Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ

ರೌಡಿ ಮೋರ್ಚಾ ಮಾಡಲಿ ಎಂದು ಸಿದ್ದರಾಮಯ್ಯ ಟ್ವೀಟ್​​ ವಿಚಾರಕ್ಕೆ ಕಿಡಿಕಾರಿದ ಬಿಜೆಪಿಯ ಸಿ.ಟಿ.ರವಿ, ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು ಎಂದು ಪ್ರಶ್ನಿಸಿದರು.

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
Follow us
TV9 Web
| Updated By: Rakesh Nayak Manchi

Updated on:Dec 06, 2022 | 4:10 PM

ಚಿಕ್ಕಮಗಳೂರು: ರೌಡಿಗಳು ಬಿಜೆಪಿ ಸೇರಿಕೊಳ್ಳುತ್ತಿರುವ ಬಗ್ಗೆ ಕಾಂಗ್ರೆಸ್ ಟೀಕಿಸುತ್ತಿದ್ದು, ಬಿಜೆಪಿ ರೌಡಿ ಮೋರ್ಚಾ ಮಾಡಲಿ ಎಂದು ಸಿದ್ದರಾಮಯ್ಯ ಟ್ವೀಟ್​​ ಮಾಡಿದ್ದರು. ಇದಕ್ಕೆ ಕಿಡಿಕಾರಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi), ಆ ದಿನಗಳು ಕಥೆ (Aa Dinagalu Story) ಯಾರದ್ದು ಎಂದು ಸಿದ್ದರಾಮಯ್ಯ (Siddaramaiah) ಅವರು ಹೇಳಬೇಕು. ಅಗ್ನಿ ಶ್ರೀಧರ್ ಯಾರ ಹೆಸರು ಹೇಳಿದ್ದಾರೆ ಮತ್ತು ಅವರು ಯಾವ ಪಾರ್ಟಿ? ಕೊತ್ವಾಲ್ ರಾಮಚಂದ್ರ (Kotwal Ramachandra) ಶಿಷ್ಯ ಯಾರು? ಜಯರಾಜ್ (Jayaraj) ಶಿಷ್ಯ ಯಾರು? ಆ ದಿನಗಳನ್ನು ಮೆಲುಕು ಹಾಕಿದರೆ ಗೊತ್ತಾಗುತ್ತದೆ ಸಿದ್ದರಾಮಯ್ಯನವರೇ, ಆ ದಿನಗಳನ್ನು ಮೆಲುಕು ಹಾಕಿದರೆ ರೌಡಿ ಯಾರು ಎಂದು ಗೊತ್ತಾಗುತ್ತದೆ ಎಂದು ಹೇಳಿದರು. ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಈ ಹೇಳಿಕೆ ನೀಡಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಅನೇಕ ರೌಡಿಗಳು ಸೇರಿದ್ದು, ಸದ್ಯ 60 ಮಂದಿ ರೌಡಿಗಳು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಕಾರ ವ್ಯಕ್ತಪಡಿಸಿದ ಸಿ.ಟಿ.ರವಿ ಅವರು, ತಲೆ ಕೆಟ್ಟವರ ಹೇಳಿಕೆಗಳಿಗೆ ಪ್ರತಿಕ್ರಿಯೆ ಮಾಡಲ್ಲ ಎಂದರು.

ಇದನ್ನೂ ಓದಿ: ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರ ಆಯ್ಕೆ ಮಾಡಬಹುದೆಂಬ ಅಭಿಪ್ರಾಯ ಬರುತ್ತಿದೆ: ಕೆ. ಎಸ್​​ ಈಶ್ವರಪ್ಪ

ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ‌ ಮಂತ್ರ‌ ಉದುರಿಸುವ ಆರ್ ಎಸ್ ಎಸ್ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿ‌ಕೊಂಡದ್ದು ರೌಡಿಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರ್ ಎಸ್ ಎಸ್ ಮೌನ ಸಮ್ಮತಿ ಲಕ್ಷಣವೇ? ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

ಗಣಿಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು. ಈಗ ಹೊಸ ರೌಡಿಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳಿಸಲು? ಸೋಲಿನ ಭೀತಿಯಲ್ಲಿರುವ ರಾಜ್ಯಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ,ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ‌ ಅಧ:ಪತನವಲ್ಲದೆ ಮತ್ತೇನು? ಎಂದು ಸರಣಿ ಟ್ವೀಟ್​ಗಳಲ್ಲಿ ಪ್ರಶ್ನಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Tue, 6 December 22

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!