ವಿಜಯೇಂದ್ರ-ಸತೀಶ್​ ಜಾರಕಿಹೊಳಿ ದಿಢೀರ್​ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಚಿವ ಸತೀಶ್​ ಜಾರಕಿಹೊಳಿ ಅವರನ್ನು ಧಿಡೀರ್​​ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್​ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ವಿಜಯೇಂದ್ರ-ಸತೀಶ್​ ಜಾರಕಿಹೊಳಿ ದಿಢೀರ್​ ಭೇಟಿ: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ
ಸತೀಶ್​ ಜಾರಕಿಹೊಳಿ, ವಿಜಯೇಂದ್ರ
Edited By: ವಿವೇಕ ಬಿರಾದಾರ

Updated on: Oct 07, 2024 | 12:49 PM

ಬೆಂಗಳೂರು, ಅಕ್ಟೋಬರ್​ 07: ಕರ್ನಾಟಕ ರಾಜಕಾರಣದಲ್ಲಿ (Karnataka Politics) ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijyayendra) ಅವರು ಸಚಿವ ಸತೀಶ್​ ಜಾರಕಿಹೊಳಿ ಅವರನ್ನು (Satish Jarkiholi) ದಿಢೀರ್​​ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್​ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ಮುಡಾ ಹಗರಣ ಪ್ರಕರಣದಲ್ಲಿ ಸಿದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆ, ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಿಎಂ ಕುರ್ಚಿ ಮೇಲೆ ದಲಿತ ನಾಯಕನೇ ಕೂಡಬೇಕೆಂಬ ವಾದ ಜೋರಾದ ಹಿನ್ನೆಲೆಯಲ್ಲಿ ಆಕ್ಟಿವ್ ಆದ ಸತೀಶ್​​ ಜಾರಕಿಹೊಳಿ ಇತ್ತೀಚಿಗೆ ಹೈಕಮಾಂಡ್​​ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಇಲಾಖೆಯ ಕೆಲಸಕ್ಕೆ ಬಂದಿದ್ದೇನೆ: ವಿಜಯೇಂದ್ರ

ಟೋಲ್​ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವ​ರನ್ನು​ ಭೇಟಿಯಾಗಿದ್ದೇನೆ. ಶಿಕಾರಿಪುರ ಬಳಿ  ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಈ ಎರಡು ಟೋಲ್​ನಿಂದ ರೈತರಿಗೆ ಸಮಸ್ಯೆ ಆಗುತ್ತಿದೆ. ಟೋಲ್​ ಶಿಫ್ಟ್ ಮಾಡುವಂತೆ ಸಚಿವರಿಗೆ ಮನವಿ ಮಾಡಿದ್ದೇವೆ. ಸಚಿವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಈ ವಿಚಾರವಾಗಿ ಶೀಘ್ರದಲ್ಲೇ ಸಭೆ ಕರೆಯುವುದಾಗಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: ಜಿಟಿಡಿ ಹೇಳಿಕೆ ಜೆಡಿಎಸ್ ಪಕ್ಷದ ಆಂತರಿಕ ವಿಚಾರ; ಬಿ.ವೈ ವಿಜಯೇಂದ್ರ

ರಾಜಕೀಯ ಟಚ್ ಕೊಡೋದು ಸರಿಯಲ್ಲ: ಸತೀಶ್​

ಬಿವೈ ವಿಜಯೇಂದ್ರ ಮತ್ತು ನನ್ನ ಭೇಟಿಗೆ ರಾಜಕೀಯ ಟಚ್ ಕೊಡೋದು ಸರಿಯಲ್ಲ. ಅದಕ್ಕೆ ಕಾರಣಗಳೂ ಏನೂ ಇಲ್ಲ. ವಿಪಕ್ಷದ ಶಾಸಕರು ಇಲಾಖೆ ಕೆಲಸ ಇದ್ದಾಗ ಬರಲೇಬೇಕಾಗುತ್ತದೆ. ಈಗ ಸಿಎಂ ಆಗುವಂತ ಅವಕಾಶವೂ ಇಲ್ಲ, ಸನ್ನಿವೇಶವೂ ಇಲ್ಲ. ಸಿಎಂ ಬದಲಾವಣೆ ವಿಚಾರವಾಗಿ ಕಳೆದ ದಸರಾದಿಂದಲೇ ಚರ್ಚೆ ಇದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಬಸ್ ಅಲ್ಲಿಯೇ ನಿಂತಿದೆ, ನಾನೊಬ್ಬನೇ ಮೈಸೂರಿಗೆ ಹೋಗುತ್ತಿದ್ದೇನೆ. ಮುಡಾ ವಿವಾದ ಶುರುವಾಗಿದ್ದು ಈಗ ಮೂರು ತಿಂಗಳಿಂದ ಈಚೆಗೆ. ಅದಕ್ಕಿಂತ ಮೊದಲೂ ಹಲವು ಇಲಾಖೆಯ ಸಚಿವರನ್ನು ಭೇಟಿ ಮಾಡಿದ್ದೇನೆ. ಇಲಾಖೆ ಭೇಟಿ ಬಿಟ್ಟು ಬೇರೇನೂ ಇಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:44 pm, Mon, 7 October 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us