Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಆರೋಪ

ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಯ ನಷ್ಟವನ್ನು ಭರಿಸಲು ಸಾರಿಗೆ ಇಲಾಖೆಯ ಆಸ್ತಿಗಳನ್ನು ಮಾರಾಟ ಮಾಡಲು ಯೋಜಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸರ್ಕಾರವು ಸಾರಿಗೆ ಇಲಾಖೆಯ 7154 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂಬ ಆರೋಪವನ್ನೂ ಬಿಜೆಪಿ ಮಾಡಿದೆ. ಇಂಧನ, ಸಿಬ್ಬಂದಿ ವೇತನ ಮುಂತಾದ ಹೆಚ್ಚುವರಿ ಹೊರೆಯಿಂದಾಗಿ ಸಾರಿಗೆ ನಿಗಮಕ್ಕೆ ಭಾರಿ ನಷ್ಟವಾಗುತ್ತಿದೆ ಎಂದು ಬಿಜೆಪಿ ಹೇಳಿದೆ. ಸಾರಿಗೆ ನಿಗಮದ ಭೂಮಿಯನ್ನು ಮಾರಾಟ ಮಾಡುವ ಯೋಜನೆಯನ್ನು ವಿರೋಧಿಸಲಾಗುತ್ತಿದೆ.

ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ: ಬಿಜೆಪಿ ಆರೋಪ
ಬಿಜೆಪಿ, ಕೆಎಸ್​ಆರ್​ಟಿಸಿ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Dec 03, 2024 | 10:26 AM

ಬೆಂಗಳೂರು, ಡಿಸೆಂಬರ್​ 03: ಗ್ಯಾರಂಟಿ (Guarantee) ನಷ್ಟವನ್ನು ಭರಿಸಲು ಕರ್ನಾಟಕ ಸರ್ಕಾರ (Karnataka Government) ಸಾರಿಗೆ ಇಲಾಖೆಯ (Transport Department) ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಬಿಜೆಪಿ (BJP) ಆರೋಪ ಮಾಡಿದೆ. ಸಾರಿಗೆ ಇಲಾಖೆಗೆ ನೀಡಬೇಕಾದ 7154 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. 2023-24ರ ಸಾಲಿನ ಶಕ್ತಿಯೋಜನೆಯಡಿಯ 1480 ಕೋಟಿ ರೂ., 2024-25ರ ಸಾಲಿನಲ್ಲಿ ಶಕ್ತಿಯೋಜನೆಯಡಿ 360 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ, ರಾಜ್ಯ ಸರ್ಕಾರ ಗ್ಯಾರಂಟಿಗಾಗಿ ಸಾರಿಗೆ ನಿಗಮವನ್ನ ಮಾರಟಕ್ಕಿಟ್ಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಭವಿಷ್ಯನಿಧಿ, ನಿವೃತ್ತ ನೌಕರರ ಬಾಕಿ, ಇಂಧನ, ಸಾಲದ ಬಾಕಿ ಮತ್ತು ಇತರೆ ಬಿಲ್‌ಗಳ ಬಾಕಿ ಸೇರಿದಂತೆ 5614 ಕೋಟಿ ರೂ, ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿ: ಬಾಗಲಕೋಟೆ ಕ್ಷೀರ ಭಾಗ್ಯ ಹಗರಣ: 127 ಮುಖ್ಯೋಪಾಧ್ಯಾಯರಿಗೆ ನೋಟಿಸ್

ಅಗಸ್ಟ್‌ 19ರಂದು ಶಾಲಿನಿರಜಿನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಆರ್ಥಿಕ ವ್ಯವಸ್ಥೆಗಳ ಬಗ್ಗೆ ಚರ್ಚಿಸಲಾಗಿತ್ತು. ಇಂಧನ ವೆಚ್ಚವೇ ಪ್ರತಿ ದಿನಕ್ಕೆ 9.5 ಕೋಟಿ ರೂ. ಭರಿಸಲಾಗುತ್ತಿದೆ. ಸಿಬ್ಬಂದಿ ವೇತನ ಸೇರಿ 3650 ಕೋಟಿ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶೇ 15ರಷ್ಟು ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾಪವನೆ ಸಲ್ಲಿಸಲು ಶಾಲಿನಿ ಅವರು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ.

ದರ ಹೆಚ್ಟಳ ಮಾಡಿದರೂ 1800 ಕೋಟಿ ರೂ. ನಿಗಮಕ್ಕೆ ನಷ್ಟವಾಗಲಿದೆ. ಹೀಗಾಗಿ ನಿಗಮದ 200 ಎಕರೆ ಭೂಮಿ ಲಭ್ಯವಿದ್ದು, ಆದಾಯ ಕೃಢೀಕರಣಕ್ಕೆ ಶಾಲಿನಿ ರಜಿನೀಶ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಶಾಲಿನಿ ರಜಿನೀಶ್ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಖಾಸಗಿಗಳಿಗೆ ನಿಗಮದ ಭೂಮಿ ಮಾರಾಟದ ಆರೋಪ ಕೇಳಿ ಬಂದಿದೆ. ನಿಗಮದ ಭೂಮಿಯನ್ನ ಆದಾಯ ಕ್ರೋಢೀಕರಣಕ್ಕೆ ಬಳಸಲು ವಿರೋಧ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Tue, 3 December 24

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ