AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಲಿದ್ದಾರೆ ಹೆಚ್​​ಡಿ ಕುಮಾರಸ್ವಾಮಿ; ಕಾರಣ ಇಲ್ಲಿದೆ

ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ತೆರಳಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಲಿದ್ದಾರೆ ಹೆಚ್​​ಡಿ ಕುಮಾರಸ್ವಾಮಿ; ಕಾರಣ ಇಲ್ಲಿದೆ
ಮಮತಾ ಬ್ಯಾನರ್ಜಿ ಹಾಗೂ ಹೆಚ್​ಡಿ ಕುಮಾರಸ್ವಾಮಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Mar 22, 2023 | 9:25 PM

Share

ಕೋಲ್ಕತ್ತ: ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ತೆರಳಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಳೆದ ವಾರವಷ್ಟೇ ಮಮತಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕುಮಾರಸ್ವಾಮಿ ಅವರು ಭವಾನಿಪುರದಲ್ಲಿರುವ ಮಮತಾ ಅವರ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿಯೇ ಮಾತುಕತೆ ನಿಗದಿಯಾಗಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಮೂಲಗಳು ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿವೆ. ದೇಶದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ದಾರಿಗಳ ಬಗ್ಗೆಯೂ ಮಾತುಕತೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್ಸೇತರ ಹಾಗೂ ಬಿಜೆಪಿಯೇತರ ಪ್ರಾದೇಶಿಕ ಪಕ್ಷಗಳಲ್ಲಿ ಒಮ್ಮತ ರೂಪಿಸುವ ತಂತ್ರಗಾರಿಕೆಯ ಭಾಗವಾಗಿ ಈ ಮಾತುಕತೆಗಳು ನಡೆಯುತ್ತಿದೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

2019 ರ ಲೋಕಸಭೆ ಚುನಾವಣೆಗೂ ಮುನ್ನ 2019 ರ ಜನವರಿಯಲ್ಲಿ ಮಮತಾ ಬ್ಯಾನರ್ಜಿ ಅವರು ಕರೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು. ಬಿಜೆಪಿಯೇತರ, ಕಾಂಗ್ರೆಸ್ಸೇತರ ನಾಯಕರ ಜತೆ ಇತ್ತೀಚೆಗೆ ಮಮತಾ ಅವರ ನಡೆಸುತ್ತಿರುವ ನಾಲ್ಕನೇ ಮಾತುಕತೆಯಾಗಲಿದೆ ಶುಕ್ರವಾರದ ಭೇಟಿ ಎಂದು ಟಿಎಂಸಿ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸೋಲುವಂತಾಗಲು ಅವರ ಪಕ್ಷದವರೇ ಒಂದು ಷಡ್ಯಂತ್ರ ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಮಮತಾ ಬ್ಯಾನರ್ಜಿ ಅವರು ಗುರುವಾರ ಒಡಿಶಾಕ್ಕೆ ತೆರಳಲಿದ್ದು, ಅಲ್ಲಿನ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಲಿದ್ದಾರೆ.

ಕಳೆದ ವಾರ ಅಖಿಲೇಶ್ ಯಾದವ್ ಮತ್ತು ಮಮತಾ ಬ್ಯಾನರ್ಜಿ ನಡುವಣ ಮಾತುಕತೆಯ ನಂತರ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಸಮಾನ ಅಂತರವನ್ನು ಕಾಯ್ದುಕೊಳ್ಳುವುದಾಗಿ ಸಮಾಜವಾದಿ ಪಕ್ಷ ಮತ್ತು ಟಿಎಂಸಿ ಹೇಳಿದ್ದವು. ಜತೆಗೆ, ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ನಿಟ್ಟಿನಲ್ಲಿ ಶ್ರಮಿಸುವುದಾಗಿಯೂ ಹೇಳಿದ್ದವು.

ಈ ಮಧ್ಯೆ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಹಾಗೂ ಕುಮಾರಸ್ವಾಮಿ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಚುನಾವಣಾ ಪ್ರಚಾರದ ಭರಾಟೆಯ ನಡುವೆಯೂ ಬಿಡುವುದ ಮಾಡಿಕೊಂಡು ಕುಮಾರಸ್ವಾಮಿ ಪಶ್ಚಿಮ ಬಂಗಾಳಕ್ಕೆ ತೆರಳಿ ಮಮತಾ ಬ್ಯಾನರ್ಜಿ ಜತೆ ಮಾತುಕತೆ ನಡೆಸಲಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು