AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ

ಆಗ ಮಾತಿಗಿಳಿದ ಕಂದಾಯ ಸಚಿವ ಆರ್.ಅಶೋಕ್, ಅವರಾದ್ರೂ ಏನ್ಮಾಡೋದು.. ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಓದಿದ್ದಾರೆ. ನಾವು ರಾಜಕಾರಣಿಗಳು ಐದು ವರ್ಷ ಇರುತ್ತೇವೆ..ಆಮೇಲೆ ಹೋಗುತ್ತೇವೆ. ಅಧಿಕಾರಿಗಳು ತಾನೇ ಕಾಯಂ ಇರೋದು? ಎಂದು ಸಚಿವ ಮಾಧುಸ್ವಾಮಿಯವರಿಗೆ ಹೇಳಿದರು.

ಸಂಪುಟ ಸಭೆಯಲ್ಲಿ ರಾಜೀನಾಮೆ ಪ್ರಸ್ತಾಪವಿಟ್ಟ ಸಚಿವ ಮಾಧುಸ್ವಾಮಿ; ಹೇ, ಸುಮ್ಮನಿರಪ್ಪ ನೀನು ಎಂದ ಸಿಎಂ
ಸಚಿವ ಜೆ.ಸಿ ಮಾಧುಸ್ವಾಮಿ ಮತ್ತು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
guruganesh bhat
|

Updated on: May 27, 2021 | 5:53 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ ನಿರ್ವಹಣೆ ಬಗ್ಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆಯ ಪ್ರಸ್ತಾಪವಿಟ್ಟ ಅಚ್ಚರಿಯ ಬೆಳವಣಿಗೆ ನಡೆಯಿತು.

ಸಚಿವ ಸಂಪುಟ ಸಭೆಯಲ್ಲಿ ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸಂಬಂಧಿಸಿದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆಸ್ಪತ್ರೆಯಲ್ಲಿ ಕೈಗೊಂಡ ವ್ಯವಸ್ಥೆ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ವಿವರಿಸುತ್ತಿದ್ದರು. ಈ ವೇಳೆ ‘ನೀವು ಬರೀ ರೆಕಾರ್ಡ್​​​ನಲ್ಲಿ ಇರೋದು ಹೇಳ್ತಿದ್ದೀರಾ..ನೀವು ಹೇಳುತ್ತಿರುವುದು ಯಾವುದೂ ಅನುಷ್ಠಾನ ಆಗಿಲ್ಲ’ ಎಂದು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೇ ಮುಂದುವರೆದ ಅವರು, ‘ನೀವು ಹೇಳಿದ್ದೆಲ್ಲಾ ಅನುಷ್ಠಾನ ಆಗಿದ್ದರೆ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಲಘು ಧಾಟಿಯಲ್ಲಿ ಹೇಳಿದರು.

ಸಚಿವ ಮಾಧುಸ್ವಾಮಿಯವರ ರಾಜೀನಾಮೆಯ ಪ್ರಸ್ತಾಪದ ಮಾತನ್ನು ಕೇಳಿಸಿಕೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ಹೇ ಸುಮ್ಮನಿರಪ್ಪ ನೀನು..’ ಎಂದು ಸಚಿವ ಮಾಧುಸ್ವಾಮಿಯವರನ್ನು ತಣ್ಣಗಾಗಿಸಿದರು. ಆಗ ಮಾತಿಗಿಳಿದ ಕಂದಾಯ ಸಚಿವ ಆರ್.ಅಶೋಕ್, ಅವರಾದ್ರೂ ಏನ್ಮಾಡೋದು.. ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಓದಿದ್ದಾರೆ. ನಾವು ರಾಜಕಾರಣಿಗಳು ಐದು ವರ್ಷ ಇರುತ್ತೇವೆ..ಆಮೇಲೆ ಹೋಗುತ್ತೇವೆ. ಅಧಿಕಾರಿಗಳು ತಾನೇ ಕಾಯಂ ಇರೋದು? ಎಂದು ಸಚಿವ ಮಾಧುಸ್ವಾಮಿಯವರಿಗೆ ಹೇಳಿದರು.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

( Karnataka law minister JC Madhuswamy says about resignation cabinet meeting but CM Yediyurappa stopped him)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ