AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC By Election: ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ

ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್​​ಗೆ ಪರಿಷತ್ ಉಪಚುಣಾವಣೆಯಲ್ಲಿಯೂ ಭರ್ಜರಿ ಮುನ್ನಡೆಯಾದಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ಕಂಗೆಟ್ಟಿದ್ದ ಜಗದೀಶ್ ಶೆಟ್ಟರ್ ಅವರಿಗೂ ತುಸು ನಿರಾಳತೆ ಒದಗಿದಂತಾಗಿದೆ.

MLC By Election: ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್​​ನ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣ ಅವಿರೋಧ ಆಯ್ಕೆ
ಬೋಸರಾಜು ಮತ್ತು ಜಗದೀಶ್​​ ಶೆಟ್ಟರ್
Ganapathi Sharma
|

Updated on: Jun 23, 2023 | 4:31 PM

Share

ಬೆಂಗಳೂರು: ಕರ್ನಾಟಕ ವಿಧಾನಪರಿಷತ್​​ನ ತೆರವಾಗಿದ್ದ ಮೂರು ಸ್ಥಾನಗಳಿಗೆ ಕಾಂಗ್ರೆಸ್​​ ಪಕ್ಷದ ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್ (Jagadish Shettar), ತಿಪ್ಪಣ್ಣಪ್ಪ ಕಮಕನೂರ್, ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್‌ಎಸ್ ಬೋಸರಾಜು ಶುಕ್ರವಾರ ಸಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಜೂನ್ 30ರಂದು ಚುನಾವಣೆ (MLC By Election) ನಡೆಸಬೇಕಾದ ಅಗತ್ಯ ಎದುರಾಗದು. ವಿಧಾನಪರಿಷತ್ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರ ವಾಪಸ್ ಪಡೆಯಲು ಇಂದು (ಜೂನ್ 23) ಕೊಮನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ವಿಧಾನಪರಿಷತ್ ತೆರವಾಗಿರುವ ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಿಗದಿಯಾಗಿತ್ತು.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಪರಿಷತ್​​ನ ಮೂರು ಸ್ಥಾನಗಳು ತೆರವಾಗಿದ್ದವು. ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದರಿಂದ ಸ್ಥಾನಗಳು ತೆರವಾಗಿದ್ದವು.

ಇದನ್ನೂ ಓದಿ: MLC By Election: ವಿಧಾನಪರಿಷತ್ ಉಪ ಚುನಾವಣೆ; ಕಾಂಗ್ರೆಸ್​​ನಿಂದ ಜಗದೀಶ್​​ ಶೆಟ್ಟರ್​, ಬೋಸರಾಜು, ತಿಪ್ಪಣ್ಣಗೆ ಟಿಕೆಟ್

ಪಕ್ಷದ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸುವುದರೊಂದಿಗೆ ಕಾಂಗ್ರೆಸ್​​ಗೆ ಪರಿಷತ್ ಉಪಚುಣಾವಣೆಯಲ್ಲಿಯೂ ಭರ್ಜರಿ ಮುನ್ನಡೆಯಾದಂತಾಗಿದೆ. ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದ ಕಂಗೆಟ್ಟಿದ್ದ ಜಗದೀಶ್ ಶೆಟ್ಟರ್ ಅವರಿಗೂ ತುಸು ನಿರಾಳತೆ ಒದಗಿದಂತಾಗಿದೆ. ನೂತನ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆಯಾದ ಬಳಿಕ ಶೆಟ್ಟರ್ ಅವರನ್ನು ಭೇಟಿಯಾಗಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್