಮಾರಾಟ ಮಾಡುವ ಯೋಜನೆಯನ್ನು ವಿರೋಧಿಸಲಾಗುತ್ತಿದೆ.

ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಆರೋಪ
ಬಿಜೆಪಿ, ಕೆಎಸ್​ಆರ್​ಟಿಸಿ
ಪ್ರಸನ್ನ ಗಾಂವ್ಕರ್​
| Edited By: |

Updated on:Dec 03, 2024 | 10:26 AM

Share

ಬೆಂಗಳೂರು, ಡಿಸೆಂಬರ್​ 03: ಗ್ಯಾರಂಟಿ (Guarantee) ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ (Karnataka Government) ಸಾರಿಗೆ ಇಲಾಖೆಯ (Transport Department) ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ (BJP) ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ 7154 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. 2023-24ರ ಸಾಲಿನ ಶಕ್ತಿಯೋಜನೆಯಡಿಯ 1480 ಕೋಟಿ ರೂ., 2024-25ರ ಸಾಲಿನಲ್ಲಿ ಶಕ್ತಿಯೋಜನೆಯಡಿ 360 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ, ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಭವಿಷ್ಯನಿಧಿ, ನಿವೃತ್ತ ನೌಕರರ ಬಾಕಿ, ಇಂಧನ, ಸಾಲದ ಬಾಕಿ ಮತ್ತು ಇತರೆ ಬಿಲ್‌ಗಳ ಬಾಕಿ ಸೇರಿದಂತೆ 5614 ಕೋಟಿ ರೂ, ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಬಾಗಲಕೋಟೆ ಕ್ಷೀರ ಭಾಗ್ಯ ಹಗರಣ: 127 ಮುಖ್ಯೋಪಾಧ್ಯಾಯರಿಗೆ ನೋಟಿಸ್

ಅಗಸ್ಟ್‌ 19ರಂದು ಶಾಲಿನಿರಜಿನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಆರ್ಥಿಕ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಗಿತ್ತು. ಇಂಧನ ವೆಚ್ಚವೇ ಪ್ರತಿ ದಿನಕ್ಕೆ 9.5 ಕೋಟಿ ರೂ. ಭರಿಸಲಾಗುತ್ತಿದೆ. ಸಿಬ್ಬಂದಿ ವೇತನ ಸೇರಿ 3650 ಕೋಟಿ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೇ 15ರಷ್ಟು ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾಪವನೆ ಸಲ್ಲಿಸಲು ಶಾಲಿನಿ ಅವರು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ದರ ಹೆಚ್ಟಳ ಮಾಡಿದರೂ 1800 ಕೋಟಿ ರೂ. ನಿಗಮಕ್ಕೆ ನಷ್ಟವಾಗಲಿದೆ. ಹೀಗಾಗಿ ನಿಗಮದ 200 ಎಕರೆ ಭೂಮಿ ಲಭ್ಯವಿದ್ದು, ಆದಾಯ ಕೃಢೀಕರಣಕ್ಕೆ ಶಾಲಿನಿ ರಜಿನೀಶ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಶಾಲಿನಿ ರಜಿನೀಶ್ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಖಾಸಗಿಗಳಿಗೆ ನಿಗಮದ ಭೂಮಿ ಮಾರಾಟದ ಆರೋಪ ಕೇಳಿ ಬಂದಿದೆ. ನಿಗಮದ ಭೂಮಿಯನ್ನ ಆದಾಯ ಕ್ರೋಢೀಕರಣಕ್ಕೆ ಬಳಸಲು ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Tue, 3 December 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ