AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿರಾ ಗಾಂಧಿಗಾಗಿ ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಡಿಬಿ ಚಂದ್ರೇಗೌಡ; ರಾಜಕೀಯ ಜೀವನ ಹೀಗಿದೆ

ಕರ್ನಾಟಕ ಹಿರಿಯ ರಾಜಕೀಯ ಮುತ್ಸದಿ ಡಿ.ಬಿ ಚಂದ್ರೇಗೌಡ ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಜೀವನ ಹಾಗೂ ರಾಜಕೀಯ ಹಾದಿ ಹೇಗಿತ್ತು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಇಂದಿರಾ ಗಾಂಧಿಗಾಗಿ ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಡಿಬಿ ಚಂದ್ರೇಗೌಡ; ರಾಜಕೀಯ ಜೀವನ ಹೀಗಿದೆ
ಇಂದಿರಾ ಗಾಂಧಿ, ಚಂದ್ರೇಗೌಡ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Nov 07, 2023 | 9:34 AM

ಬೆಂಗಳೂರು, (ನವೆಂಬರ್ 07): ಕರ್ನಾಟಕ ಹಿರಿಯ ರಾಜಕೀಯ ಮುತ್ಸದಿ ಡಿ.ಬಿ ಚಂದ್ರೇಗೌಡ (DB chandre gowda ) ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 1936, ಆಗಸ್ಟ್ 26ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯಲ್ಲಿ ಡಿ.ಎ.ಬೈರೇಗೌಡ ಮತ್ತು ಪುಟ್ಟಮ್ಮ ದಂಪತಿಗಳಪುತ್ರನಾಗಿ ಜನಿಸಿ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪೂರ್ಣಗೊಳಿಸಿದ್ದರು. 22 ಮೇ 1966 ರಂದು ಪೂರ್ಣ ಎನ್ನುವರನ್ನು ವಿವಾಹವಾದ್ದರು.

ಇಂದಿರಾ ಗಾಂಧಿಗಾಗಿ ರಾಜೀನಾಮೆ ನೀಡಿದ್ದ ಚಂದ್ರೇಗೌಡ್ರು

ವಕೀಲರಾಗಿ ವೃತ್ತಿ ಆರಂಭಿಸಿದ್ದ ಡಿ.ಬಿ.ಚಂದ್ರೇಗೌಡ ಅವರು ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು. 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977 ರಲ್ಲಿ ಎರಡನೇ ಅವಧಿಗೆ ಸಂಸದರಾಗಿ ಆಯ್ಕೆಯಾಗಿ, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲೆಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರ ಗಾಂಧಿ ಗೆ ಚಿಕ್ಕಮಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದರು.

ಇದನ್ನೂ ಓದಿ: DB Chandregowda Passes Away: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ನಿಧನ

ಚಂದ್ರೇಗೌಡರ ರಾಜಕೀಯ ಜರ್ನಿ

ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮೂರು ಅವಧಿಗೆ ಶಾಸಕ, ಒಂದು-ಅವಧಿಯ ವಿಧಾನಪರಿಷತ್ ಮತ್ತು 3 ಬಾರಿ ಸಂಸತ್ ಸದಸ್ಯರಾಗಿದ್ದರು. ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕ ಸರ್ಕಾರದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವಾರು ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸಿದ್ದರು. ಪ್ರಜಾ ಸಮಾಜವಾದಿ ಪಕ್ಷ, ಜನತಾ ದಳ, ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದಲ್ಲಿದ್ದರು.

  • 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಗೆದ್ದಿದ್ದರು.
  • 1977ರಲ್ಲಿ ಮತ್ತೆ ಅದೇ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು.
  • 1978ರಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿಯವರಿಗೆ ಅವಕಾಶ ಮಾಡಿಕೊಟ್ಟಿದ್ದರು.
  • 1978-1983: ಕರ್ನಾಟಕ ವಿಧಾನಪರಿಷತ್​ ಸದಸ್ಯರಾಗಿದ್ದರು. ಬಳಿಕ ದೇವರಾಜ್ ಅರಸ್ ಅವರ ಕ್ರಾಂತಿರಂಗಕ್ಕೆ ಸೇರ್ಪಡೆಯಾಗಿದ್ದರು.
  • 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ(ಜನತಾ ಪಕ್ಷ) ಆಯ್ಕೆಯಾಗಿದ್ದರು.
  • 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.
  • 1986ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು (ಜನತಾದಳ).
  • 1989ರಲ್ಲಿ ಮತ್ತೆ ತೀರ್ಥಹಳ್ಳಿಯಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ (ಜನತಾ ದಳ) ಆಯ್ಕೆಯಾಗಿದ್ದರು.
  • 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
  • 2008ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
  • 2009ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

Published On - 9:03 am, Tue, 7 November 23

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್