AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾಭಿಪ್ರಾಯವಿಲ್ಲದ ಬಿಜೆಪಿ ಸರ್ಕಾರಕ್ಕೆ ಮುಂದೆ ಅಧಿಕಾರ ಸಿಗಲ್ಲವೆಂದು ಗೊತ್ತಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಗುಡುಗು

ಕಪೋಲ ಕಲ್ಪಿತ 'ಚುನಾವಣಾ ಚಾಣಕ್ಯ'ನ ವಾಸ್ತವ ನಡವಳಿಕೆ ಬಿಜೆಪಿ ನಾಯಕರಿಗೇ ಗೊತ್ತಿದೆ. ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಸೇರಿ ಬಂದವರ ರೌಡಿಸಂ ವರ್ತನೆ ಸಹಜ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಟೀಕೆ ಮಾಡಿದೆ.

ಜನಾಭಿಪ್ರಾಯವಿಲ್ಲದ ಬಿಜೆಪಿ ಸರ್ಕಾರಕ್ಕೆ ಮುಂದೆ ಅಧಿಕಾರ ಸಿಗಲ್ಲವೆಂದು ಗೊತ್ತಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಗುಡುಗು
ಟ್ವಿಟರ್​ನಲ್ಲಿ ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಫೋಟೋ ಹಂಚಿಕೊಂಡ ಕಾಂಗ್ರೆಸ್ (ಎಡ ಚಿತ್ರ)
TV9 Web
| Edited By: |

Updated on:Jan 14, 2023 | 3:48 PM

Share

ಬೆಂಗಳೂರು: ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ (C.P.Yogeshwar) ಕಾರ್ಯಕರ್ತರೊಬ್ಬರ ಜೊತೆ ಮಾತನಾಡಿದ್ದು ಎನ್ನಲಾದ ಆಡಿಯೋ ಸಖತ್ ವೈರಲ್ (Audio Viral) ಆಗಿದೆ. ಮೈಸೂರು ಭಾಗದಲ್ಲಿ ಬಿಜೆಪಿ ಹೇಗೆ ಗೆಲ್ಲುತ್ತದೆ, ಬಿಜೆಪಿಗೆ ಜನಾಭಿಪ್ರಾಯ ಇಲ್ಲ, ಜೆಡಿಎಸ್​ ಹಾಲಿ ಶಾಸಕರು ಎಷ್ಟು ಸೋಲುತ್ತಾರೆ, ಚುನಾವಣೆ ಪೂರ್ವ ಆಪರೇಶನ್ ಕಮಲ, ಸಿದ್ದರಾಮಯ್ಯ ಗೆಲುವು, ಅಮಿತ್ ಶಾ (Amit Shah) ರೌಡಿ ಇದ್ದಂಗೆ ಇತ್ಯಾದಿಗಳನ್ನು ಆಡಿಯೋದಲ್ಲಿ ಕೇಳಿಸಬಹುದು. ಸದ್ಯ ಆಡಿಯೋ ರಾಜ್ಯ ಕಾಂಗ್ರೆಸ್ (Karnataka Congress) ಪಾಲಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದ್ದು, ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ (BJP Karnataka) ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದೆ.

ಜನಾಭಿಪ್ರಾಯದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂಬ ಆಡಿಯೋದಲ್ಲಿನ ಹೇಳಿಕೆ ಸಂಬಂಧ ಟ್ವೀಟ್ ಮಾಡಿದ ಕಾಂಗ್ರೆಸ್, ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ಬಿಜೆಪಿ ನಾಯಕರ ಬಾಯಲ್ಲೇ ಕಾಣಿಸುತ್ತಿದೆ. ಈ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಜನಾಭಿಪ್ರಾಯ ಇಲ್ಲ, ಮುಂದೆ ಅಧಿಕಾರಕ್ಕೆ ಬರುವುದೂ ಇಲ್ಲ ಎಂಬ ಸತ್ಯ ಅವರಿಗೂ ಗೊತ್ತಿದೆ. ಡಬಲ್ ಇಂಜಿನ್ ಸರ್ಕಾರ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದು ಟೀಕಿಸಿದೆ.

ಕೇಂದ್ರ ಗೃಹಸಚಿವ ಅಮಿತ್ ಶಾ ರೌಡಿ ಇದ್ದ ಹಾಗೆ, ಯಾರನ್ನೂ ಬಿಡುವುದಿಲ್ಲ ಎಂಬ ಆಡಿಯೋದಲ್ಲಿನ ಹೇಳಿಕೆ ಸಂಬಂಧ ಟ್ವೀಟ್ ಮಾಡಿದ ಕಾಂಗ್ರೆಸ್, ಕಪೋಲ ಕಲ್ಪಿತ ‘ಚುನಾವಣಾ ಚಾಣಕ್ಯ’ನ ವಾಸ್ತವ ನಡವಳಿಕೆ ಬಿಜೆಪಿ ನಾಯಕರಿಗೇ ಗೊತ್ತಿದೆ. ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಸೇರಿ ಬಂದವರ ರೌಡಿಸಂ ವರ್ತನೆ ಸಹಜ. ನಾಯಕರೇ ರೌಡಿಗಳಾಗಿರುವಾಗ ಅವರ ಪಕ್ಷಕ್ಕೆ ರೌಡಿಗಳ ಸೇರ್ಪಡೆಯೂ ಸಹಜವೇ. ಬಿಜೆಪಿ ಪಕ್ಷ ರೌಡಿಗಳ ಪಕ್ಷ ಎಂಬುದು ಅವರ ನಾಯಕರಿಂದಲೇ ಮತ್ತೊಮ್ಮೆ ಸಾಬೀತಾಗಿದೆ ಎಂದಿದೆ.

ಇದನ್ನೂ ಓದಿ: 2023ರ ಚುನಾವಣೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪಾರುಪತ್ಯ ಸಾಧಿಸಲು ಬಿಜೆಪಿ ರಣತಂತ್ರ, ಇತ್ತ ರಿವರ್ಸ್ ಆಪರೇಷನ್​ಗೆ ಕೈ ಪ್ಲ್ಯಾನ್!

ಆರ್.ಅಶೋಕ್ ತಾಕತ್ತಿದ್ದರೆ ಡಿ.ಕೆ.ಶಿವಕುಮಾರ್ ಎದುರು ಚುನಾವಣೆಗೆ ಸ್ಪರ್ಧಿಸಲಿ ಎಂಬ ಆಡಿಯೋದಲ್ಲಿನ ಹೇಳಿಕೆಯನ್ನು ಮುಂದಿಟ್ಟುಕೊಂಡು ಟ್ವೀಟ್ ಮಾಡಿದ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಪಡೆದ ಬಿಜೆಪಿ ನಿಜ ಬಣ್ಣ ದಿನೇ ದಿನೇ ಬಟಾ ಬಯಲಾಗುತ್ತಿದೆ! ವಾಮ ಮಾರ್ಗದ ಮೂಲಕ ಅಧಿಕಾರ ಪಡೆದ ಬಿಜೆಪಿ ತನ್ನದೇ ಪಕ್ಷದ ಶಾಸಕರ ಹೇಳಿಕೆಗಳಿಂದ ಪ್ರತಿ ದಿನ ಬೆತ್ತಲಾಗುತ್ತಿದೆ. ರಾಜ್ಯದ ಜನ ಬಿಜೆಪಿಗೆ ಪಾಠ ಕಲಿಸಲು ಕಾಯ್ತಿತಿದ್ದಾರೆ! ಎಂದಿದೆ.

ಈ ಬಾರಿ ಚುನಾವಣೆಗೂ ಮೊದಲೇ ಆಪರೇಷನ್ ಕಮಲ ಮಾಡುತ್ತೇವೆ, ಬೇರೆ ಪಕ್ಷದಲ್ಲಿ ಗೆಲ್ಲುವ ನಾಯಕರನ್ನು ಬಿಜೆಪಿಗೆ ಕರೆತರುತ್ತೇವೆ ಎಂಬ ಆಡಿಯೋದಲ್ಲಿನ ಹೇಳಿಕೆ ಮುಂದಿಟ್ಟುಕೊಂಡು ಟ್ವೀಟ್ ಮಾಡಿದ ಕಾಂಗ್ರೆಸ್, ಈ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಜನಾಭಿಪ್ರಾಯ ಇಲ್ಲವೇ ಇಲ್ಲ. ಸ್ವಂತ ಶಕ್ತಿಯ ಮೇಲೆ ಗೆಲ್ಲುವ ಸಾಮರ್ಥ್ಯವೂ ಇಲ್ಲ. ಆಪರೇಷನ್ ಕಮಲದಂತಹ ಅನಿಷ್ಟಗಳ ಮೂಲಕ ಸರ್ಕಾರ ಮಾಡುತ್ತೇವೆ ಎಂದು ಘಂಟಾಘೋಷವಾಗಿ ಲಜ್ಜೆಯಿಲ್ಲದೆ ಹೇಳಿಕೊಳ್ಳುವ ಪ್ರಪಂಚದ ಏಕೈಕ ಪಕ್ಷ ಬಿಜೆಪಿ ಎಂದು ವಾಗ್ದಾಳಿ ನಡೆಸಿದೆ.

ಇನ್ನು, ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಡುವಿನ ಶೀತಲಸಮರ ಹಾಗೂ ವಾಗ್ವಾದದವನ್ನು ಮುಂದಿಟ್ಟುಕೊಂಡು ಟ್ವೀಟ್ ಮಾಡಿದ ಕಾಂಗ್ರೆಸ್, ಅಸಹ್ಯದ ಪರಮಾವಧಿ ತಲುಪಿದೆ ಬಿಜೆಪಿ. ಒಬ್ಬರು ‘ನೀಚ’ ಎನ್ನುತ್ತಾರೆ. ಮತ್ತೊಬ್ಬರು ‘ಪಿಂಪ್’ ಎನ್ನುತ್ತಾರೆ. ಇನ್ನೊಬ್ಬರು ‘ಸಿಡಿ’ ಎನ್ನುತ್ತಾರೆ. BJP vs BJP ಕಿತ್ತಾಟ ಅತ್ಯಂತ ಕೀಳು ಹಂತಕ್ಕೆ ತಲುಪಿದೆ. ತಮ್ಮ ಪಕ್ಷವನ್ನೇ ನಿಭಾಯಿಸಲಾಗದ ಅಸಮರ್ಥರಾದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಬಗ್ಗೆ ಮಾತಾಡುವುದು ಆಕಾಶಕ್ಕೆ ಉಗುಳಿದಂತೆಯೇ ಸರಿ ಎಂದು ಟೀಕಿಸಿದೆ.

ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್​ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್​ ಸಚಿವ ಎಂದು ಹೇಳಿದ್ದರು.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Sat, 14 January 23

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ