AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿಕೆ ಶಿವಕುಮಾರ್​ಗೆ: ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ

Karnataka BJP: ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೂ ಡಿ.ಕೆ. ಶಿವಕುಮಾರ್ ಅಳುಕುತ್ತಿದ್ದಾರೆ. ಡಿ.ಕೆ. ಶಿವಕುಮಾರ್​ ಎದುರು ಸಿದ್ದರಾಮಯ್ಯ ಕೈಮೇಲಾಯಿತೆ? ಎಂದು ಕೇಳಿ ಕರ್ನಾಟಕ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿದೆ.

ಅತ್ಯಂತ ಅಸಹಾಯಕ ಅಧ್ಯಕ್ಷ ಎಂಬ ಪಟ್ಟ ಡಿಕೆ ಶಿವಕುಮಾರ್​ಗೆ: ಟ್ವೀಟ್ ಮೂಲಕ ಟಾಂಗ್ ಕೊಟ್ಟ ಬಿಜೆಪಿ
ಡಿಕೆ ಶಿವಕುಮಾರ್​ ಆರೋಪ ಸುಳ್ಳು ಎಂದ ರಾಜ್ಯ ಬಿಜೆಪಿ
TV9 Web
| Edited By: |

Updated on:Oct 24, 2021 | 2:38 PM

Share

ಬೆಂಗಳೂರು: ಬಹುಶಃ ಕೆಪಿಸಿಸಿ ಕಂಡ ಅತ್ಯಂತ ಅಸಹಾಯಕ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಅಸಹಾಯಕ ಅಧ್ಯಕ್ಷನೆಂಬ ಪಟ್ಟ ಡಿ.ಕೆ. ಶಿವಕುಮಾರ್​ಗೆ ಒಲಿದುಬರಬಹುದು. ತಮ್ಮ ವಿರುದ್ಧ ಸಂಚು ರೂಪಿಸಿದ ವ್ಯಕ್ತಿ ವಿರುದ್ಧ ಶಿಸ್ತುಕ್ರಮ ಇಲ್ಲ. ಶಿಸ್ತುಕ್ರಮ ತೆಗೆದುಕೊಳ್ಳುವುದಕ್ಕೂ ಡಿ.ಕೆ. ಶಿವಕುಮಾರ್ ಅಳುಕುತ್ತಿದ್ದಾರೆ. ಡಿ.ಕೆ. ಶಿವಕುಮಾರ್​ ಎದುರು ಸಿದ್ದರಾಮಯ್ಯ ಕೈಮೇಲಾಯಿತೆ? ಎಂದು ಕೇಳಿ ಕರ್ನಾಟಕ ರಾಜ್ಯ ಬಿಜೆಪಿ ಘಟಕ ಸರಣಿ ಟ್ವೀಟ್ ಮಾಡಿದೆ. ​ ಕೆಪಿಸಿಸಿ ಕಚೇರಿಯಲ್ಲಿ ಸಲೀಂ, ವಿ.ಎಸ್. ಉಗ್ರಪ್ಪ ಪಿಸುಮಾತು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಉಪಚುನಾವಣೆ ನಂತರ ಉತ್ತರ ಕೊಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಆದರೆ, ಕ್ರಮಕೈಗೊಳ್ಳುವ ಬದಲು ಡಿ.ಕೆ. ಶಿವಕುಮಾರ್​ ಮೆತ್ತಗಾಗಿದ್ದಾರೆ. ಸಿದ್ದರಾಮಯ್ಯ ಬಣದ ಉಗ್ರಪ್ಪ ವಿರುದ್ಧ ಶಿಸ್ತುಕ್ರಮಕೈಗೊಂಡ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಎಲ್ಲಿ ಕೈತಪ್ಪುತ್ತೋ ಎಂಬ ಭಯವೇ? ಸಿದ್ದರಾಮಯ್ಯ ದೆಹಲಿ ಪ್ರವಾಸದಿಂದ ಡಿಕೆಶಿ ಕುಗ್ಗಿಹೋಗಿದ್ದಾರಾ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಡಿಕೆಶಿ ಮಾಡಿದ್ದ ಪದಾಧಿಕಾರಿಗಳ ಪಟ್ಟಿ ನಿರ್ಲಕ್ಷ್ಯ ಮಾಡಿತು. ಸಿದ್ದರಾಮಯ್ಯ ಮೊದಲ ದೆಹಲಿ ಭೇಟಿಯಿಂದ ನಿರ್ಲಕ್ಷ್ಯ ಆಯಿತು. 2ನೇ ಭೇಟಿ ಪದಾಧಿಕಾರಿಗಳ ಪಟ್ಟಿ ತಿರಸ್ಕರಿಸುವಂತೆ ಮಾಡಿತು. 3ನೇ ಭೇಟಿ ಕೆಪಿಸಿಸಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ? ಎಂದು ಪ್ರಶ್ನಿಸಲಾಗಿದೆ. ಡಿಕೆಶಿ ಅಸಹಾಯಕ ಕೆಪಿಸಿಸಿ ಅಧ್ಯಕ್ಷರೆಂದು ಬಿಜೆಪಿ ಟ್ವೀಟ್​ ಮಾಡಿದೆ.

ಇದನ್ನೂ ಓದಿ: ‘ಶಾರುಖ್​ ಖಾನ್ ಬಿಜೆಪಿ ಸೇರಿದರೆ, ಡ್ರಗ್ಸ್​ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ’-ಮಹಾ ಸಚಿವನ ವ್ಯಂಗ್ಯ

ಇದನ್ನೂ ಓದಿ: ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿಗೆ ಟಾಂಗ್ ಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ!

Published On - 2:35 pm, Sun, 24 October 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ