AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ, ಸಮಲತಾ ಬಗ್ಗೆ ಅಚ್ಚರಿ ಹೇಳಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ರಾಜಕೀಯ ಕಾರ್ಯತಂತ್ರಗಳನ್ನು ರೂಪಿಸಲು ಹಾಗೂ ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆ ನಡೆಸಲು ರೆಸಾರ್ಟ್ ಮೊರೆ ಹೋಗಿದ್ದಾರೆ. ಅಲ್ಲದೇ ರಾಜಕೀಯ ಬದ್ಧ ವೈರಿ ಸುಮಲತಾ ಅಂಬರೀಶ್​ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಇಂದಿನಿಂದ ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ, ಸಮಲತಾ ಬಗ್ಗೆ ಅಚ್ಚರಿ ಹೇಳಿಕೆ
ಸುಮಲತಾ-ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on:Jan 09, 2024 | 5:23 PM

Share

ಚಿಕ್ಕಮಗಳೂರು, (ಡಿಸೆಂಬರ್ 09): ಲೋಕಸಭೆ ಚುನಾವಣೆ (Loksabha Elections 2024) ಹತ್ತಿರವಾಗುತ್ತಿದ್ದಂತೆಯೇ ಎನ್​ಡಿಎ ಮೈತ್ರಿ ಪಕ್ಷದವಾದ ಜೆಡಿಎಸ್​ನಲ್ಲಿ(JDS) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲಿ ಮೈತ್ರಿ ಗೆಲ್ಲಬೇಕೆಂದು ಜೆಡಿಎಸ್​ ನಾಯಕರಿಗೆ ಬಿಜೆಪಿ ಹೈಕಮಾಂಡ್​ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈಗಿನಿಂದಲೇ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದಕ್ಕಾಗಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಇಂದಿನಿಂದ ಮೂರು ದಿನಗಳ ರೆಸಾರ್ಟ್ ರಾಜಕೀಯ ಮಾಡಲಿದ್ದಾರೆ.

ಹೌದು…ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆ ರಾಜಕೀಯ ಚರ್ಚೆ ಮಾಡಲು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಸಮೀಪದ ಹನಿ ಡ್ಯೂ ರೆಸಾರ್ಟ್​ನಲ್ಲಿ 10 ರೂಮ್​ಗಳನ್ನು ಬುಕ್​ ಮಾಡಿದ್ದು, ಇಂದಿನಿಂದ ಕುಮಾರಸ್ವಾಮಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಪ್ರಮುಖವಾಗಿ ಜೆಡಿಎಸ್​ಗೆ ಸಿಗುವ ಕ್ಷೇತ್ರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಹೆಚ್ಚು ತೆಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಮಂಡ್ಯ ರಾಜಕೀಯದ ಬಗ್ಗೆ ಚರ್ಚಿಸಲು ಜಿಲ್ಲೆಯ ಜೆಡಿಎಸ್​ ನಾಯಕರಿಗೆ ಬುಲಾವ್ ನೀಡಿದ್ದು, ಒಂದು ವೇಳೆ ಬಿಜೆಪಿ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟರೆ ಯಾರನ್ನು ಕಣಕ್ಕಳಿಸಬೇಕು. ಒಂದು ವೇಳೆ ಬಿಜೆಪಿ ಸುಮಲತಾ ಅವರನ್ನು ಅಖಾಡಕ್ಕಿಳಿಸಿದರೆ ಏನು ಮಾಡಬೇಕೆಂದು ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಸುಮಲತಾ ಅಂಬರೀಶ್​ ಮತ್ತೆ ಮಂಡ್ಯದಿಂದಲೇ ಸ್ಪರ್ಧೆ: ಆಪ್ತ ಹನಕೆರೆ ಶಶಿಕುಮಾರ್

ಇನ್ನು ಈ ಬಗ್ಗೆ ಹಾಸನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಎಂಪಿ ಚುನಾವಣೆಯಲ್ಲಿ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು. ಈ ಕಾರಣಕ್ಕೆ ಯಾರನ್ನು ಬೇಕಾದ್ರೂ ಭೇಟಿಯಾಗಲು ತಯಾರಿದ್ದೇನೆ. ಅಗತ್ಯಬಿದ್ದರೆ ಸಂಸದೆ ಸುಮಲತಾ ಅಂಬರೀಶ್​ರನ್ನು ಭೇಟಿ ಮಾಡುತ್ತೇನೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಮೂಲಕ ಎಲ್ಲಾವನ್ನೂ ಮರೆತು ರಾಜಕೀಯ ಬದ್ಧ ವೈರಿ ಸುಮಲತಾ ಅಂಬರೀಶ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಇನ್ನು ಮಂಡ್ಯ ಕ್ಷೇತ್ರವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಸುಮಲತಾರನ್ನು ಮನವೊಲಿಸುವ ತಂತ್ರ ಸಹ ಕುಮಾರಸ್ವಾಮಿಯವರದ್ದಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಎನ್​ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಪಣತೊಟ್ಟಿದೆ. ಹೀಗಾಗಿ ಕುಮಾರಸ್ವಾಮಿ ಈಗಿನಿಂದಲೇ ಲೋಕಸಭಾ ಚುನಾವಣೆಗೆ ಬೇಕಾಗುವ ತಂತ್ರಗಳನ್ನು ಹೆಣೆಯಲು ರೆಸಾರ್ಟ್​ ಮೊರೆ ಹೋಗಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Tue, 9 January 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು