AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಹಂತದಲ್ಲಿ ಸಂಪುಟ‌ ರಚನೆ ಮಾಡಲು ಹೈಕಮಾಂಡ್ ಪ್ಲಾನ್? ಸೋಮವಾರ ಸಿಎಂ ಮತ್ತೆ ದೆಹಲಿಗೆ ತೆರಳುವ ಸಾಧ್ಯತೆ

Basavaraj Bommai Cabinet: ತ್ವರಿತವಾಗಿ ಸಂಪುಟ ರಚನೆ ಮಾಡಲು ಹೈಕಮಾಂಡ್ ಉತ್ಸಾಹ ತೋರಿದ್ದು ಮುಂದಿನ ಬುಧವಾರ ಅಥವಾ ಗುರುವಾರ ಹೊಸ ಸಚಿವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಒಂದೇ ಹಂತದಲ್ಲಿ ಸಂಪುಟ‌ ರಚನೆ ಮಾಡಲು ಹೈಕಮಾಂಡ್ ಪ್ಲಾನ್? ಸೋಮವಾರ ಸಿಎಂ ಮತ್ತೆ ದೆಹಲಿಗೆ ತೆರಳುವ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Jul 31, 2021 | 4:57 PM

Share

ದೆಹಲಿ: ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ‌ ಸಂಪುಟ ತಂಡ ಕಟ್ಟಲು ಹರಸಹಾಸ ಮಾಡ್ತಿದ್ದಾರೆ. ಸಿಎಂ ಬೊಮ್ಮಾಯಿ ದೆಹಲಿ ಭೇಟಿ ವೇಳೆ‌ ಸಂಪುಟ ರಚನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಬಳಿ ಚರ್ಚೆ ನಡೆಸಿದ್ದಾರೆ. ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡುವಂತೆ ಮನವಿ ಮಾಡಿದ್ದಾರೆ. ತ್ವರಿತವಾಗಿ ಸಂಪುಟ ರಚನೆ ಮಾಡಲು ಹೈಕಮಾಂಡ್ ಉತ್ಸಾಹ ತೋರಿದ್ದು ಮುಂದಿನ ಬುಧವಾರ ಅಥವಾ ಗುರುವಾರ ಹೊಸ ಸಚಿವರು ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಒಂದೇ ಹಂತದಲ್ಲಿ ಸಂಪುಟ‌ ರಚನೆ ಮಾಡಲು ಹೈಕಮಾಂಡ್ ಪ್ಲಾನ್ ಯಡಿಯೂರಪ್ಪನವರ ನೇತೃತ್ವ ಇಲ್ಲದ ಬಿಜೆಪಿ ಸರಕಾರದಲ್ಲಿ ಸಚಿವರನ್ನು ನೇಮಿಸುವ ವಿಚಾರವಾಗಿ ಹೈಕಮಾಂಡ್ ಹೆಚ್ಚು ಪ್ರಭಾವ ಬೀರಲಿದೆ. ಒಂದೇ ಹಂತದಲ್ಲಿ ಸಂಪುಟ ರಚನೆ ಮಾಡಲು ಹೈಕಮಾಂಡ್ ಪ್ಲಾನ್ ಮಾಡಿದೆ. ಮುಂದಿನ ವಿಧಾನಸಭಾ ಚುನಾವಣೆಗೆ ಒಂದೂವರೆ ವರ್ಷ ಬಾಕಿ ಉಳಿದಿದ್ದು, ಒಂದೇ ಹಂತದಲ್ಲಿ ಎನೆರ್ಜೆಟಿಕ್ ಟೀಂ ಕಟ್ಟಿ ಜನರಲ್ಲಿ ಸರಕಾರದ ಬಗ್ಗೆ ಒಳ್ಳೆ ಅಭಿಪ್ರಾಯದ ಮೂಡಿಸಲು ಬಿಜೆಪಿ ಹೈಕಮಾಂಡ್ ತಯಾರಿ ನಡೆಸಿದೆ. ವಲಸೆ ಬಂದವರಿಗೆ ಮತ್ತೆ ಸಚಿವ ಸ್ಥಾನ ನೀಡುವುದು ಸೇರಿದಂತೆ ಮೂಲ ಬಿಜೆಪಿ ಸಚಿವಾಕಾಂಕ್ಷಿಗಳ‌ ಬೇಡಿಕೆ ಈಡೇರಿಸುವುದು ಕಷ್ಟವಾದ್ರೆ ಎರಡು ಹಂತದಲ್ಲಿ ರಚನೆ ಮಾಡಲು ಹೈಕಮಾಂಡ್ ಯೋಚಿಸಿದೆ.

ಸಂಪುಟ ಸರ್ಕಸ್: ಸೋಮವಾರ ಮತ್ತೆ ಸಿಎಂ ದೆಹಲಿಗೆ ಈ ಬಾರಿ ದೆಹಲಿ ಭೇಟಿ ವೇಳೆ ಸಿಎಂ‌ ಸಂಪುಟ ರಚನೆ ಬಗ್ಗೆ ಕೇವಲ‌ ಪ್ರಾಥಮಿಕ ಚರ್ಚೆ ನಡೆಸಿದ್ದಾರೆ. ಸಂಪುಟಕ್ಕೆ‌ ಸೇರ್ಪಡೆ ಮಾಡಿಕೊಳ್ಳಲೇ‌ಬೇಕಾದ ಒಂದಷ್ಟು ಮಂದಿಯ ಹೆಸರು ಚರ್ಚೆಯಾಗಿದೆ ಎನ್ನಲಾಗಿದೆ. ಆದ್ರೆ ಒಟ್ಟು ಸಂಪುಟದ ಬಗ್ಗೆ ವಿವರವಾಗಿ ಚರ್ಚೆ ಮಾಡಲು‌ ಸಾಧ್ಯವಾಗಿಲ್ಲ. ಏಕೆಂದರೆ ಸಿಎಂ ಬೊಮ್ಮಾಯಿಯವರಿಗೆ ಸಂಪುಟ ರಚನೆಗೆ ಬೇಕಾದ ತಯಾರಿ ನಡೆಸಲು ಅವಕಾಶ ಸಿಕ್ಕಿಲ್ಲ. ಅರ್ಜೆಂಟಾಗಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಹೀಗಾಗಿ ಸಂಪುಟ ಬಗ್ಗೆ ಚರ್ಚೆ ನಡೆಸಿ ಪಟ್ಟಿ ಫೈನಲ್ ಮಾಡಲು ಸಿಎಂ‌ ಬೊಮ್ಮಾಯಿ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ.‌ ಸೋಮುವಾರ ಸಂಜೆ ಅಥವಾ ಮಂಗಳವಾರ ದೆಹಲಿಗೆ ತೆರಳಿ‌ ಸಂಪುಟ ಸೇರುವವರ ಪಟ್ಟಿ ಫೈನಲ್ ಮಾಡಲಿದ್ದಾರೆ. ಬುಧವಾರ ಅಥವ ಗುರುವಾರ ನೂತನ ಸಚಿವರು ಸಂಪುಟ ಸೇರುವ ಸಾಧ್ಯತೆ ಇದೆ.‌ ಹೈಕಮಾಂಡ್ ನಾಯಕರು ನೇರವಾಗಿ ದೆಹಲಿಯಿಂದ ನೂತನ ಸಚಿವರ ಪಟ್ಟಿಯನ್ನು ಸಿಎಂಗೆ ರವಾನಿಸಲಿದ್ದಾರೆ.

ವರದಿ: ಹರೀಶ್, ಟಿವಿ9 ನವದೆಹಲಿ

ಇದನ್ನೂ ಓದಿ: ಉಪವಾಸ ಬೇಕಾದ್ರೂ ಮಾಡಲಿ, ಇಲ್ಲ ಊಟ ಮಾಡಲಿ; ನಾವಂತೂ ಮೇಕೆದಾಟು ಮಾಡೇ ಮಾಡ್ತೀವಿ: ಅಣ್ಣಾಮಲೈಗೆ ಸಿಎಂ ಬೊಮ್ಮಾಯಿ ಟಾಂಗ್

ಕೊರೊನಾ ಆತಂಕ: ಕೇರಳ-ಕರ್ನಾಟಕ ಗಡಿಯಲ್ಲಿ ಕಠಿಣ ಕ್ರಮ ಜಾರಿ; ಇಂದು ಸಂಜೆ ಜಿಲ್ಲಾಡಳಿತಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

(Karnataka Politics BJP Govt Cabinet formation process CM Basavaraj Bommai BJP Leaders)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ