AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು 2.0ಗೆ ಕಾಂಗ್ರೆಸ್ ಸಜ್ಜು, ಟಕ್ಕರ್ ಕೊಡಲು ಕೇಸರಿ ಪಡೆ ಡಿಫರೆಂಟ್ ಪ್ಲ್ಯಾನ್!

Karnataka BJP vs Congress: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮೂಲಕ ಬೆಂಗಳೂರಿನ ಮೇಲೆ ಪ್ರಭಾವ ಬೀರಲು ಸಿದ್ಧವಾಗಿದೆ. ಮೊದಲ ಹಂತದ ಪಾದಯಾತ್ರೆ ವೇಳೆ ಕೊರೊನಾ ಕಾರಣದಿಂದ, ಕಾಂಗ್ರೆಸ್ ಪಾದಯಾತ್ರೆಯನ್ನು ಕಟ್ಟಿ ಹಾಕಿದ್ದ ಬಿಜೆಪಿ ಇದೀಗ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಗೆ ಕೌಂಟರ್ ಪ್ಲ್ಯಾನ್ ಮಾಡ್ತಿದೆ.

ಮೇಕೆದಾಟು 2.0ಗೆ ಕಾಂಗ್ರೆಸ್ ಸಜ್ಜು, ಟಕ್ಕರ್ ಕೊಡಲು ಕೇಸರಿ ಪಡೆ ಡಿಫರೆಂಟ್ ಪ್ಲ್ಯಾನ್!
ಡಿಕೆ ಶಿವಕುಮಾರ್, ಬಸವರಾಜ್ ಬೊಮ್ಮಾಯಿ (ಸಾಂದರ್ಭಿಕ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on:Feb 24, 2022 | 8:04 AM

Share

ಬೆಂಗಳೂರು: ಸರ್ಕಾರವನ್ನ ಕಟ್ಟಿಹಾಕೋಕೆ ಕಾಂಗ್ರೆಸ್ ಮತ್ತೆ ಮೇಕೆದಾಟು ಅಸ್ತ್ರ (Mekedatu Padayatre) ಝಳಪಿಸುತ್ತಿದೆ. ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಬ್ರಹ್ಮಾಸ್ತ್ರ ಪ್ರಯೋಗಿಸಿತ್ತು. ಜೊತೆಗೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದು ಕುಳಿತಿತ್ತು. ಆದ್ರೀಗ, ಕಾಂಗ್ರೆಸ್ ಪಾಳಯ ಸೇರು ಅಂದ್ರೆ, ಕಮಲ ಪಡೆ ಸವ್ವಾಸೇರು ಅಂತಿದೆ. ಬಿಜೆಪಿ-ಕಾಂಗ್ರೆಸ್ ಮಧ್ಯೆ ಮತ್ತೊಂದು ಮಹಾ ಕದನ..! ಕಾಂಗ್ರೆಸ್​ಗೆ ಟಕ್ಕರ್ ಕೊಡಲು ಕೇಸರಿ ಪಡೆ ಪ್ಲ್ಯಾನ್..! ಬಿಜೆಪಿ ಕಾಂಗ್ರೆಸ್ ಮಧ್ಯೆ ಪ್ರತಿಷ್ಠೆಯ ಕದನ ಶುರುವಾಗಿದೆ. ವಿಧಾನ ಮಂಡಲ ಅಧಿವೇಶ‌ನ ಕಾಂಗ್ರೆಸ್ ಬಿಜೆಪಿ ನಡುವಿನ ಸಮರದಿಂದಲೇ ವ್ಯರ್ಥವಾಯ್ತು. ಸಚಿವ ಈಶ್ವರಪ್ಪ ವಜಾಗೆ ಆಗ್ರಹಿಸಿ ಕಾಂಗ್ರೆಸ್ ಸದನದ ಒಳಗೆ ಹೋರಾಟ ಮಾಡಿ ಅಷ್ಟಕ್ಕೇ ಸುಮ್ಮನಾಗಲಿಲ್ಲ. ಸದನದ ಹೊರಗೂ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹೋರಾಟ ಮಾಡಿತ್ತು (Karnataka BJP vs Congress).

ಮೇಕೆದಾಟು 2.0ಗೆ ಕಾಂಗ್ರೆಸ್ ಸಜ್ಜು..! ಇದೀಗ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಮುಹೂರ್ತ ಫಿಕ್ಸ್ ಆಗಿದೆ. ಹೋರಾಟ ಪ್ರತಿಭಟನೆ ಮೂಲಕವೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಟ್ಯಾಕ್ ಮಾಡ್ತಿದೆ.. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕೂಡ ಕಾಂಗ್ರೆಸ್ ಮೇಲೆ ಕೌಂಟರ್ ಅಟ್ಯಾಕ್ ಗೆ ಸನ್ನದ್ಧವಾಗಿದೆ.‌ ಕಾಂಗ್ರೆಸ್ ಪಾದಯಾತ್ರೆಗೆ ಪ್ರತಿಯಾಗಿ ತಂತ್ರಗಾರಿಕೆ ಮಾಡಿರೋ ಬಿಜೆಪಿ, ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಿಕೊಳ್ಳುತ್ತಿದೆ.

ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ತಯಾರಿ ಫೆಬ್ರವರಿ 27ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ತಯಾರಿ ಮಾಡಿದ್ದು, ಕಾಂಗ್ರೆಸ್ ನವರು ಕಲಾಪವನ್ನು ಹಾಳು ಮಾಡಿದ್ರು.. ಜನರ ಸಮಸ್ಯೆ, ರಾಜ್ಯದ ಸಮಸ್ಯೆ ಕುರಿತು ಚರ್ಚೆ ಮಾಡಿಲ್ಲ.. ಜನರ ಹಣ ಪೋಲು ಮಾಡಿದ್ರು ಎಂಬ ಕಾರಣ ಮುಂದಿಟ್ಟು ಧರಣಿ ನಡೆಸಲು ತೀರ್ಮಾನಿದೆ.. ಮೇಕೆದಾಟು ಪಾದಯಾತ್ರೆಗೆ ಕೌಂಟರ್ ಆಗಿ ಪ್ರತಿಭಟನೆ ನಡೆಸುವ ಇರಾದೆ ಬಿಜೆಪಿಯದ್ದಾಗಿದ್ದು, ಕಾಂಗ್ರೆಸ್ ಅಬ್ಬರಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗೆ BJP ನಿರ್ಧಾರ ಮಾಡಲಾಗಿದೆ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮೂಲಕ ಬೆಂಗಳೂರಿನ ಮೇಲೆ ಪ್ರಭಾವ ಬೀರಲು ಸಿದ್ಧವಾಗಿದೆ. ಮೊದಲ ಹಂತದ ಪಾದಯಾತ್ರೆ ವೇಳೆ ಕೊರೊನಾ ಕಾರಣದಿಂದ, ಕಾಂಗ್ರೆಸ್ ಪಾದಯಾತ್ರೆಯನ್ನು ಕಟ್ಟಿ ಹಾಕಿದ್ದ ಬಿಜೆಪಿ ಇದೀಗ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಗೆ ಕೌಂಟರ್ ಪ್ಲ್ಯಾನ್ ಮಾಡ್ತಿದೆ.. – ಪ್ರಸನ್ನ ಗಾಂವ್ಕರ್, ಟಿವಿ 9, ಬೆಂಗಳೂರು

Also Read: ವರ್ಷಕ್ಕೂ ಮೊದಲೇ ಚುನಾವಣೆಗೆ ರಾಜ್ಯ ಕಾಂಗ್ರೆಸ್ ತಾಲೀಮು: ರಾಹುಲ್ ನಿವಾಸದಲ್ಲಿಂದು ಸಭೆ, ಘಟಾನುಘಟಿ ನಾಯಕರಿಗೆ ಬುಲಾವ್

Also Read: ಡೌನ್ ಡೌನ್ ಸರ್ವರ್​​​ ಡೌನ್! ಸಿಲಿಕಾನ್​ ಸಿಟಿ ಪಕ್ಕದಲ್ಲೇ ಇರುವ ರಾಮನಗರದಲ್ಲಿ ಸರ್ವರ್​ ಪ್ರಾಬ್ಲಂ, ಜನರಿಗೂ ಪ್ರಾಬ್ಲಂ

Published On - 8:03 am, Thu, 24 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ