Karnataka CM News Live: ಸಿಎಲ್​ಪಿ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್

ಕರ್ನಾಟಕ ಹೊಸ ಸರ್ಕಾರ ರಚನೆ​ ಸುದ್ದಿ ಲೈವ್: ಸಿದ್ದರಾಮಯ್ಯ ಸಲ್ಲಿಸಿದ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ನಂತರ ನೂತನ ಸಿಎಂ ಆಯ್ಕೆಗೆ ಮುಹೂರ್ತ ಬಂದೊದಗಿದೆ. ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು, ಈ ವೇಳೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಹೆಸರನ್ನು ಘೋಷಿಸಲಿದ್ದಾರೆ. ಈಗಾಗಲೇ ಡಿ ಕೆ ಶಿವಕುಮಾರ್ ಸಿಎಂ ಆಗಲಿರುವ ವಿಷಯ ಬಹಿರಂಗವಾಗಿದ್ದು, ಇಂದಿನ ಸಭೆಯಲ್ಲಿ ಇದು ಅಧಿಕೃತವೆನಿಸಿಕೊಳ್ಳಲಿದೆ. ಕರ್ನಾಟಕ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

Karnataka CM News Live: ಸಿಎಲ್​ಪಿ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿ ಮಾಡಿದ ಡಿ ಕೆ ಶಿವಕುಮಾರ್
ವಿಧಾನಸೌಧದ ಸುತ್ತಮುತ್ತ ರಾಜಕೀಯ ಚಟುವಟಿಕೆ ಚುರುಕು

Updated on: May 30, 2026 | 10:39 AM

LIVE NEWS & UPDATES

  • 30 May 2026 10:11 AM (IST)

    ಜೂನ್ 3ರಂದು ಡಿ.ಕೆ.ಶಿವಕುಮಾರ್​ ಸಿಎಂ ಆಗಿ ಪ್ರಮಾಣ ವಚನ ಸಾಧ್ಯತೆ

    ಜೂನ್ 3 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ. ಶಿವಕುಮಾರ್ ಅವರೊಂದಿಗೆ ಸುಮಾರು 12 ರಿಂದ 14 ಶಾಸಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

  • 30 May 2026 09:40 AM (IST)

    ಸಿಎಲ್‌ಪಿ ಸಭೆಗೂ ಮುನ್ನವೇ ರಾಜ್ಯಪಾಲರ ಭೇಟಿಗೆ ಮುಂದಾದ ಡಿ.ಕೆ. ಬ್ರದರ್ಸ್!

    ಶಾಸಕಾಂಗ ಪಕ್ಷದ (CLP) ಸಭೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಇಂದು ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ, ಅವರು ಸಿಗುವುದಿಲ್ಲ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಡಿಕೆ ಸಹೋದರರು ಸಭೆಗಿಂತ ಮುಂಚಿತವಾಗಿಯೇ ರಾಜಭವನಕ್ಕೆ ತೆರಳಲು ನಿರ್ಧರಿಸಿದ್ದಾರೆ.

  • 30 May 2026 08:45 AM (IST)

    ಕೆಪಿಸಿಸಿ ಅಧ್ಯಕ್ಷ ರೇಸ್​ಗೆ ಬಿ.ಕೆ. ಹರಿಪ್ರಸಾದ್ ಸರ್ಪ್ರೈಸ್ ಎಂಟ್ರಿ!

    ಕೆಪಿಸಿಸಿ ಅಧ್ಯಕ್ಷರ ರೇಸ್‌ನಲ್ಲಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಹೆಸರು ಮುನ್ನೆಲೆಗೆ ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ. ಒಬಿಸಿ ಕೋಟಾದಡಿ ಇವರ ಹೆಸರನ್ನು ಹೈಕಮಾಂಡ್ ಎದುರು ಪ್ರಸ್ತಾಪಿಸಲಾಗಿದ್ದು, ಕೆ.ಸಿ. ವೇಣುಗೋಪಾಲ್ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ ಮಂತ್ರಿಸ್ಥಾನಕ್ಕೆ ಪಟ್ಟು ಹಿಡಿದರೆ, ಹರಿಪ್ರಸಾದ್ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಯಿದೆ. ಇಂದು ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಹಿರಿಯ ಶಾಸಕರು ಈ ಹೆಸರು ಪ್ರಸ್ತಾಪಿಸುವ ನಿರೀಕ್ಷೆಯಿದೆ.

  • 30 May 2026 08:43 AM (IST)

    ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ

    ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಿಗದಿಯಾಗಿದೆ. ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೂಲಕವೇ ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದೆ. ಜೂನ್ 5, 6 ಅಥವಾ 7 ರಂದು ನೂತನ ಸಿಎಂ ಪದಗ್ರಹಣಕ್ಕೆ ಜ್ಯೋತಿಷಿ ದ್ವಾರಕನಾಥ್ ಅವರಿಂದ ಶುಭ ಮುಹೂರ್ತ ನಿಗದಿಯಾಗಿದೆ.

ಬೆಂಗಳೂರು, ಮೇ 30: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಇಡೀ ರಾಜ್ಯ ಕಾತುರದಿಂದ ಕಾಯುತ್ತಿದೆ. ರಾಜೀನಾಮೆ ಘೊಷಿಸಿದ ನಂತರ, ಮುಂದಿನ ಸಿಎಂ ಆಗಿ ಡಿಕೆ ಶಿವಕುಮಾರ್ ಕುರ್ಚಿ ಏರಲಿದ್ದಾರೆ ಎಂದು ಸಿದ್ದರಾಮಯ್ಯ ಸುಳಿವು ನೀಡಿದ್ದರು. ಅದರಂತೆಯೇ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ (CLP) ನಡೆಯಲಿದ್ದು, ಈ ವೇಳೆ ಮುಖ್ಯಮಂತ್ರಿಯಾಗಿ ಯಾರು ರಾಜ್ಯಭಾರ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ತೆರೆ ಬೀಳಲಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣವಚನದ ಮುಹೂರ್ತವೂ ಸಹ ಇಂದು ಫಿಕ್ಸ್ ಆಗಲಿದೆ. ಕರ್ನಾಟಕ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಅಪ್ಡೇಟ್ ಆಗಲಿದ್ದು, ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 am, Sat, 30 May 26

Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Follow Us