AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ

ಲೋಕಸಭೆ ಚುನಾವಣೆ ಗೆಲ್ಲುವುದಕ್ಕಾಗಿ ರಣತಂತ್ರ ರೂಪಿಸಲು ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದರು. ಇದೇ ವೇಳೆ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅವರು ಒಂದಷ್ಟು ಸಲಹೆ-ಸೂಚನೆಗಳನ್ನು ನೀಡಿದರು. ಆ ಕುರಿತ ವಿವರ ಇಲ್ಲಿದೆ.

Amit Shah in Karnataka: ಲೋಕಸಭೆ ಗೆಲ್ಲಲು ಅಮಿತ್ ಶಾ ಮಾಸ್ಟರ್ ಪ್ಲ್ಯಾನ್, ಬಿಜೆಪಿ ನಾಯಕರಿಗೆ ಕೊಟ್ಟ ಸಲಹೆಗಳು ಇಲ್ಲಿವೆ
Amit Shah
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Apr 02, 2024 | 1:27 PM

ಬೆಂಗಳೂರು, ಏಪ್ರಿಲ್ 2: ಲೋಕಸಭೆ ಚುನಾವಣೆಗೆ (Lok Sabha Elections) ಸಿದ್ಧತೆ ಸಂಬಂಧ ಬೆಂಗಳೂರಿಗೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಿಜೆಪಿ (BJP) ಹಾಗೂ ಜೆಡಿಎಸ್ ನಾಯಕರ ಜತೆ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿದರು. ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸೇರಿದಂತೆ ಇತರ ನಾಯಕರ ಜತೆ ಸಮಾಲೋಚನೆ ನಡೆಸಿದ ಶಾ, ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದಕ್ಕಾಗಿ ಹಲವು ತಂತ್ರಗಳನ್ನು ರೂಪಿಸಿರುವ ಶಾ, ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದಾರೆ.

ಬಿಜೆಪಿ, ಜೆಡಿಎಸ್ ನಾಯಕರಿಗೆ ಅಮಿತ್ ಶಾ ಸಲಹೆಗಳೇನು?

  • ಹಿಂದುಳಿದ ಸಮುದಾಯಗಳ ಸೆಳೆಯಲು ಕಾರ್ಯ ಪ್ರವೃತ್ತರಾಗಿ.
  • ಹಿಂದುಳಿದ ಸಮುದಾಯಗಳು ಇರುವಂಥ ಕ್ಷೇತ್ರಗಳ ಮೇಲೆ ಹೆಚ್ಚು ನಿಗಾ ವಹಿಸಿ ಕೆಲಸ ಮಾಡಿ.
  • ತಳ ಸಮುದಾಯಗಳ ಕ್ಷೇತ್ರಗಳಲ್ಲಿ ಮತ್ತಷ್ಟು ಸಂಘಟನೆ ಚುರುಕುಗೊಳಿಸಿ.
  • ಮೀಸಲಾತಿ ಇರುವ ಕ್ಷೇತ್ರಗಳಲ್ಲಿ ಹೆಚ್ಚು ಸಮಾವೇಶಗಳನ್ನು, ರೋಡ್ ಶೋಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಿ.
  • ಪ್ರಬಲ ಸಮುದಾಯಗಳ ಜೊತೆಗೆ ಎಲ್ಲಾ ಹಿಂದುಳಿದ ಸಮುದಾಯಗಳ ಮತಗಳನ್ನು ಕ್ರೂಡೀಕರಿಸಬೇಕು. ಈ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಹೃತ್ಪೂರ್ವಕವಾಗಿ ಕೆಲಸ ಮಾಡಬೇಕು.
  • ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು.
  • ತಳಮಟ್ಟದ ಕಾರ್ಯಕರ್ತರಿಂದ ಮುಖಂಡರವರೆಗೂ ಯಾವುದೇ ಭಿನ್ನಾಭಿಪ್ರಾಯ, ಅಸಮಧಾನ ಇರಬಾರದು.
  • ಒಂದು ವೇಳೆ ಅಸಮಾಧಾನ ಇದ್ದರೂ ಬಗೆಹರಿಸಿಕೊಳ್ಳುವಂಥ ಕೆಲಸವನ್ನು ಎರಡು ಪಕ್ಷದ ಹಿರಿಯರು ಮಾಡಬೇಕು.

ಬೆಂಗಳೂರಿನ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಅಮಿತ್ ಶಾ, ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರ ಪ್ರಮುಖರ ಸಭೆಗೆ ಹಾಜರಾದರು. ಇದೇ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವೇದಿಕೆಯಲ್ಲಿ ಶಾ ಕಾಲು ಮುಟ್ಟಿ ನಮಸ್ಕರಿಸಿದರು. ವೇದಿಕೆಗೆ ಬಂದ ಕೂಡಲೇ ಸಮಯ ವಿಳಂಬ ಮಾಡದೇ ವೇದಿಕೆ ಮೇಲಿದ್ದ ಮುಖಂಡರನ್ನು ಕರೆದು ಜ್ಯೋತಿ ಬೆಳಗಿಸಿದ ಅಮಿತ್ ಶಾ, ಸಮಾವೇಶಕ್ಕೆ ಚಾಲನೆ ನೀಡಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್‌ಫಾಸ್ಟ್ ಮೀಟಿಂಗ್; ಲೋಕ ಗೆಲ್ಲಲು ರಣತಂತ್ರ

ಅಮಿತ್ ಶಾಗೆ ಶಾಲು ಹೊದಿಸಿ, ಪೇಟ ತೊಡಿಸಿ, ಶ್ರೀಕೃಷ್ಣ ಮೂರ್ತಿ ನೀಡಿ ಸನ್ಮಾನ ಮಾಡಲಾಯಿತು. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಅಭ್ಯರ್ಥಿಗಳು, ಪ್ರಮುಖರು ಸಮಾವೇಶದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ