AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಉಪಸಭಾಪತಿ ಸ್ಥಾನ ಚುನಾವಣೆ; ಬಿಜೆಪಿಗೆ ‘ಸಂಖ್ಯಾ ಬಲ’, ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿಗೆ ಟಫ್ ಫೈಟ್

ಇಂದು ವಿಧಾನಪರಿಷತ್​ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸಂಖ್ಯಾ ಬಲದ ಮೇಲೆ ಬಿಜೆಪಿಗೆ ಉಪಸಭಾಪತಿ ಸ್ಥಾನ ಒಲಿಯುವ ಸಧ್ಯತೆ ಇದೆ. ಇನ್ನೊಂದೆಡೆ ಕಾಂಗ್ರೆಸ್ -ಜೆಡಿಎಸ್ ಒಂದಾದರೆ ಬಿಜೆಪಿಗೆ ತೀವ್ರ ಪೈಪೋಟಿ ಏರಲಿದೆ.

ಪರಿಷತ್ ಉಪಸಭಾಪತಿ ಸ್ಥಾನ ಚುನಾವಣೆ; ಬಿಜೆಪಿಗೆ 'ಸಂಖ್ಯಾ ಬಲ', ಕಾಂಗ್ರೆಸ್-ಜೆಡಿಎಸ್ ಒಂದಾದರೆ ಬಿಜೆಪಿಗೆ ಟಫ್ ಫೈಟ್
ಎಂ.ಕೆ.ಪ್ರಾಣೇಶ್, ಅರವಿಂದ ಕುಮಾರ್ ಅರಳಿ
TV9 Web
| Edited By: Rakesh Nayak Manchi|

Updated on:Dec 23, 2022 | 9:18 AM

Share

ಬೆಳಗಾವಿ: ವಿಧಾನ ಪರಿಷತ್​ ಉಪಸಭಾಪತಿ ಸ್ಥಾನಕ್ಕೆ ಇಂದು ಬೆಳಗ್ಗೆ 11 ಗಂಟೆಗೆ ಚುನಾವಣೆ (Legislative council Deputy Chairman election) ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ (M.K.Pranesh) ಗೆಲುವು ಬಹುತೇಕ ಖಚಿತವಾಗಿದೆ. ಪ್ರಾಣೇಶ್ ಪರಿಷತ್ ಸದಸ್ಯತ್ವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವೂ ದಲಿತ ಅಭ್ಯರ್ಥಿಯನ್ನ ಕಣಕ್ಕಿಳಿಸಿ ರಾಜಕೀಯ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಆದರೆ ಚುನಾವಣೆಯಿಂದ ದೂರವೇ ಇರುವ ಜೆಡಿಎಸ್ ತಟಸ್ಥ ನೀತಿ ಅನುಸತಿಸಿದೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಚುನಾವಣೆ ತೀವ್ರ ಪೈಪೋಟಿ ಏರ್ಪಡಲಿದೆ.

ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ.ಪ್ರಾಣೇಶ್ ಕಣದಲ್ಲಿದ್ದರೆ, ಕಾಂಗ್ರೆಸ್​​ ಪಕ್ಷವು ಅರವಿಂದ ಕುಮಾರ್ ಅರಳಿ (Aravind Kumar Arali) ಅವರನ್ನು ಪ್ರತಿಸ್ಪರ್ಧಿಯನ್ನಾಗಿ ಕಣಕ್ಕಿಳಿಸಿದೆ. ಪರಿಷತ್​ನಲ್ಲಿ ಅತಿ ಹೆಚ್ಚು ಸಂಖ್ಯಾ ಬಲವನ್ನು ಹೊಂದಿರುವುದರಿಂದ ಗೆಲುವು ಬಿಜೆಪಿಯ ಪಾಲಾಗುವ ಸಾಧ್ಯತೆ ಇದೆ. ಆದರೆ ರಾಜಕೀಯ ಲೆಕ್ಕಾಚಾರವನ್ನು ಹಾಕಿರುವ ಕಾಂಗ್ರೆಸ್, ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

ಇದನ್ನೂ ಓದಿ: ಭಾನುವಾರ ಎಲ್ಲರೂ ಟಿವಿ ಮುಂದೆ ಕುತ್ಕೊಂಡ್ರೆ ಎಲ್ಲವೂ ಗೊತ್ತಾಗುತ್ತೆ: ಕುತೂಹಲ ಹೆಚ್ಚಿಸಿದ ಜನಾರ್ದನ ರೆಡ್ಡಿ ಮಾತುಗಳು

ಪ್ರಾಣೇಶ್ ಪ್ರತಿಸ್ಪರ್ಧಿಯಾಗಿ ಅರವಿಂದ ಕುಮಾರ್ ಅರಳಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಲಿದೆ. ಬಿಜೆಪಿಗೆ ಸಂಖ್ಯಾ ಬಲ ಇದ್ದರೂ ಅಭ್ಯರ್ಥಿ ಪ್ರಾಣೇಶ್ ಅವರ ಪರಿಷತ್ ಸದಸ್ಯತ್ವದ ಕುರಿತ ಪ್ರಕರಣ ನ್ಯಾಯಾಲಯದಲ್ಲಿ ಮುಂದುವರಿದಿದಿದೆ. ಹೀಗಾಗಿ ಎಂ.ಕೆ ಪ್ರಾಣೇಶ್ ಅನರ್ಹಗೊಂಡರೆ ಲಾಭ ಆಗಬಹುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್ ಹಾಕಿಕೊಂಡಿದೆ.

ಇನ್ನೊಂದೆಡೆ, ಜೆಡಿಎಸ್ ‌ಬೆಂಬಲ ನೀಡುವ ಬಗ್ಗೆ ಮಾತುಕತೆ ಅಂತಿಮವಾಗಿಲ್ಲ. ಹೀಗಾಗಿ ಜೆಡಿಎಸ್ ನಾಯಕರು ತಟಸ್ಥರಾಗಿರಲು ನಿರ್ಧರಿಸಿದ್ದಾರೆ. ಒಂದೊಮ್ಮೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮೂಲಕ ಉಪಸಭಾಪತಿ ಚುನಾವಣೆಗೆ ಹೋದರೆ ಬಿಜೆಪಿಗೆ ಚುನಾವಣೆ ಟಫ್​ ಆಗಲಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Fri, 23 December 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!