AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾದಷ್ಟು ಜನ ಆಸೆಪಡ್ತಾರೆ, ಏನೂ ಮಾಡಲಾಗದು; ಡಿಸಿಎಂ ಕೂಗಿಗೆ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ತಿರುಗೇಟು

DK Shivakumar on DCM Row in Congress: ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಹುದ್ದೆ ವಿಚಾರದಲ್ಲಿ ಕೂಗೆಬ್ಬಿಸಿರುವ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬೇಕಾದಷ್ಟು ಜನ ಆಸೆಪಡ್ತಾರೆ, ಏನೂ ಮಾಡಲಾಗದು; ಡಿಸಿಎಂ ಕೂಗಿಗೆ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್
Anil Kalkere
| Edited By: |

Updated on: Sep 22, 2023 | 3:37 PM

Share

ಬೆಂಗಳೂರು, ಸೆಪ್ಟೆಂಬರ್ 22: ಕಾಂಗ್ರೆಸ್​ನಲ್ಲಿ (Congress) ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾವೂ ಮೇಲ್ಮನವಿ ಸಲ್ಲಿಸಿದ್ದೆವು. ಎರಡೂ ರಾಜ್ಯಗಳನ್ನು ಕರೆದು ಮಾತನಾಡಿ ಎಂದು ಕೇಳಿಕೊಂಡಿದ್ದೆವು. ನಮ್ಮಿಂದ ಏನಾಗುತ್ತದೆಯೋ ಅದನ್ನು ಮಾಡುತ್ತೇವೆ ಎಂದರು. ಮಳೆ ನಿರೀಕ್ಷೆ ಮಾಡಿದ್ದೆವು, ಆದ್ರೆ ಆಗಿಲ್ಲ. ಮಧ್ಯದಲ್ಲಿ ರೈತರನ್ನೂ ನಾವು ಕಾಪಾಡಿದ್ದೇವೆ. ರೈತರಿಗೆ ತಿಳುವಳಿಕೆ ಕೊಡ್ಬೇಕು ಅಂದುಕೊಂಡಿದ್ದೆವು. ಕೊನೆಗೆ ರೈತರ ಬೆಳೆಗಳಿಗೆ ನೀರು ಬಿಟ್ಟಿದ್ದೇವೆ. ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ರೈತ ಸಂಘಟನೆಳೂ ಅರ್ಜಿ ಸಲ್ಲಿಸಿವೆ. ತಮಿಳುನಾಡು ರೈತರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ಬಂದ್​​ನಿಂದ ಪ್ರಯೋಜನ ಆಗಲ್ಲ. ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಆದರೆ ಕಷ್ಟ. ವಿಚಾರ ಕೋರ್ಟ್​​​ನಲ್ಲಿದೆ. ನಾವೂ ರೈತರಿಗಾಗೇ ಹೋರಾಟ ಮಾಡ್ತಿರೋದು. ಜನರಿಗೆ ತೊಂದರೆ ಆಗೋದು ಬೇಡ. ಪ್ರತಿಭಟನೆ, ಹೋರಾಟ ಮಾಡಿಕೊಳ್ಳಲಿ. ಆದರೆ, ಬಂದ್ ಕೈ ಬಿಡಿ ಎಂದು ಮನವಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಹೆಚ್​ಡಿಕೆ, ಬಿಜೆಪಿಗೆ ತಿರುಗೇಟು

ನಾನು ಹಿಂದೆ ದೇವಸ್ಥಾನಕ್ಕೆ ಹೋದಾಗ ಗೇಲಿ ಮಾಡಿದ್ದರು. ಅವರು. ಆದರೆ, ಅವರು ಹೋಮ ಎಲ್ಲ ಮಾಡಿಸಿದರು. ನಾನು ಅದನ್ನೆಲ್ಲಾ ಹೇಳೋಕೆ ಹೋಗಲ್ಲ. ಎಲ್ಲರಿಗೂ ಉತ್ತರ ಕೊಡೋ ಶಕ್ತಿ‌ ನನಗೆ ಇದೆ. ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿಗೆಲ್ಲಾ ನಿಂತಲ್ಲಿಂದಲೇ ಉತ್ತರ ಕೊಡಲು ಗೊತ್ತಿದೆ ಎಂದು ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಡಿಸಿಎಂ ಮಾಡಿ ಎಂದು ವೈಯಕ್ತಿಕವಾಗಿ ಕೇಳುತ್ತಿಲ್ಲ: ಹೈಕಮಾಂಡ್​​ ಮಾಡಿದ್ರೆ ಓಕೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಕನ್ನಡಪರ ಸಂಘಟನೆಗಳಿಗೆ ರೋಷ ಬಂದಿದೆ. ಸ್ವಾಮೀಜಿಗಳು ಬಂದಿದ್ದಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡಿದಾಗ ಇವರೆಲ್ಲ ಎಲ್ಲೋಗಿದ್ರು? ಬಿಜೆಪಿ ಸ್ನೇಹಿತರಿಗೆ ಮನವಿ ಮಾಡುತ್ತಿದ್ದೇನೆ. ದೆಹಲಿಯಲ್ಲಿ ಸಂಸದರ ಸಭೆ ಕರೆದಾಗ ಒಳಗಡೆ ಏನೋ‌ ಮಾತಾಡಿದ್ರು. ಹೊರಗೆ ಮಾಧ್ಯಮಗಳ ಮುಂದೆ ಇನ್ನೇನೋ‌ ಮಾತಾಡಿದ್ರು. ಇದಕ್ಕೆಲ್ಲಾ ಪರಿಹಾರ ಮೇಕೆದಾಟು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ