AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಿಂದ ಗೆದ್ದಿದ್ದು ಇಬ್ಬರೇ, ಒಬ್ಬರು ಸ್ಪೀಕರಾದರೆ ಮತ್ತೊಬ್ಬರು ಹೊಸಬರು; ಇನ್ಯಾರಿಗೆ ಸಚಿವ ಸ್ಥಾನ?

ದೆಹಲಿಯಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಈ ನಡುವೆ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ಲಾಬಿ ಹೆಚ್ಚಾಗಿದೆ. ದಕ್ಷಿಣಕನ್ನಡ - ಉಡುಪಿ ಜಿಲ್ಲೆಯಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದ್ದು, ಅದರಲ್ಲಿಯೂ ಯುಟಿ ಖಾದರ್‌‌ ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಇದೀಗ ಪರಿಷತ್ ಸದಸ್ಯರು ಮಿನಿಷ್ಟರ್ ರೇಸ್‌ನಲ್ಲಿದ್ದಾರೆ.

ಕರಾವಳಿಯಿಂದ ಗೆದ್ದಿದ್ದು ಇಬ್ಬರೇ, ಒಬ್ಬರು ಸ್ಪೀಕರಾದರೆ ಮತ್ತೊಬ್ಬರು ಹೊಸಬರು; ಇನ್ಯಾರಿಗೆ ಸಚಿವ ಸ್ಥಾನ?
ಯುಟಿ ಖಾದರ್ ಮತ್ತು ಅಶೋಕ್ ರೈ
ಗಣಪತಿ ಶರ್ಮಾ
|

Updated on: May 25, 2023 | 8:37 PM

Share

ಬೆಂಗಳೂರು: ದೆಹಲಿಯಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಈ ನಡುವೆ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ಲಾಬಿ ಹೆಚ್ಚಾಗಿದೆ. ದಕ್ಷಿಣಕನ್ನಡ – ಉಡುಪಿ ಜಿಲ್ಲೆಯಲ್ಲಿ ಕೇವಲ ಎರಡು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿದ್ದು, ಅದರಲ್ಲಿಯೂ ಯುಟಿ ಖಾದರ್‌‌ (UT Khader) ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಇದೀಗ ಪರಿಷತ್ ಸದಸ್ಯರು ಮಿನಿಷ್ಟರ್ ರೇಸ್‌ನಲ್ಲಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ ಸಂಪುಟ ಸರ್ಕಸ್ ದಿಲ್ಲಿಗೆ ಶಿಫ್ಟ್ ಆಗಿದೆ. ಯಾರಿಗೆ ಸಚಿವ ಸ್ಥಾನ ಸಿಗುತ್ತೆ, ಪೂರ್ಣ ಮಂತ್ರಿ ಮಂಡಲ ಯಾವಾಗ ಆಗುತ್ತೆ ಎಂಬ ಕುತೂಹಲ ಎಲ್ಲರಲ್ಲಿಯೂ ಇದೆ. ಇದರ ಜೊತೆ ಮಂಗಳೂರಿನ ಸೋಲಿಲ್ಲದ ಸರದಾರ ಯುಟಿ ಖಾದರ್ ಅವರನ್ನು ಸ್ಪೀಕರ್ ಸ್ಥಾನದಲ್ಲಿ ಕುಳ್ಳಿರಿಸಿದ ಬಳಿಕ ಕರಾವಳಿ ಕೋಟಾದ ಸಚಿವ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರ ಲಾಬಿ ಜೋರಾಗಿಯೆ ನಡೆಯುತ್ತಿದೆ.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ 13 ಸ್ಥಾನಗಳಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿತ್ತು. ಅದರಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಮಂಗಳೂರು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಸಭಾಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. ಹೀಗಾಗಿ ಕರಾವಳಿಯ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಜಿಜ್ಞಾಸೆ ಮತದಾರರಲ್ಲಿ ಮೂಡಿದೆ. ಆದ್ರೆ ಈ ಅವಕಾಶವನ್ನು ಪರಿಷತ್ ಸದಸ್ಯರು ಬಳಸಿಕೊಳ್ಳಲು ಮುಂದಾಗಿದ್ದು ಎಂ.ಎಲ್.ಸಿಯೂ ಆಗಿರುವ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಪಡೆಯುವ ಪ್ರಯತ್ನದಲ್ಲಿದ್ದಾರೆ. ಇವರ ಜೊತೆ ಎಂ.ಎಲ್.ಸಿ ಮಂಜುನಾಥ್ ಭಂಡಾರಿ ಹೆಸರು ಸಹ ಕೇಳಿಬಂದಿದೆ.

ಫಲಿತಾಂಶ ಬಂದ ದಿನ ಯುಟಿ ಖಾದರ್ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ. ಇದರ ಜೊತೆ ಯುಟಿ ಖಾದರ್‌‌ಗೆ ಉಪಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದು ಜನ ಅಂದುಕೊಂಡಿದ್ದರು. ಆದ್ರೆ ಅನೀರಿಕ್ಷಿತವಾಗಿ ನಡೆದ ಬೆಳವಣಿಗೆಯಲ್ಲಿ ಖಾದರ್ ಅವರನ್ನು ಸಭಾಧ್ಯಕ್ಷ ಸ್ಥಾನದಲ್ಲಿ ಕುಳ್ಳಿರಿಸಿದ್ದು ಜಿಲ್ಲೆಯ ಮತದಾರರಿಗೆ ಕೊಂಚ ಬೇಸರವನ್ನು ಮೂಡಿಸಿದೆ. ಈ ನಡುವೆಯೂ ಸ್ಪೀಕರ್ ಆದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸ್ಪೀಕರ್ ಯುಟಿ ಖಾದರ್‌ಗೆ ಗುರುವಾರ ಅದ್ದೂರಿ ಸ್ವಾಗತ ನೀಡಲಾಯಿತು. ಇದೇ ಸಂದರ್ಭ ಮಾತನಾಡಿದ ಯುಟಿ ಖಾದರ್ ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು, ಸಭಾಧ್ಯಕ್ಷನಾದರೂ ನನ್ನ ಸೇವೆಗೆ ಯಾವುದೇ ಅಡ್ಡಿಯಾಗಲ್ಲ, ಕ್ಷೇತ್ರದ ಜನರ ಕಾರ್ಯಕರ್ತರ ಜೊತೆ ನಿಕಟ ಸಂಪರ್ಕ ಇರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: UT Khader Profile: ವಿಧಾನಸಭೆ ನೂತನ ಸ್ಪೀಕರ್ ಯುಟಿ ಖಾದರ್, ಇಲ್ಲಿದೆ ಕರಾವಳಿ ರಾಜಕಾರಣಿಯ ರಾಜಕೀಯ ಖದರ್

ಇದೆಲ್ಲದರ ನಡುವೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿರುವ ಮಾಜಿ ಸಚಿವ ರಮನಾಥ್ ರೈ‌ ಅವರನ್ನು ಎಂ.ಎಲ್.ಸಿ ಮಾಡಿ ಸಚಿವ ಸ್ಥಾನ ನೀಡಿ ಎಂಬ ಒತ್ತಾಯ ಕೂಡ ಕೇಳಿ ಬರುತ್ತಿದೆ. ಸದ್ಯ ಹೈಕಮಾಂಡ್ ಅಂಗಳದಲ್ಲಿ ಸಚಿವ ಸಂಪುಟದ ಚೆಂಡು ಇದ್ದು ಸದ್ಯದಲ್ಲೇ ಈ ಕುತೂಹಲಗಳಿಗೆ ತೆರೆ ಬೀಳುವ ಸಾಧ್ಯತೆಯಿದೆ.

ಅಶೋಕ್ ಟಿವಿ 9 ಮಂಗಳೂರು

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ