AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಕಬಳಿಕೆ ಪ್ರಕರಣ: ಸಚಿವ ಬೈರತಿ ಬಸವರಾಜ್​ಗೆ​ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ವಿರುದ್ಧ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಭೂ ಕಬಳಿಕೆ ಪ್ರಕರಣ: ಸಚಿವ ಬೈರತಿ ಬಸವರಾಜ್​ಗೆ​ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್
ಭೈರತಿ ಬಸವರಾಜ್
TV9 Web
| Edited By: |

Updated on:Sep 30, 2022 | 3:56 PM

Share

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಆರೋಪ ಪ್ರಕರಣದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ಗೆ ಹೈಕೋರ್ಟ್ ಬಿಗ್​ ರಿಲೀಫ್ ನೀಡಿದೆ.

ಬೈರತಿ ಬಸವರಾಜ್​ ವಿರುದ್ಧದ ಕ್ರಿಮಿನಲ್  ಪ್ರಕರಣವನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಇಂದು(ಸೆಪ್ಟೆಂಬರ್.30) ಆದೇಶ ಹೊರಡಿಸಿದೆ. ಇದು ಸಿವಿಲ್ ವ್ಯಾಜ್ಯವಾಗಿರುವ ಹಿನ್ನೆಲೆಯಲ್ಲಿ ಮಿನಲ್ ಪ್ರಕರಣ ರದ್ದುಪಡಿಸಿ ನ್ಯಾ.ಸುನೀಲ್ ದತ್ ಯಾದವ್ ಏಕ ಸದಸ್ಯ ಪೀಠ ಆದೇಶಿಸಿದೆ. ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ವಿರುದ್ಧ ಮಾದಪ್ಪ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: 18 ವರ್ಷಗಳ ಹಿಂದಿನ ಘಟನೆ ಪ್ರಸ್ತಾಪಿಸಿ ನನ್ನ ಚಾರಿತ್ರ್ಯ ವಧೆ: ಭೈರತಿ ಬಸವರಾಜ್

ಈ ಪ್ರಕರಣವನ್ನು ರದ್ದು ಕೋರಿ ಬೈರತಿ ಬಸವರಾಜ್ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಬೈರತಿ ಬಸವರಾಜ್​ ವಿರುದ್ಧದ ಕ್ರಿಮಿನಲ್ ಪ್ರಕರಣ ಪ್ರಕರಣವನ್ನು ರದ್ದು ಮಾಡಿ ಆದೇಶಿಸಿದೆ. ಇದಿರಂದ ಬೈರತಿ ಬಸವರಾಜ್​ ನಿಟ್ಟುಸಿರುವ ಬಿಡುವಂತಾಗಿದೆ.

ರಾಜೀನಾಮೆಗೆ ಆಗ್ರಹಿಸಿದ್ದ ಕಾಂಗ್ರೆಸ್

ಹೌದು…ಈ ಹಿಂದೆ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬೆಳಗಾವಿ ಕಲಾಪದಲ್ಲಿ ಕಾಂಗ್ರೆಸ್​ ನಿಲುವಳಿ ಮಂಡಿಸಲು ತೀರ್ಮಾನಿಸಿತ್ತು. ಅಲ್ಲದೇ ಈ ಬಗ್ಗೆ ಚರ್ಚೆ ಮಾಡಲು ಅವಕಾಶ ಕೋರಿತ್ತು, ಆದ್ರೆ, ಸ್ಪೀಕರ್ ಅವಕಾಶ ನೀಡಿರಲಿಲ್ಲ, ಇದರಿಂದ ಕಾಂಗ್ರೆಸ್ ಸದನದಲ್ಲಿ ಭಾರೀ ಸದ್ದು-ಗದ್ದಲ ಮಾಡಿತ್ತು. ಅಲ್ಲದೇ ಕಲಾಪ ಬಹಿಷ್ಕರಿಸಿತ್ತು.

ಬೈರತಿ ಬಸವರಾಜ್‌ ಪರ ನಿಂತಿದ್ದ ಕುಟುಂಬಸ್ಥರು

ಬೈರತಿ ಬಸವರಾಜ್ ಅವರ ರಾಜೀನಾಮೆಗೆ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಮಾಡಿತ್ತು. ಆದ್ರೆ, ಜಮೀನು ಮಾರಾಟ ಮಾಡಿದ್ದ ಅಣ್ಣಯ್ಯಪ್ಪ ಕುಟುಂಬ ಬೈರತಿ ಬಸವರಾಜ್ ಬೆಂಬಲಕ್ಕೆ ನಿಂತಿತ್ತು. 2002-03ರಲ್ಲಿ ಕಲ್ಕೆರೆಯ ಜಮೀನನ್ನು ಬೈರತಿ ಬಸವರಾಜ್ ಅವರಿಗೆ ಮಾರಾಟ ಮಾಡಿದ್ದೇವೆ. ಸಚಿವ ಭೈರತಿ ಬಸವರಾಜ ಅನ್ಯಾಯ ಮಾಡಿಲ್ಲ. ನಮ್ಮ ಕುಟುಂಬವನ್ನ ರಸ್ತೆಗಿಳಿಸುವ ಕೆಲಸ ಕಾಂಗ್ರೆಸ್‌ನಿಂದ ಆಗುತ್ತಿದೆ. ನ್ಯಾಯಯುತವಾಗಿ ಹಣಕೊಟ್ಟು ಜಮೀನು‌ ಖರೀದಿ ಮಾಡಿದ್ದಾರೆ ಎಂದು ಅಣ್ಣಯ್ಯಪ್ಪ ಕುಟುಂಬ ಹೇಳಿಕೆ ಕೊಟ್ಟಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Fri, 30 September 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ