AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ ಎಸ್​ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುವಾಗಿ ಆರ್ಥಿಕ ಸಹಾಯದ ಕಾನೂನು ಮಾಡಿದ್ದು ಕಾಂಗ್ರೆಸ್: ಸಿದ್ದರಾಮಯ್ಯ

ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ಎಸ್​ಸಿ ಎಸ್​ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುವಾಗಿ ಆರ್ಥಿಕ ಸಹಾಯದ ಕಾನೂನು ಮಾಡಿದ್ದು ನಾವು. ಹೀಗಿದ್ದಾಗ ಬಿಜೆಪಿಗೆ ನೀವು ಯಾಕೆ ಮತ ಹಾಕಬೇಕು ಎಂದು ಪ್ರಶ್ನಿಸಿದರು.

ಎಸ್​ಸಿ ಎಸ್​ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುವಾಗಿ ಆರ್ಥಿಕ ಸಹಾಯದ ಕಾನೂನು ಮಾಡಿದ್ದು ಕಾಂಗ್ರೆಸ್: ಸಿದ್ದರಾಮಯ್ಯ
ಸಿದ್ದರಾಮಯ್ಯ
Rakesh Nayak Manchi
|

Updated on:Mar 10, 2023 | 11:00 PM

Share

ದಾವಣಗೆರೆ: ನಾನು ಮುಖ್ಯಮಂತ್ರಿಯಾದ ನಂತರ ಎಸ್​ಸಿ ಎಸ್​ಟಿ (SC ST) ಜನಾಂಗದ ಜನಸಂಖ್ಯೆಗೆ ಆಧಾರವಾಗಿ ವಿಶೇಷ ಕಾನೂನು ಮಾಡಿದ್ದೆ. ಹೀಗಿದ್ದಾಗ ನೀವು ಯಾಕೆ ಬಿಜೆಪಿಗೆ (BJP) ಮತ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಜಿಲ್ಲೆಯ ಜಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ (Congress Praja Dhwavi Yatra) ಮಾತನಾಡಿದ ಅವರು, ಎಸ್​ಟಿಪಿ ಟಿಎಸ್​ಪಿ ಕಾನೂ‌ನು ಮಾಡಿದೆ. ರಾಜ್ಯದಲ್ಲಿ ಶೇ.24.8ರಷ್ಟು ಎಸ್​ಸಿ ಎಸ್​ಟಿ ಜನಾಂಗದ ಜನರು ಇದ್ದಾರೆ. ನಾನು ಮುಖ್ಯಮಂತ್ರಿಯಾದ ಮೇಲೆ ಈ ಜನಾಂಗಕ್ಕೆ ವಿಶೇಷ ಕಾನೂ‌ನು ಮಾಡಿದ್ದೆ. ಇಂತಹ ಕಾನೂನು ಮಾಡದ ಬಿಜೆಪಿಗೆ ನೀವು ಯಾಕೆ ವೋಟ್ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಇದ್ದಾಗ ಎಸ್​ಸಿ ಎಸ್​ಟಿಗೆ 88ಸಾವಿರ ಕೋಟಿ ಹಣ ಖರ್ಚು ಮಾಡಿದೆ. ತುಳಿತಕ್ಕೆ ಒಳಗಾದವರಿಗೆ ವಿಶೇಷ ಸೌಲಭ್ಯ ಕೊಡದೇ ಹೋದರೆ ಉದ್ಧಾರ ಆಗುವುದು ಹೇಗೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇವರು (ಬಿಜೆಪಿ) ದುಡ್ಡು ಹೊಡೆಯುವುದು ಹೇಗೆ ಎಂಬ ಚಿಂತೆಯಲ್ಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ನಾನು ವಕೀಲ. ಜೊತೆಗೆ ಲಾ ಕಾಲೇಜ್ ಮೂರು ವರ್ಷ ಎವಿಡೆನ್ಸ್ ಕಾಯ್ದೆ ಬಗ್ಗೆ ಪಾಠ ಮಾಡಿದ್ದೇನೆ. ಶಾಸಕ ಮಾಡಾಳ್ ವಿರೂಪಾಕಪ್ಪ ರೇಡ್ ಹ್ಯಾಂಡ್ ಆಗಿ ಸಿಕ್ಕಿದ್ದಾನೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬೆಂಬಲಿಗರ ಪೈಪೋಟಿ; 50 ಕ್ಷೇತ್ರಗಳಿಗೆ ಅಂತಿಮಗೊಳ್ಳದ ಕಾಂಗ್ರೆಸ್​ ಅಭ್ಯರ್ಥಿಗಳ ಆಯ್ಕೆ

ಅಂದು ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ಅವರಿಗೆ ಲಂಚಾ ಹೊಡೆಯುವುದು ಕಡಿಮೆ ಮಾಡಿ, ಬಡವರಿಗೆ ಏಳು ಕೆಜಿ ಅಕ್ಕಿ ಕೊಡಿ ಅಂತ ನಾನು ಹೇಳಿದ್ದೆ. ಆದರೆ ಅವರು ಕೆಜಿಯಲ್ಲಿ ಕಡಿಮೆ ಮಾಡಿದರು ಎಂದರು. ರಾಜ್ಯದ ಬಜೆಟ್ ಗಾತ್ರ ಮೂರು ಲಕ್ಷದ ಎಂಬತ್ತು ಸಾವಿರ ಕೋಟಿ ಇದೆ. ಇದರಲ್ಲಿ ಅಕ್ಕಿ ಕೊಡಲು ಹಣ ಕೊರತೆ ಆಗುತ್ತಾ? ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಮೂರು ಬಾರಿ ಸರ್ವೆ: ಸಿದ್ದರಾಮಯ್ಯ

ರಾಜ್ಯದಲ್ಲಿ ನಾನು ಈಗಾಗಲೇ ಮೂರು ಸಲ ಸರ್ವೇ ಮಾಡಿಸಿದ್ದೇನೆ.‌ ಹೈಕಮಾಂಡ್ ಕೂಡಾ ಪ್ರತ್ಯೇಕ ಸರ್ವೇ ಮಾಡಿಸಿದೆ. ಯಾರಿಗೆ ಸರ್ವೇದಲ್ಲಿ ಒಳ್ಳೆಯ ಅಭಿಪ್ರಾಯ ಇದೆಯೋ ಅಂತಹವರಿಗೆ ಟಿಕೆಟ್ ಕೊಡಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬರುವ ವಾತಾವರಣವಿದೆ‌. ಇದೇ ಕಾರಣಕ್ಕೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಚುನಾವಣೆಯಲ್ಲಿ ಶೇಖಡಾವರಾ ಮತಗಳು ಕಾಂಗ್ರೆಸ್​ಗೆ ಹೆಚ್ಚು ಬಂದಿತ್ತು. ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಸಮಾನತೆಯ ವಿರುದ್ಧ ಬಿಜೆಪಿಯವರು ಇದ್ದಾರೆ. ಮನುವಾದಿ ಹಾಗೂ ಪುರೋಹಿತ ಶಾಹಿಗಳು ಈ ದೇಶಕ್ಕೆ ಶಾಪ ಎಂದು ವಿವೇಕಾನಂದರು ಹೇಳಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಮತ್ತು ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 pm, Fri, 10 March 23

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ