Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಪಕ್ಕೆ ಅಡ್ಡಿ: ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು

ಲೋಕಸಭೆಯಲ್ಲಿ ಭದ್ರತಾಲೋಪ ಖಂಡಿಸಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಧರಣಿ ನಡೆಸಿದ್ದರಿಂದ ಇಂದು ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್​ ಸಹ ಅಮಾನತುಗೊಂಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಾಪಕ್ಕೆ ಅಡ್ಡಿ:  ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು
ಡಿಕೆ ಸುರೇಶ್
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 21, 2023 | 4:21 PM

ನವದೆಹಲಿ, (ಡಿಸೆಂಬರ್ 21): ಲೋಕಸಭೆ (parliament)ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಸ್ಪಷ್ಟನೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದು, ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ವಾಕ್ಸಮರ ನಡೆದಿದೆ. ಇನ್ನು ವಿಪಕ್ಷ ನಾಯಕರು ಒಂದು ಹೆಜ್ಜೆ ಮುಂದೆ ಹೋಗಿ ಸಂಸತಿನಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 21) ಮತ್ತೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ (DK Suresh)  ಸೇರಿದಂತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ.

ನಿಯಮ ಮೀರಿ ಪ್ರತಿಭಟನೆ ಆರೋಪ ಹಿನ್ನೆಲೆ ಅಮಾನತು ಸಂಸದರನ್ನು ಅಮಾನತು ಮಾಡಲಾಗಿದೆ. ಸಚಿವ ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ರು. ಇದರೊಂದಿಗೆ ಉಭಯ ಸದನಗಳಲ್ಲಿ ಈವರೆಗೆ ಒಟ್ಟು 146 ಸಂಸದರನ್ನು ಸಂಸತ್​​​ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭಾ ಕಲಾಪಕ್ಕೆ ಅಡ್ಡಿ; ವಿಪಕ್ಷದ ಇಬ್ಬರು ಸಂಸದರು ಅಮಾನತು

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದ ದೇವಸ್ಥಾನದೊಳಗೆ ಕೆಲವರು ಅಕ್ರಮವಾಗಿ ದಾಳಿ ಮಾಡಿದ್ದಾರೆ. ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳು ಮಾತನಾಡಬೇಕು. ಮತ್ತು ತನಿಖೆಯಲ್ಲಿ ಪಾಸ್ ನೀಡಿದವರನ್ನು ಒಳಪಡಿಸಬೇಕು ಎಂದು ಆಗ್ರಹಿಸಿದ್ದೇವೆ. ಇಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಬೇರೆಯವರಿಗೆ ರಕ್ಷಣೆ ಹೇಗೆ ಎಂದು ಪ್ರಶ್ನೆ ಮಾಡಿದ್ದೇವು. ಪ್ರತಿಭಟನೆ ನಡೆಸಿದ ಸಂಸದರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯಮಗಳನ್ನು ಗಾಳಿಗೆ ತೂರಿ ಅಮಾನತು ಮಾಡಿದ್ದಾರೆ. ಇದೊಂದು ದುರ್ದೈವದ‌ ಸಂಗತಿ. ನಾವು ಮಾತನಾಡಲು ಸೂಕ್ತವಾದ ಅವಕಾಶ‌ ಕೇಳಿದ್ದೇವು. ಮಾತನಾಡುವ ಹಕ್ಕನ್ನು ಕಸಿಯುವ ಪ್ರಯತ್ನ ಲೋಕಸಭೆ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ಬಾವಿಗಿಳಿದು ಪ್ರತಿಭಟನೆ ನಡೆಸಿದೆವು. ಇದಕ್ಕೆ ಸ್ಪೀಕರ್ ಅಸಮಧಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಇಂದು ಮೂವರನ್ನು ಅಮಾನತು ಮಾಡಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಸದಸ್ಯನ ಹಕ್ಕು. ಅದನ್ನು ಕಿತ್ತು ಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆಡಳಿತ ಪಕ್ಷ ತನ್ನ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಹಿಂದೆ ಬಿಜೆಪಿ ನಾಯಕರು ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ‌ನಡೆಸಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ‌ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಹಿಂದೆ ನಮ್ಮನ್ನು ವ್ಯಂಗ್ಯ ಮಾಡುವಾಗ ಬಿಜೆಪಿ ನಾಯಕರು ಎಂಜಾಯ್ ಮಾಡಿದ್ದಾರೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ