Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್ ಸಿಂಗ್

Karnataka Next CM: ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ: ಅರುಣ್ ಸಿಂಗ್
ಅರುಣ್ ಸಿಂಗ್
Follow us
TV9 Web
| Updated By: ganapathi bhat

Updated on:Jul 26, 2021 | 3:35 PM

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಎಂ ಬಗ್ಗೆ ಚರ್ಚೆ ಮಾಡಲಾಗುವುದು. ಬಳಿಕ, ಕರ್ನಾಟಕ ಸಿಎಂ ಬಗ್ಗೆ ಸಂಸದೀಯ ಮಂಡಳಿ ಸಭೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

ಆದರೆ, ಬಿಜೆಪಿ ಸಂಸದೀಯ ಮಂಡಳಿ ಸಭೆ ಬಗ್ಗೆ ನಿರ್ಧಾರವಾಗಿಲ್ಲ. ಬೆಂಗಳೂರಿಗೆ ನಾನು ತೆರಳುವ ಬಗ್ಗೆಯೂ ಇನ್ನೂ ನಿರ್ಧರಿಸಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಹೇಳಿಕೆ ನೀಡಿದ್ದಾರೆ.

ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ನಮಗೆ ಬೇಸರವಾಗಿಲ್ಲ. ನಮ್ಮ ಕುಟುಂಬದ ಯಾರಿಗೂ ಬೇಸರವಾಗಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ. ರಾಜಕೀಯ ನಿರ್ಧಾರಗಳ ಬಗ್ಗೆ ಅವರು ಕುಟುಂಬಕ್ಕೆ ಮಾಹಿತಿ ಹೇಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್ ಸಂಕಷ್ಟದಲ್ಲಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಗುಮುಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ತುಂಬಾ ಆಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ. ಯಾವುದು ಸರಿ ಅನಿಸುತ್ತೆ ಅದನ್ನು ಅವರೇ ನಿರ್ಧರಿಸುತ್ತಾರೆ. ರಾಜೀನಾಮೆ ನೀಡಿದ ಬಗ್ಗೆಯೇ ಬಿಎಸ್‌ವೈ ಚಿಂತಿಸುತ್ತಿಲ್ಲ ಎಂದು ಅರುಣಾದೇವಿ ಹೇಳಿದ್ದಾರೆ.

ನಾಳೆಯಿಂದ ಏನು ಮಾಡಬಹುದು ಎಂದು ಅವರು ಚಿಂತಿಸುತ್ತಿದ್ದಾರೆ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ

ಬಿಜೆಪಿ ಹಿರಿಯ ನಾಯಕರನ್ನೆಲ್ಲ ಮೋದಿ ಮೂಲೆಗುಂಪು ಮಾಡ್ತಿದ್ದಾರೆ..  ಆ ಸಾಲಿಗೆ ಈಗ ಯಡಿಯೂರಪ್ಪ ಸೇರ್ಪಡೆ: ರಣದೀಪ್ ಸಿಂಗ್​​ ಸುರ್ಜೇವಾಲಾ

(Karnataka Next CM after BS Yediyurappa State BJP Incharge Arun Singh)

Published On - 3:27 pm, Mon, 26 July 21

ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ