AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka New DCM: ಕರ್ನಾಟಕ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ?

ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.

Karnataka New DCM: ಕರ್ನಾಟಕ ಉಪಮುಖ್ಯಮಂತ್ರಿಗಳಾಗಿ ಆರ್ ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ?
ಆರ್. ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು
TV9 Web
| Updated By: ganapathi bhat|

Updated on:Jul 27, 2021 | 9:07 PM

Share

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಪರಿಗಣಿಸಲಾಗಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ನಿಯೋಜಿತ ಸಿಎಂ, ನಿರ್ಗಮಿತ ಮುಖ್ಯಮಂತ್ರಿಯ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ.

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲಿಗರಿಂದ ಸಂಭ್ರಮಾಚರಣೆ ಆರಂಭವಾಗಿದೆ. ನೂತನ ಸಿಎಂ ಆಗಿ ಬೊಮ್ಮಾಯಿ ಘೋಷಣೆ ಮಾಡಿರುವ ಕಾರಣ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ನಡೆದಿದೆ. ಬಸವರಾಜ ಬೊಮ್ಮಾಯಿ ಭಾವಚಿತ್ರ ಹಿಡಿದು, ಬೆಂಬಲಿಗರು ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿದ್ದಾರೆ.

ಇದೀಗ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಐವರು ನಾಯಕರೊಂದಿಗೆ ಬೊಮ್ಮಾಯಿ ರಾಜಭವನಕ್ಕೆ ತೆರಳಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಇದನ್ನೂ ಓದಿ: Basavaraj Bommai: ಯಡಿಯೂರಪ್ಪ ಉತ್ತರಾಧಿಕಾರಿ ಬಸವರಾಜ ಬೊಮ್ಮಾಯಿ, ಹೋರಾಟದ ಹಾದಿಯಲ್ಲಿ ಅರಳಿದ ನಾಯಕ

Karnataka New CM: ಬಸವರಾಜ ಬೊಮ್ಮಾಯಿ ಕರ್ನಾಟಕದ ಹೊಸ ಮುಖ್ಯಮಂತ್ರಿ

(Karnataka New DCM R Ashok Govinda Karajola B Sriramulu Karnataka BJP Politics)

Published On - 8:42 pm, Tue, 27 July 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!