AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ

ಆಗ ಮಾತಿಗಿಳಿದ ಕಂದಾಯ ಸಚಿವ ಆರ್.ಅಶೋಕ್, ಅವರಾದ್ರೂ ಏನ್ಮಾಡೋದು.. ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಓದಿದ್ದಾರೆ. ನಾವು ರಾಜಕಾರಣಿಗಳು ಐದು ವರ್ಷ ಇರುತ್ತೇವೆ..ಆಮೇಲೆ ಹೋಗುತ್ತೇವೆ. ಅಧಿಕಾರಿಗಳು ತಾನೇ ಕಾಯಂ ಇರೋದು? ಎಂದು ಸಚಿವ ಮಾಧುಸ್ವಾಮಿಯವರಿಗೆ ಹೇಳಿದರು.

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ
ಸಚಿವ ಜೆ.ಸಿ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
guruganesh bhat
|

Updated on: May 27, 2021 | 5:53 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ನಿರ್ವಹಣೆ ಬಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆಯ ಪ್ರಸ್ತಾಪವಿಟ್ಟ ಅಚ್ಚರಿಯ ಬೆಳವಣಿಗೆ ನಡೆಯಿತು.

ಸಚಿವ ಸಂಪುಟ ಸಭೆಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಂಬಂಧಿಸಿದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆಸ್ಪತ್ರೆಯಲ್ಲಿ ಕೈಗೊಂಡ ವ್ಯವಸ್ಥೆ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ವಿವರಿಸುತ್ತಿದ್ದರು. ಈ ವೇಳೆ ‘ನೀವು ಬರೀ ರೆಕಾರ್ಡ್​​​ನಲ್ಲಿ ಇರೋದು ಹೇಳ್ತಿದ್ದೀರಾ..ನೀವು ಹೇಳುತ್ತಿರುವುದು ಯಾವುದೂ ಅನುಷ್ಠಾನ ಆಗಿಲ್ಲ’ ಎಂದು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಮುಂದುವರೆದ ಅವರು, ‘ನೀವು ಹೇಳಿದ್ದೆಲ್ಲಾ ಅನುಷ್ಠಾನ ಆಗಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಲಘು ಧಾಟಿಯಲ್ಲಿ ಹೇಳಿದರು.

ಸಚಿವ ಮಾಧುಸ್ವಾಮಿಯವರ ರಾಜೀನಾಮೆಯ ಪ್ರಸ್ತಾಪದ ಮಾತನ್ನು ಕೇಳಿಸಿಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಹೇ ಸುಮ್ಮನಿರಪ್ಪ ನೀನು..’ ಎಂದು ಸಚಿವ ಮಾಧುಸ್ವಾಮಿಯವರನ್ನು ತಣ್ಣಗಾಗಿಸಿದರು. ಆಗ ಮಾತಿಗಿಳಿದ ಕಂದಾಯ ಸಚಿವ ಆರ್.ಅಶೋಕ್, ಅವರಾದ್ರೂ ಏನ್ಮಾಡೋದು.. ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಓದಿದ್ದಾರೆ. ನಾವು ರಾಜಕಾರಣಿಗಳು ಐದು ವರ್ಷ ಇರುತ್ತೇವೆ..ಆಮೇಲೆ ಹೋಗುತ್ತೇವೆ. ಅಧಿಕಾರಿಗಳು ತಾನೇ ಕಾಯಂ ಇರೋದು? ಎಂದು ಸಚಿವ ಮಾಧುಸ್ವಾಮಿಯವರಿಗೆ ಹೇಳಿದರು.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

( Karnataka law minister JC Madhuswamy says about resignation cabinet meeting but CM Yediyurappa stopped him)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ