AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ಬಗ್ಗೆ ಚರ್ಚೆ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್!

ಇಂದು ದೆಹಲಿಯ 10 ಜನಪತ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಮಹತ್ವದ ಸಭೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಸತತ ಎರಡು ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಮೀಟಿಂಗ್‌ ಮಾಡಿದ್ದಾರೆ. ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕೂಡ ಚರ್ಚೆ ನಡೆದಿದ್ದು, ಆದರೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಸೋನಿಯಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜಕೀಯ ಬಗ್ಗೆ ಚರ್ಚೆ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್!
ಸಿದ್ದರಾಮಯ್ಯ, ಸೋನಿಯಾ ಗಾಂಧಿ, ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on: Dec 06, 2025 | 9:39 PM

Share

ಬೆಂಗಳೂರು, ಡಿಸೆಂಬರ್​ 06: ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ (DK Shivakumar) ಇತ್ತೀಚೆಗೆ ಒಟ್ಟಿಗೆ ಬ್ರೇಕ್​ಫಾಸ್ಟ್ ಮಾಡುವ ಬಳಿಕ ನಮ್ಮಿಬ್ಬರ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದರು. ಆದರೆ ತೆರೆ ಹಿಂದೆ ಅವರ ತಂತ್ರ ಮತ್ತು ಗುರಿಗಳು ಬೇರೆ ಬೇರೆ ಅನ್ನೋದನ್ನ ಬಿಡಿಸಿ ಹೇಳಬೇಕಿಲ್ಲ. ಇಂದು ಸಹ ಡಿಕೆ ಶಿವಕುಮಾರ್​ ಮತ್ತೆ ಮಾರ್ಮಿಕ ಇಟ್ಟ ಗುರಿಯ ಮಾತಿನ ದಾಳ ಉರುಳಿಸಿದರೆ, ಸಿದ್ದರಾಮಯ್ಯ ಸಹ ಡಿಕೆ ಶಿವಕುಮಾರ್​ ಎದುರಲ್ಲೇ ಕೊಟ್ಟ ಮಾತಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತ್ತ ದೆಹಲಿಯಲ್ಲ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದ್ದು, ಆದರೆ ಹೈಕಮಾಂಡ್ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.

ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಪಟ್ಟದಾಟ ಹೈಕಮಾಂಡ್ ಅಂಗಳ ತಲುಪಿದೆ. ವಾರದ ಹಿಂದಷ್ಟೇ ಮಲ್ಲಿಕಾರ್ಜುನ ಖರ್ಗೆ ಸೋನಿಯಾ ಗಾಂಧಿಗೆ ರಾಜ್ಯದ ಬೆಳವಣಿಗೆಗಳ ಕುರಿತು ವರದಿ ನೀಡಿದ್ದಾರೆ. ಇಂದು ಖರ್ಗೆ ಬೆಂಗಳೂರಿನಿಂದ ದೆಹಲಿ ತೆರಳಿದ್ದು, ಸಂಜೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆಯನ್ನೂ ಮಾಡಿದ್ದಾರೆ.

ಇದನ್ನೂ ಓದಿ: ನಾನು ಮಾತು ಕೊಡಲ್ಲ, ಕೊಟ್ಟರೆ ಮಾಡೇ ಮಾಡುತ್ತೇನೆ: ಕೊಟ್ಟ ಮಾತಿನ ಬಗ್ಗೆ ಸಿಎಂ ಪ್ರಸ್ತಾಪ

ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಮಾತನಾಡಿದ್ದು, ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕರಲ್ಲಿ ಒಗ್ಗಟ್ಟಿದೆ, ಯಾವುದೇ ರೀತಿಯ ಗೊಂದಲಗಳಿಲ್ಲ. ವೋಟ್ ಚೋರಿ ರ‍್ಯಾಲಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಬುಲಾವ್ ಬಗ್ಗೆ ಕೆ.ಸಿ.ವೇಣುಗೋಪಾಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಮಂಗಳೂರಿನಲ್ಲಿ ವೇಣುಗೋಪಾಲ್ ಎದುರು ಡಿಕೆ ಡಿಕೆ ಘೋಷಣೆ: ಡಿಕೆಶಿ ಆಪ್ತನಿಗೆ ಹೈಕಮಾಂಡ್ ಬಿಗ್ ಶಾಕ್

ದೆಹಲಿಯ 10 ಜನಪತ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ಸಭೆ ನಡೆಸಿದ್ದು, ಎಐಸಿಸಿ ಅಧ್ಯಕ್ಷ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಿದ್ದರು. ಸತತ ಎರಡು ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಮೀಟಿಂಗ್‌ ಮಾಡಿದ್ದಾರೆ. ಹೈಕಮಾಂಡ್ ರಾಜ್ಯ ಕಾಂಗ್ರೆಸ್ ಮನೆಯ ಖಾಯಿಲೆಗೆ ಅದ್ಯಾವ ಮದ್ದು ಅರೆಯುತ್ತೆ ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್