AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ

ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ರಣತಂತ್ರ ರೂಪಿಸಲು ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದರು. ಇದೇ ವೇಳೆ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅವರು ಒಂದಷ್ಟು ಸಲಹೆ-ಸೂಚನೆಗಳನ್ನು ನೀಡಿದರು. ಆ ಕುರಿತ ವಿವರ ಇಲ್ಲಿದೆ.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ
Amit Shah
ಕಿರಣ್​ ಹನಿಯಡ್ಕ
| Edited By: |

Updated on: Apr 02, 2024 | 1:27 PM

Share

ಬೆಂಗಳೂರು, ಏಪ್ರಿಲ್ 2: ಲೋಕಸಭೆ ಚುನಾವಣೆಗೆ (Lok Sabha Elections) ಸಿದ್ಧತೆ ಸಂಬಂಧ ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ (BJP) ಹಾಗೂ ಜೆಡಿಎಸ್ ನಾಯಕರ ಜತೆ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿದರು. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿದಂತೆ ಇತರ ನಾಯಕರ ಜತೆ ಸಮಾಲೋಚನೆ ನಡೆಸಿದ ಶಾ, ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದಕ್ಕಾಗಿ ಹಲವು ತಂತ್ರಗಳನ್ನು ರೂಪಿಸಿರುವ ಶಾ, ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರಿಗೆ ಅಮಿತ್ ಶಾ ಸಲಹೆಗಳೇನು?

  • ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯ ಪ್ರವೃತ್ತರಾಗಿ.
  • ಹಿಂದುಳಿದ ಸಮುದಾಯಗಳು ಇರುವಂಥ ಕ್ಷೇತ್ರಗಳ ಮೇಲೆ ಹೆಚ್ಚು ನಿಗಾ ವಹಿಸಿ ಕೆಲಸ ಮಾಡಿ.
  • ತಳ ಸಮುದಾಯಗಳ ಕ್ಷೇತ್ರಗಳಲ್ಲಿ ಮತ್ತಷ್ಟು ಸಂಘಟನೆ ಚುರುಕುಗೊಳಿಸಿ.
  • ಮೀಸಲಾತಿ ಇರುವ ಕ್ಷೇತ್ರಗಳಲ್ಲಿ ಹೆಚ್ಚು ಸಮಾವೇಶಗಳನ್ನು, ರೋಡ್ ಶೋಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ.
  • ಪ್ರಬಲ ಸಮುದಾಯಗಳ ಜೊತೆಗೆ ಎಲ್ಲಾ ಹಿಂದುಳಿದ ಸಮುದಾಯಗಳ ಮತಗಳನ್ನು ಕ್ರೂಡೀಕರಿಸಬೇಕು. ಈ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಹೃತ್ಪೂರ್ವಕವಾಗಿ ಕೆಲಸ ಮಾಡಬೇಕು.
  • ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು.
  • ತಳಮಟ್ಟದ ಕಾರ್ಯಕರ್ತರಿಂದ ಮುಖಂಡರವರೆಗೂ ಯಾವುದೇ ಭಿನ್ನಾಭಿಪ್ರಾಯ, ಅಸಮಧಾನ ಇರಬಾರದು.
  • ಒಂದು ವೇಳೆ ಅಸಮಾಧಾನ ಇದ್ದರೂ ಬಗೆಹರಿಸಿಕೊಳ್ಳುವಂಥ ಕೆಲಸವನ್ನು ಎರಡು ಪಕ್ಷದ ಹಿರಿಯರು ಮಾಡಬೇಕು.

ಬೆಂಗಳೂರಿನ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಅಮಿತ್ ಶಾ, ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಗೆ ಹಾಜರಾದರು. ಇದೇ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವೇದಿಕೆಯಲ್ಲಿ ಶಾ ಕಾಲು ಮುಟ್ಟಿ ನಮಸ್ಕರಿಸಿದರು. ವೇದಿಕೆಗೆ ಬಂದ ಕೂಡಲೇ ಸಮಯ ವಿಳಂಬ ಮಾಡದೇ ವೇದಿಕೆ ಮೇಲಿದ್ದ ಮುಖಂಡರನ್ನು ಕರೆದು ಜ್ಯೋತಿ ಬೆಳಗಿಸಿದ ಅಮಿತ್ ಶಾ, ಸಮಾವೇಶಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್; ಲೋಕ ಗೆಲ್ಲಲು ರಣತಂತ್ರ

ಅಮಿತ್ ಶಾಗೆ ಶಾಲು ಹೊದಿಸಿ, ಪೇಟ ತೊಡಿಸಿ, ಶ್ರೀಕೃಷ್ಣ ಮೂರ್ತಿ ನೀಡಿ ಸನ್ಮಾನ ಮಾಡಲಾಯಿತು. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಭ್ಯರ್ಥಿಗಳು, ಪ್ರಮುಖರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ