AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಬಿಸಿಬಿಸಿ ಚರ್ಚೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಸಂಸತ್ತಿನಲ್ಲಿ ಬಿಸಿ ಚರ್ಚೆಗೆ ಕಾರಣವಾಯಿತು ಮತ್ತು ಎರಡೂ ರಾಜ್ಯಗಳ ಹಲವಾರು ಸಂಸದರು ಈ ವಿಷಯವನ್ನು ಪ್ರಸ್ತಾಪಿಸಿದರು.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಬಿಸಿಬಿಸಿ ಚರ್ಚೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಬಿಸಿಬಿಸಿ ಚರ್ಚೆ Image Credit source: PTI
TV9 Web
| Edited By: Rakesh Nayak Manchi|

Updated on:Dec 08, 2022 | 9:12 AM

Share

ದೆಹಲಿ: ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ (Winter Session of Parliament)ದ ಮೊದಲ ದಿನ ಕರ್ನಾಟಕ ಮತ್ತು ಮಹಾರಾಷ್ಟ್ರ (Karnataka-Maharashtra) ರಾಜ್ಯಗಳ ಹಲವಾರು ಸಂಸದರು ಗಡಿ ವಿವಾದ (Border dispute)ದ ಬಗ್ಗೆ ಪ್ರಸ್ತಾಪಿಸಿದ ಹಿನ್ನೆಲೆ ಅಧಿವೇಶನದಲ್ಲಿ ವಿವಾದದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದ ಶೂನ್ಯ ವೇಳೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಅವರು ಈ ವಿಷಯವನ್ನು ಮೊದಲು ಪ್ರಸ್ತಾಪಿಸಿ ಕೇಂದ್ರ ಗೃಹ ಸಚಿವಾಲಯ (Union Home Ministry)ದ ಮಧ್ಯಪ್ರವೇಶವನ್ನು ಕೋರಿದರಲ್ಲದೆ ಮಹಾರಾಷ್ಟ್ರವನ್ನು ಒಡೆಯುವ ಪಿತೂರಿ ಇದೆ ಎಂದು ಅವರು ಹೇಳಿದರು. ಇದು ಬಿಜೆಪಿ ಸಂಸದರ ಪ್ರತಿಭಟನೆಗೆ ಕಾರಣವಾಯಿತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಗಡಿ ಕಿಚ್ಚು: ಬೊಮ್ಮಾಯಿಗೆ ಕರೆ ಮಾಡಿ ಶಾಂತಿ ಮಂತ್ರ ಪಠಿಸಿದ ಮಹಾರಾಷ್ಟ್ರ ಸಿಎಂ ಶಿಂಧೆ

ಕಳೆದ 10 ದಿನಗಳಲ್ಲಿ ಮಹಾರಾಷ್ಟ್ರವನ್ನು ಒಡೆಯಲು ಪಿತೂರಿ ನಡೆದಿದೆ. ಈ ವಿಚಾರದಲ್ಲಿ ಅಮಿತ್ ಶಾ ಮಧ್ಯಪ್ರವೇಶಿಸಬೇಕು ಎಂದು ಸುಳೆ ಅವರು ಹೇಳಿದರು. ಅಲ್ಲದೆ, ಈ ಪ್ರದೇಶದಲ್ಲಿ ಮಹಾರಾಷ್ಟ್ರದ ಜನರು ಹೊಡೆಯಲ್ಪಡುತ್ತಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯವರು ಮಹಾರಾಷ್ಟ್ರವನ್ನು ಒಡೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಎರಡೂ ರಾಜ್ಯಗಳಲ್ಲೂ ಬಿಜೆಪಿ ಆಡಳಿತದಲ್ಲಿದೆ. ನಿನ್ನೆ ಮಹಾರಾಷ್ಟ್ರದ ಜನರನ್ನು ಥಳಿಸಲಾಗಿದೆ. ಇದನ್ನು ಅನುಮತಿಸಲಾಗುವುದಿಲ್ಲ. ಇದು ಒಂದೇ ದೇಶ ಎಂದು ಹೇಳಿದರು. ಇದನ್ನು ಬಿಜೆಪಿ ಸಂಸದರು ಖಂಡಿಸಿದರು.

ಈ ವೇಳೆ ಎದ್ದುನಿಂತ ಕರ್ನಾಟಕದ ಹಾವೇರಿಯ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಅವರು, ಗಡಿ ವಿವಾದ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ಮಹಾರಾಷ್ಟ್ರದ ಯಾವುದೇ ಸಂಸದರಿಗೆ ಈ ವಿಷಯದ ಬಗ್ಗೆ ಮಾತನಾಡಲು ಸ್ಪೀಕರ್ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 am, Thu, 8 December 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ