AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮೈಸೂರಿನಿಂದ ಸಂದೇಶ್ ನಾಗರಾಜ್, ಕೋಲಾರದಿಂದ ಸಿ.ಆರ್. ಮನೋಹರ್​, ಬೆಳಗಾವಿಯಿಂದ ಲಖನ್​ ಸ್ಪರ್ಧೆ ಊಹಾಪೋಹಕ್ಕೆ ತೆರೆ ಬಿದ್ದಿದೆ. 2ನೇ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತ ಊಹಾಪೋಹಕ್ಕೆ ತೆರೆ ಬಿದ್ದಿದೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 19, 2021 | 10:03 PM

Share

ಬೆಂಗಳೂರು: ವಿಧಾನಪರಿಷತ್​ ಚುನಾವಣೆ ಡಿಸೆಂಬರ್ 10 ರಂದು ನಡೆಯಲಿದೆ. ಈ ಹಿನ್ನೆಲೆ 25 ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಲಿ ಸದಸ್ಯರ ಪೈಕಿ ಕೊಡಗು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಲಾಗಿದೆ. ಹಾಲಿ ಎಂಎಲ್​ಸಿ ಸುನಿಲ್ ಸುಬ್ರಮಣಿ ಸೋದರನಿಗೆ ಟಿಕೆಟ್​ ನೀಡಲಾಗಿದೆ. ಸುನಿಲ್ ಸುಬ್ರಮಣಿ ಸಹೋದರ ಸುಜಾ ಕುಶಾಲಪ್ಪಗೆ ಟಿಕೆಟ್​ ಕೊಡಲಾಗಿದೆ. ಶಿವಮೊಗ್ಗದಲ್ಲಿ ವಿಧಾನಪರಿಷತ್​ನ ಮಾಜಿ ಸಭಾಪತಿ ಶಂಕರಮೂರ್ತಿ ಪುತ್ರ ಅರುಣ್​ಗೆ ಟಿಕೆಟ್​ ನೀಡಲಾಗಿದೆ.

ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಬಿಜೆಪಿಯಿಂದ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ. ಪಟ್ಟಿ ಇಲ್ಲಿ ನೀಡಲಾಗಿದೆ: ಕೊಡಗು- ಸುಜಾ ಕುಶಾಲಪ್ಪ ದಕ್ಷಿಣ ಕನ್ನಡ- ಕೋಟ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್ ಶಿವಮೊಗ್ಗ- ಡಿ.ಎಸ್. ಅರುಣ್ ಧಾರವಾಡ- ಪ್ರದೀಪ್ ಶೆಟ್ಟರ್ ಬೆಳಗಾವಿ- ಮಹಾಂತೇಶ್ ಕವಟಗಿಮಠ ಕಲಬುರಗಿ- ಬಿ.ಜಿ.  ಪಾಟೀಲ್ ಚಿತ್ರದುರ್ಗ- ಕೆ.ಎಸ್. ನವೀನ್ ಮೈಸೂರು- ರಘು ಕೌಟಿಲ್ಯ ಹಾಸನ- ವಿಶ್ವನಾಥ್ ಉತ್ತರ ಕನ್ನಡ- ಗಣಪತಿ ಉಳ್ವೇಕರ್ ಬೀದರ್- ಪ್ರಕಾಶ್ ಖಂಡ್ರೆ ಬೆಂಗಳೂರು ನಗರ- ಗೋಪಿನಾಥ್ ರೆಡ್ಡಿ ಮಂಡ್ಯ- ಕೆ.ಆರ್. ಪೇಟೆ ಮಂಜು ಕೋಲಾರ- ಡಾ.ಕೆ.ಎನ್‌. ವೇಣುಗೋಪಾಲ್ ರಾಯಚೂರು- ವಿಶ್ವನಾಥ್ ಬನಹಟ್ಟಿ ಬೆಂಗಳೂರು ಗ್ರಾಮಾಂತರ- ಬಿ.ಎಂ. ನಾರಾಯಣಸ್ವಾಮಿ ಬಳ್ಳಾರಿ- ವೈ.ಎಮ್. ಸತೀಶ್ ತುಮಕೂರು- ಎನ್. ಲೋಕೇಶ್ ವಿಜಯಪುರ- ಪಿ.ಹೆಚ್. ಪುಜಾರ್

ದ್ವಿಸದಸ್ಯ ಕ್ಷೇತ್ರಗಳಲ್ಲಿ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಸ್ಪರ್ಧೆ ಮಾಡಲಿದೆ. ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸಿದ್ದ ಸಂದೇಶ್​ಗೆ ನಿರಾಸೆ ಉಂಟಾಗಿದೆ. ಜೆಡಿಎಸ್​ ಸದಸ್ಯ ಸಂದೇಶ್ ನಾಗರಾಜ್​ಗೆ ಭಾರಿ ನಿರಾಸೆ ಆಗಿದೆ. ಮೈಸೂರಿನಿಂದ ಸಂದೇಶ್ ನಾಗರಾಜ್, ಕೋಲಾರದಿಂದ ಸಿ.ಆರ್. ಮನೋಹರ್​, ಬೆಳಗಾವಿಯಿಂದ ಲಖನ್​ ಸ್ಪರ್ಧೆ ಊಹಾಪೋಹಕ್ಕೆ ತೆರೆ ಬಿದ್ದಿದೆ. 2ನೇ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತ ಊಹಾಪೋಹಕ್ಕೆ ತೆರೆ ಬಿದ್ದಿದೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ; ವಿಧಾನ ಪರಿಷತ್ ಚುನಾವಣೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಇದನ್ನೂ ಓದಿ: ಬಳ್ಳಾರಿ ವಿಧಾನ ಪರಿಷತ್ ಚುನಾವಣೆ; ಮುಂಡರಗಿ ನಾಗರಾಜ್​ಗೆ ಟಿಕೆಟ್ ನೀಡುವಂತೆ ಸೋನಿಯಾ ಗಾಂಧಿಗೆ ಪತ್ರ ಬರೆದ ದಲಿತ ನಾಯಕರು

Published On - 10:00 pm, Fri, 19 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್