AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನ ಕಟ್ಟಲು ಅನುಮತಿಗಾಗಿ ಭಿಕ್ಷೆ ಬೇಡಬೇಕು, ಚರ್ಚ್, ಮಸೀದಿಗೆ ಯಾರ ಅನುಮತಿ ಬೇಡ: ಅನಂತಕುಮಾರ್ ಹೆಗಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಮೇಲೆ ಪ್ರಕರಣ ದಾಖಲಿಸಿದ ಕೂಡಲೆ ನನ್ನ ಆರೋಗ್ಯ ಸರಿಯಾಯಿತು. ಸಿದ್ದರಾಮಯ್ಯನವರೇ ನೀವು ಎಷ್ಟು ಬೇಕಾದರೂ ಕೇಸ್​ಗಳನ್ನು ಹಾಕಿ. ಹಿಂದೂ ರಾಷ್ಟ್ರ ನಮ್ಮ ಗುರಿ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.

ದೇವಸ್ಥಾನ ಕಟ್ಟಲು ಅನುಮತಿಗಾಗಿ ಭಿಕ್ಷೆ ಬೇಡಬೇಕು, ಚರ್ಚ್, ಮಸೀದಿಗೆ ಯಾರ ಅನುಮತಿ ಬೇಡ: ಅನಂತಕುಮಾರ್ ಹೆಗಡೆ
ಸಂಸದ ಅನಂತಕುಮಾರ್ ಹೆಗಡೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 26, 2024 | 1:48 PM

Share

ಬಾಗಲಕೋಟೆ, ಫೆಬ್ರವರಿ 26: ವಕ್ಫ್​ ಕಾಯ್ದೆ (Waqf Board) ತಂದು ಈ ಜಾಗ ನಮ್ಮದು ಎಂದರೆ ಅವರಿಗೆ ಬಿಟ್ಟುಕೊಡಬೇಕು. ನಮ್ಮ ದೇವಸ್ಥಾನ (Temple) ಕಟ್ಟಲು ಅನುಮತಿಗಾಗಿ ಭಿಕ್ಷೆ ಬೇಡಬೇಕು. ಆದರೆ ಇನ್ಮುಂದೆ ಚರ್ಚ್ (Church), ಮಸೀದಿ (Mosque) ಕಟ್ಟಲು ಯಾರ ಅನುಮತಿ ಬೇಡ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅನುಮತಿ ಪಡೆದರೆ ಸಾಕು ಎಂದು ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಹೇಳಿದರು. ಮುದೋಳ (Mudol) ತಾಲೂಕಿನ ಶಿರೋಳ ಗ್ರಾಮದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ಇನ್ಮುಂದೆ ಪೇಪರ್​ನಲ್ಲಿ ಮಾತ್ರ ಉಳಿಯುತ್ತೆ. ಮುಸ್ಲಿಮರು ನೆಮ್ಮದಿಯಿಂದ ಬದುಕಬೇಕಾದರೆ ಯುಸಿಸಿ ಒಪ್ಪಿಕೊಳ್ಳಬೇಕು ಎಂದರು.

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ಮಾಡಿದ ಎಂಬ ಕಾಂಗ್ರೆಸ್​ ನಾಯಕರ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಇಲ್ಲ. ಇವರಿಗೆ ಇಲ್ಲದ ತೆರಿಗೆ ವಿಚಾರ ರಾಜ್ಯ ಕಾಂಗ್ರೆಸ್​ನವರಿಗೆ ಇದೆ. ದೇಶದಲ್ಲಿ ಶೇಕಡಾ 99.99ರಷ್ಟು ತೆರಿಗೆ ಕಟ್ಟುವವರು ಹಿಂದೂಗಳು ಎಂದು ತಿಳಿಸಿದರು.

ಇದನ್ನೂ ಓದಿ: ಎಲ್ಲಿಯವರೆಗೆ ಇಸ್ಲಾಂ ಇರುತ್ತೋ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ

ಹಿಂದೂ ಸಮಾಜ ಜಾತಿ ವಿಷ ಬೀಜ ಮರೆತು ಒಂದಾಗಬೇಕು. ಯಾವ ಋಷಿಗಳು ಬ್ರಾಹ್ಮಣರಿರಲ್ಲ. ನಮ್ಮಲ್ಲಿ ಜಾತಿ ಇರಲಿಲ್ಲ, ಅವನ ಉದ್ಯೋಗದ ಮೇಲೆ ಗುರುತಿಸುತ್ತಿದ್ದರು. ಪೂಜೆ ಮಾಡುವ ದೇವರೆಲ್ಲ ಬ್ರಾಹ್ಮಣ ದೇವರಲ್ಲ. ಒಳ್ಳೆಯದು ಜಗತ್ತಿನ ಯಾವ ಮೂಲೆಯಲ್ಲಿದ್ದರೂ ನಮ್ಮಲ್ಲಿ ಬರಲಿ ಅಂತಿವಿ. ಹಿಂದೂ ರಾಷ್ಟ್ರ ಮಾಡುವುದೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಮೇಲೆ ಪ್ರಕರಣ ದಾಖಲಿಸಿದ ಕೂಡಲೆ ನನ್ನ ಆರೋಗ್ಯ ಸರಿಯಾಯಿತು. ಸಿದ್ದರಾಮಯ್ಯನವರೇ ನೀವು ಎಷ್ಟು ಬೇಕಾದರೂ ಕೇಸ್​ಗಳನ್ನು ಹಾಕಿ. ಹಿಂದೂ ರಾಷ್ಟ್ರ ನಮ್ಮ ಗುರಿ. ಈ ಮಾತನ್ನು ಅನಂತಕುಮಾರ್ ಹೆಗಡೆ ಅಲ್ಲದೆ, ಸಿದ್ದರಾಮಯ್ಯನವರು ಹೇಳಲು ಆಗುತ್ತಾ? ಅತ್ಯಂತ ಅಮಷ್ಠಿಯ ಬದಕೂ ನಮ್ಮ ಹಿಂದೂ ರಾಷ್ಟ್ರದ ಕಲ್ಪನೆ. ಮಣ್ಣಿನಲ್ಲಿರುವ ಸಾವಿರಾರು ಜೀವಿಗಳನ್ನ ಕೊಂದು ನಾವು ಬದುಕುತ್ತೇವೆ. ಕಳೆದ ಹತ್ತು ವರ್ಷಗಳಿಂದ ಜೀವ ಚೈತನ್ಯ ಕೃಷಿ ಆರಂಭವಾಗಿದೆ. ಹಿಂದೂ ಸಮಾಜ ಯಾರನ್ನೋ ಕಾಪಿ ಮಾಡಿ ಬದುಕಿದ ಸಮಾಜವಲ್ಲ. ವಿದೇಶಿಗರನ್ನ ಕಾಪಿ ಮಾಡಿ ನಾವು ದರಿದ್ರರಾಗಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ