AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ

ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

Karnataka Politics: ಸಚಿವಾಕಾಂಕ್ಷಿಗಳಿಗೆ ನಿರಾಸೆ; ಸದ್ಯ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅನುಮಾನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 25, 2021 | 3:18 PM

Share

ಬೆಂಗಳೂರು: ಕರ್ನಾಟಕ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆಯ ಅಲೆ ಬಂದೆರಗಿದೆ. ಬಿಜೆಪಿಯ ವರಿಷ್ಠರು ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಸದ್ಯ ಗಮನ ಹರಿಸುತ್ತಿಲ್ಲ. ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಿದ ಕಾರಣ ಒಂದು ಮಟ್ಟಿಗಿ ಅಸಮಾಧಾನ, ಅಸಂತುಷ್ಟಿ ಕಡಿಮೆಯಾಗಿದ್ದು, ಪದೇ ಪದೇ ಕರ್ನಾಟಕ ಬಿಜೆಪಿಯ ಆಂತರಿಕ ವಿಷಯಗಳತ್ತ ಲಕ್ಷ್ಯ ಹರಿಸಲು ಬಿಜೆಪಿಯ ಉನ್ನತ ಮಟ್ಟದ ನಾಯಕರು ಸಿದ್ಧರಿಲ್ಲ ಎನ್ನಲಾಗಿದೆ.

ಅಷ್ಟೇ ಅಲ್ಲದೇ, ಈ ಮಧ್ಯೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿಯಾಗಲಿರುವ ಕಾರಣ ರಾಜ್ಯದಲ್ಲಿ ಪಕ್ಷದ ಸಂಘಟನಾ ಪ್ರವಾಸ ಸಹ ನಡೆಯುತ್ತಿದೆ. ಹೀಗಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದು ಬಹುತೇಕ ಅನುಮಾನ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದಿಂದ ಕೈಬಿಡಲಾಗಿದ್ದ ಹಲವು ಮುಖಂಡರು ಸದ್ಯ ಮಾಜಿಗಳಾಗಿದ್ದು, ಮತ್ತೊಮ್ಮೆ ಹಾಲಿ ಸಚಿವರಾಗಿ ಭಡ್ತಿ ಹೊಂದಲು ಯೋಜನೆ ರೂಪಿಸುತ್ತಿದ್ದಾರೆ ಎಂಬುದು ಬಿಜೆಪಿಯ ಒಳಪಾಳಯದಲ್ಲಿ ಖಚಿತವಾಗಿದೆ. ಆದರೆ ಬಿಜೆಪಿ ವರಿಷ್ಠರ ಸದ್ಯದ ಮನಸ್ಥಿತಿ ಮತ್ತು ಯೋಚನೆಗಳು ಈ ಮುಖಂಡರುಗಳಿಗೆ ಪೂರಕವಾಗಿಲ್ಲ. ಹೀಗಾಗಿ ಸದ್ಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಡೌಟು ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: 

Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

Punjab CM: ಪಂಜಾಬ್ ನೂತನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಛನ್ನಿ ಯಾರು? ರಾಜಕೀಯ ಹಿನ್ನೆಲೆ ಏನು?

(Karnataka Politics CM Basavaraj Bommai Cabinet Expansion is doubt soon)

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?