AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಕಾದಷ್ಟು ಜನ ಆಸೆಪಡ್ತಾರೆ, ಏನೂ ಮಾಡಲಾಗದು; ಡಿಸಿಎಂ ಕೂಗಿಗೆ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ತಿರುಗೇಟು

DK Shivakumar on DCM Row in Congress: ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಹುದ್ದೆ ವಿಚಾರದಲ್ಲಿ ಕೂಗೆಬ್ಬಿಸಿರುವ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬೇಕಾದಷ್ಟು ಜನ ಆಸೆಪಡ್ತಾರೆ, ಏನೂ ಮಾಡಲಾಗದು; ಡಿಸಿಎಂ ಕೂಗಿಗೆ ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್
Anil Kalkere
| Edited By: |

Updated on: Sep 22, 2023 | 3:37 PM

Share

ಬೆಂಗಳೂರು, ಸೆಪ್ಟೆಂಬರ್ 22: ಕಾಂಗ್ರೆಸ್​ನಲ್ಲಿ (Congress) ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ನನ್ನ ರಾಜಕೀಯ ಟ್ರ್ಯಾಕ್ ರೆಕಾರ್ಡ್ ಇದೆ. 1975 ರಿಂದ ನನ್ನ ಹೋರಾಟ ನೋಡಿದ್ದೀರಿ. ಹೋರಾಟದ ಮೂಲಕ ನಾನು ಈ‌ ಮಟ್ಟಕ್ಕೆ ಬಂದಿದ್ದೇನೆ ಎಂದು ಸ್ವಪಕ್ಷೀಯರಿಗೇ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಾವೂ ಮೇಲ್ಮನವಿ ಸಲ್ಲಿಸಿದ್ದೆವು. ಎರಡೂ ರಾಜ್ಯಗಳನ್ನು ಕರೆದು ಮಾತನಾಡಿ ಎಂದು ಕೇಳಿಕೊಂಡಿದ್ದೆವು. ನಮ್ಮಿಂದ ಏನಾಗುತ್ತದೆಯೋ ಅದನ್ನು ಮಾಡುತ್ತೇವೆ ಎಂದರು. ಮಳೆ ನಿರೀಕ್ಷೆ ಮಾಡಿದ್ದೆವು, ಆದ್ರೆ ಆಗಿಲ್ಲ. ಮಧ್ಯದಲ್ಲಿ ರೈತರನ್ನೂ ನಾವು ಕಾಪಾಡಿದ್ದೇವೆ. ರೈತರಿಗೆ ತಿಳುವಳಿಕೆ ಕೊಡ್ಬೇಕು ಅಂದುಕೊಂಡಿದ್ದೆವು. ಕೊನೆಗೆ ರೈತರ ಬೆಳೆಗಳಿಗೆ ನೀರು ಬಿಟ್ಟಿದ್ದೇವೆ. ಈಗ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ನಮ್ಮ ರೈತ ಸಂಘಟನೆಳೂ ಅರ್ಜಿ ಸಲ್ಲಿಸಿವೆ. ತಮಿಳುನಾಡು ರೈತರೂ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ಬಂದ್​​ನಿಂದ ಪ್ರಯೋಜನ ಆಗಲ್ಲ. ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಆದರೆ ಕಷ್ಟ. ವಿಚಾರ ಕೋರ್ಟ್​​​ನಲ್ಲಿದೆ. ನಾವೂ ರೈತರಿಗಾಗೇ ಹೋರಾಟ ಮಾಡ್ತಿರೋದು. ಜನರಿಗೆ ತೊಂದರೆ ಆಗೋದು ಬೇಡ. ಪ್ರತಿಭಟನೆ, ಹೋರಾಟ ಮಾಡಿಕೊಳ್ಳಲಿ. ಆದರೆ, ಬಂದ್ ಕೈ ಬಿಡಿ ಎಂದು ಮನವಿ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ಹೆಚ್​ಡಿಕೆ, ಬಿಜೆಪಿಗೆ ತಿರುಗೇಟು

ನಾನು ಹಿಂದೆ ದೇವಸ್ಥಾನಕ್ಕೆ ಹೋದಾಗ ಗೇಲಿ ಮಾಡಿದ್ದರು. ಅವರು. ಆದರೆ, ಅವರು ಹೋಮ ಎಲ್ಲ ಮಾಡಿಸಿದರು. ನಾನು ಅದನ್ನೆಲ್ಲಾ ಹೇಳೋಕೆ ಹೋಗಲ್ಲ. ಎಲ್ಲರಿಗೂ ಉತ್ತರ ಕೊಡೋ ಶಕ್ತಿ‌ ನನಗೆ ಇದೆ. ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿಗೆಲ್ಲಾ ನಿಂತಲ್ಲಿಂದಲೇ ಉತ್ತರ ಕೊಡಲು ಗೊತ್ತಿದೆ ಎಂದು ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಡಿಸಿಎಂ ಮಾಡಿ ಎಂದು ವೈಯಕ್ತಿಕವಾಗಿ ಕೇಳುತ್ತಿಲ್ಲ: ಹೈಕಮಾಂಡ್​​ ಮಾಡಿದ್ರೆ ಓಕೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಕನ್ನಡಪರ ಸಂಘಟನೆಗಳಿಗೆ ರೋಷ ಬಂದಿದೆ. ಸ್ವಾಮೀಜಿಗಳು ಬಂದಿದ್ದಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡಿದಾಗ ಇವರೆಲ್ಲ ಎಲ್ಲೋಗಿದ್ರು? ಬಿಜೆಪಿ ಸ್ನೇಹಿತರಿಗೆ ಮನವಿ ಮಾಡುತ್ತಿದ್ದೇನೆ. ದೆಹಲಿಯಲ್ಲಿ ಸಂಸದರ ಸಭೆ ಕರೆದಾಗ ಒಳಗಡೆ ಏನೋ‌ ಮಾತಾಡಿದ್ರು. ಹೊರಗೆ ಮಾಧ್ಯಮಗಳ ಮುಂದೆ ಇನ್ನೇನೋ‌ ಮಾತಾಡಿದ್ರು. ಇದಕ್ಕೆಲ್ಲಾ ಪರಿಹಾರ ಮೇಕೆದಾಟು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ