Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಬ್ರಾಹ್ಮಣ ಸಮುದಾಯದ ನಾಯಕರನ್ನು ಸಿಎಂ ಮಾಡುವತ್ತ ಬಿಜೆಪಿ ಹೈಕಮಾಂಡ್ ಒಲವು?

ಬ್ರಾಹ್ಮಣ ಸಮುದಾಯದವರು ಸಿಎಂ ಆಗಿ ಆಯ್ಕೆಯಾದರೆ ಎಸ್​​​​​ಟಿ ಸಮುದಾಯದವರು ಉಪ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಹಾಗಾದಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಶ್ರೀರಾಮುಲು ಅವರಿಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ.

Karnataka Politics: ಬ್ರಾಹ್ಮಣ ಸಮುದಾಯದ ನಾಯಕರನ್ನು ಸಿಎಂ ಮಾಡುವತ್ತ ಬಿಜೆಪಿ ಹೈಕಮಾಂಡ್ ಒಲವು?
ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಬಿ.ಎಲ್.ಸಂತೋಷ್
Follow us
TV9 Web
| Updated By: guruganesh bhat

Updated on: Jul 26, 2021 | 4:04 PM

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬ್ರಾಹ್ಮಣ ಸಮಾಜದ ಓರ್ವ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಉತ್ಸುಕವಾಗಿದೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧಿ ಬಣದಲ್ಲಿ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ ಕೇಂದ್ರ ಸಚಿವ, ಸಂಸದ ಪ್ರಲ್ಹಾದ ಜೋಶಿ ಬದಲು ಬಿ.ಎಲ್.ಸಂತೋಷ್ ಅವರ ಬಗ್ಗೆ ಹೈಕಮಾಂಡ್​ಗೆ ಹೆಚ್ಚಿನ ಒಲವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಬ್ರಾಹ್ಮಣ ಸಮುದಾಯದವರು ಸಿಎಂ ಆಗಿ ಆಯ್ಕೆಯಾದರೆ ಎಸ್​​​​​ಟಿ ಸಮುದಾಯದವರು ಉಪ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಹಾಗಾದಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಶ್ರೀರಾಮುಲು ಅವರಿಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ.

ಹಳೆ‌ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಡಿಸಿಎಂ ಸೂತ್ರ ರಚಿಸುವ ಸಾಧ್ಯತೆಯಿದ್ದು, ಒಕ್ಕಲಿಗ ಸಮುದಾಯದ ಡಿಸಿಎಂ ಆಯ್ಕೆಗೆ ಬಿಜೆಪಿ ಸೂತ್ರ ರಚಿಸಿದೆ ಎಂದು ಹೇಳಲಾಗುತ್ತಿದೆ. ಸಿ.ಪಿ.ಯೋಗೇಶ್ವರ್ ಸಹ ಡಿಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಒಂದುವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯವನ್ನು ಪರಿಗಣಿಸದೇ ಹೋದಲ್ಲಿ ಅರವಿಂದ ಬೆಲ್ಲದ್ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ. ಸಂಜೆ ದೆಹಲಿಯಿಂದ ಬಿಜೆಪಿಯ ವೀಕ್ಷಕರು ರಾಜ್ಯಕ್ಕೆ ಬರುವ ಸಾಧ್ಯತೆಯಿದ್ದು, ವೀಕ್ಷಕರು ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.

ಸಿಎಂ ಸ್ಥಾನಕ್ಕೆ ಇನ್ನೂ ಇಬ್ಬರು ನಾಯಕರು ಹೆಸರು ಸಹ ಪ್ರಬಲವಾಗಿ ಕೇಳಿಬರುತ್ತಿದೆ. ಸಂಸದ ಶಿವಕುಮಾರ ಉದಾಸಿ ಮತ್ತು ವಿಧಾನಸಭೆ ಸ್ಪೀಕರ್ ಮತ್ತು ಹಿರಿಯ ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರುಗಳು ಸಹ ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿವೆ.

ಈ ಮಧ್ಯೆ ಮುಖ್ಯಮಂತ್ರಿಯಾಗಲು ಕಸರತ್ತು ನಡೆಸುತ್ತಿರುವ ಶಾಸಕ ಮುರುಗೇಶ್ ನಿರಾಣಿ ಅವರ ಬೀಳಗಿ ಕ್ಷೇತ್ರದ ಬಿಜೆಪಿ ಮುಖಂಡರು,ಕಾರ್ಯಕರ್ತರು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 

ಶಿಕಾರಿಪುರ: ಬಿಎಸ್ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಅಂಗಡಿ ಮುಂಗಟ್ಟು ಬಂದ್; ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

BS Yediyurappa: ಪ್ರವಾಹ, ಕೋವಿಡ್ ಸಂಕಷ್ಟ, ಆಪರೇಷನ್ ಕಮಲ, ಜೈಲು ವಾಸ; ಸವಾಲುಗಳನ್ನು ಮೆಟ್ಟಿ ನಿಂತ ಛಲಗಾರ ಯಡಿಯೂರಪ್ಪ

(Karnataka Politics BJP High Command likely to Make CM a Brahmin Community Leader)

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ