AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ

ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 25, 2021 | 3:18 PM

Share

ಬೆಂಗಳೂರು: ಕರ್ನಾಟಕ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯ ಅಲೆ ಬಂದೆರಗಿದೆ. ಬಿಜೆಪಿಯ ವರಿಷ್ಠರು ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಸದ್ಯ ಗಮನ ಹರಿಸುತ್ತಿಲ್ಲ. ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಿದ ಕಾರಣ ಒಂದು ಮಟ್ಟಿಗಿ ಅಸಮಾಧಾನ, ಅಸಂತುಷ್ಟಿ ಕಡಿಮೆಯಾಗಿದ್ದು, ಪದೇ ಪದೇ ಕರ್ನಾಟಕ ಬಿಜೆಪಿಯ ಆಂತರಿಕ ವಿಷಯಗಳತ್ತ ಲಕ್ಷ್ಯ ಹರಿಸಲು ಬಿಜೆಪಿಯ ಉನ್ನತ ಮಟ್ಟದ ನಾಯಕರು ಸಿದ್ಧರಿಲ್ಲ ಎನ್ನಲಾಗಿದೆ.

ಅಷ್ಟೇ ಅಲ್ಲದೇ, ಈ ಮಧ್ಯೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿಯಾಗಲಿರುವ ಕಾರಣ ರಾಜ್ಯದಲ್ಲಿ ಪಕ್ಷದ ಸಂಘಟನಾ ಪ್ರವಾಸ ಸಹ ನಡೆಯುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದು ಬಹುತೇಕ ಅನುಮಾನ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಿಂದ ಕೈಬಿಡಲಾಗಿದ್ದ ಹಲವು ಮುಖಂಡರು ಸದ್ಯ ಮಾಜಿಗಳಾಗಿದ್ದು, ಮತ್ತೊಮ್ಮೆ ಹಾಲಿ ಸಚಿವರಾಗಿ ಭಡ್ತಿ ಹೊಂದಲು ಯೋಜನೆ ರೂಪಿಸುತ್ತಿದ್ದಾರೆ ಎಂಬುದು ಬಿಜೆಪಿಯ ಒಳಪಾಳಯದಲ್ಲಿ ಖಚಿತವಾಗಿದೆ. ಆದರೆ ಬಿಜೆಪಿ ವರಿಷ್ಠರ ಸದ್ಯದ ಮನಸ್ಥಿತಿ ಮತ್ತು ಯೋಚನೆಗಳು ಈ ಮುಖಂಡರುಗಳಿಗೆ ಪೂರಕವಾಗಿಲ್ಲ. ಹೀಗಾಗಿ ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: 

Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?

(Karnataka Politics CM Basavaraj Bommai Cabinet Expansion is doubt soon)

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ