AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾಪಕ್ಕೆ ಅಡ್ಡಿ: ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು

ಲೋಕಸಭೆಯಲ್ಲಿ ಭದ್ರತಾಲೋಪ ಖಂಡಿಸಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಧರಣಿ ನಡೆಸಿದ್ದರಿಂದ ಇಂದು ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್​ ಸಹ ಅಮಾನತುಗೊಂಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಾಪಕ್ಕೆ ಅಡ್ಡಿ:  ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅಮಾನತು
ಡಿಕೆ ಸುರೇಶ್
ಹರೀಶ್ ಜಿ.ಆರ್​.
| Edited By: |

Updated on: Dec 21, 2023 | 4:21 PM

Share

ನವದೆಹಲಿ, (ಡಿಸೆಂಬರ್ 21): ಲೋಕಸಭೆ (parliament)ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಸ್ಪಷ್ಟನೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದು, ಈ ಸಂಬಂಧ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ವಾಕ್ಸಮರ ನಡೆದಿದೆ. ಇನ್ನು ವಿಪಕ್ಷ ನಾಯಕರು ಒಂದು ಹೆಜ್ಜೆ ಮುಂದೆ ಹೋಗಿ ಸಂಸತಿನಲ್ಲಿ ಪ್ರತಿಭಟನೆಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 21) ಮತ್ತೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ (DK Suresh)  ಸೇರಿದಂತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದೆ.

ನಿಯಮ ಮೀರಿ ಪ್ರತಿಭಟನೆ ಆರೋಪ ಹಿನ್ನೆಲೆ ಅಮಾನತು ಸಂಸದರನ್ನು ಅಮಾನತು ಮಾಡಲಾಗಿದೆ. ಸಚಿವ ಪ್ರಹ್ಲಾದ್ ಜೋಶಿ ಅಮಾನತು ಪ್ರಸ್ತಾವನೆ ಮಂಡಿಸಿದ್ರು. ಇದರೊಂದಿಗೆ ಉಭಯ ಸದನಗಳಲ್ಲಿ ಈವರೆಗೆ ಒಟ್ಟು 146 ಸಂಸದರನ್ನು ಸಂಸತ್​​​ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭಾ ಕಲಾಪಕ್ಕೆ ಅಡ್ಡಿ; ವಿಪಕ್ಷದ ಇಬ್ಬರು ಸಂಸದರು ಅಮಾನತು

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದ ದೇವಸ್ಥಾನದೊಳಗೆ ಕೆಲವರು ಅಕ್ರಮವಾಗಿ ದಾಳಿ ಮಾಡಿದ್ದಾರೆ. ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಗಳು ಮಾತನಾಡಬೇಕು. ಮತ್ತು ತನಿಖೆಯಲ್ಲಿ ಪಾಸ್ ನೀಡಿದವರನ್ನು ಒಳಪಡಿಸಬೇಕು ಎಂದು ಆಗ್ರಹಿಸಿದ್ದೇವೆ. ಇಲ್ಲಿ ಸಂಸದರಿಗೆ ರಕ್ಷಣೆ ಇಲ್ಲ. ಬೇರೆಯವರಿಗೆ ರಕ್ಷಣೆ ಹೇಗೆ ಎಂದು ಪ್ರಶ್ನೆ ಮಾಡಿದ್ದೇವು. ಪ್ರತಿಭಟನೆ ನಡೆಸಿದ ಸಂಸದರನ್ನು ಅಮಾನತು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿಯಮಗಳನ್ನು ಗಾಳಿಗೆ ತೂರಿ ಅಮಾನತು ಮಾಡಿದ್ದಾರೆ. ಇದೊಂದು ದುರ್ದೈವದ‌ ಸಂಗತಿ. ನಾವು ಮಾತನಾಡಲು ಸೂಕ್ತವಾದ ಅವಕಾಶ‌ ಕೇಳಿದ್ದೇವು. ಮಾತನಾಡುವ ಹಕ್ಕನ್ನು ಕಸಿಯುವ ಪ್ರಯತ್ನ ಲೋಕಸಭೆ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ಬಾವಿಗಿಳಿದು ಪ್ರತಿಭಟನೆ ನಡೆಸಿದೆವು. ಇದಕ್ಕೆ ಸ್ಪೀಕರ್ ಅಸಮಧಾನ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಇಂದು ಮೂವರನ್ನು ಅಮಾನತು ಮಾಡಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ಸದಸ್ಯನ ಹಕ್ಕು. ಅದನ್ನು ಕಿತ್ತು ಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆಡಳಿತ ಪಕ್ಷ ತನ್ನ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಹಿಂದೆ ಬಿಜೆಪಿ ನಾಯಕರು ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ‌ನಡೆಸಿದ್ದರು. ಇತಿಹಾಸದಲ್ಲಿ ಮೊದಲ ಬಾರಿಗೆ ‌ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಹಿಂದೆ ನಮ್ಮನ್ನು ವ್ಯಂಗ್ಯ ಮಾಡುವಾಗ ಬಿಜೆಪಿ ನಾಯಕರು ಎಂಜಾಯ್ ಮಾಡಿದ್ದಾರೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Harish GR
Harish GR
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ