AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆ: ಮೊದಲೇ ಆತಂಕದಲ್ಲಿರುವ ಕಾಂಗ್ರೆಸ್​​ಗೆ ಮತ್ತೊಂದು ಆಘಾತ!

ರಾಜ್ಯಸಭಾ ಚುನಾವಣೆಗೆ ಇನ್ನೊಂದೆ ದಿನ ಬಾಕಿ ಇದ್ದು ರಾಜಕೀಯ ಜೋರಾಗಿದೆ. ಅಡ್ಡ ಮತದಾನದ ಆಸೆಯಲ್ಲಿ ದೋಸ್ತಿ ಪಾರ್ಟಿ ಇದ್ದರೆ ರಿವರ್ಸ್ ಆಪರೇಷನ್ ಮಾಡಲು ಕಾಂಗ್ರೆಸ್ ಪ್ಲಾನ್‌ ಮಾಡಿದೆ. ಕಾಂಗ್ರೆಸ್‌ಗೆ ಶಾಸಕರನ್ನು ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದ್ದರೆ ಜೆಡಿಎಸ್ ಪಾಲಿಗೆ ಶಾಸಕರನ್ನು ಸೆಳೆಯಬೇಕಾದ ಅನಿವಾರ್ಯತೆಯಿದೆ. ಇದರ ಮಧ್ಯೆ ಕಾಂಗ್ರೆಸ್​ಗೆ ಒಂದು ದೊಡ್ಡ ಆಘಾತವೇ ಆಗಿದೆ

ರಾಜ್ಯಸಭಾ ಚುನಾವಣೆ: ಮೊದಲೇ ಆತಂಕದಲ್ಲಿರುವ ಕಾಂಗ್ರೆಸ್​​ಗೆ ಮತ್ತೊಂದು ಆಘಾತ!
ಡಿಕೆ ಶಿವಕುಮಾರ್-ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Feb 25, 2024 | 7:12 PM

Share

ಬೆಂಗಳೂರು, (ಫೆಬ್ರವರಿ 25): ಇದೇ ಫೆಬ್ರವರಿ 27 (ಮಂಗಳವಾರ) ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajya Sabha Election) ನಡೆಯಲಿದೆ. ಆದ್ರೆ, ಕಣದಲ್ಲಿ ಐದನೇ ಅಭ್ಯರ್ಥಿ ಇರುವುದರಿಂದ ಸಹಜವಾಗಿಯೇ ಆಡಳಿತರೂಢ ಕಾಂಗ್ರೆಸ್​​ಗೆ (Congress) ಕುದುರೆ ವ್ಯಾಪಾರ(ಅಡ್ಡಮತದಾನ) ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಂಖ್ಯಾಬಲದಲ್ಲಿ ಯಾವುದೇ ಕಡಿಮೆಯಾಗದಂತೆ ಶಾಸಕರನ್ನು ಹಿಡಿಟ್ಟುಕೊಳ್ಳಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayak )ಅವರು ನಿಧನರಾಗಿದ್ದಾರೆ. ಈ ಮೂಲಕ ಕಾಂಗ್ರೆಸ್​​ ಒಂದು ಮತ ಕಳೆದುಕೊಂಡಂತಾಗಿದೆ. ಈ ಹಿನ್ನೆಲೆಯಲ್ಲಿ ಮೊದಲೇ ಅಡ್ಡಮತದಾನದ ಭೀತಿಯಲ್ಲಿದ್ದ ಕಾಂಗ್ರೆಸ್​​ಗೆ ಮತ್ತೊಂದು ಆಘಾತವಾಗಿದೆ.

.ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆ. 27ರಂದು ಚುನಾವಣೆ ನಡೆಯಲಿದ್ದು ಐವರು ಕಣದಲ್ಲಿ ಇರುವುದರಿಂದ ಈಗ ಈ ಚುನಾವಣೆ ಕುತೂಹಲಕಾರಿ ಘಟ್ಟ ತಲುಪಿದೆ. ಕಾಂಗ್ರೆಸ್‌ನಿಂದ ಅಜಯ್‌ ಮಾಕೆನ್‌, ಜಿ.ಸಿ. ಚಂದ್ರಶೇಖರ್‌, ಡಾ. ನಾಸೀರ್‌ ಹುಸೇನ್‌, ಬಿಜೆಪಿಯ ನಾರಾಯಣಸಾ ಭಾಂಡಗೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಕಣದಲ್ಲಿ ಇದ್ದಾರೆ. ಆದ್ರೆ, ಕುಪೇಂದ್ರ ರೆಡ್ಡಿಗೆ (Kupendra Reddy) ಬಿಜೆಪಿಯ ಹೆಚ್ಚುವರಿ 21 ಮತಗಳು ಹಾಗೂ ಜೆಡಿಎಸ್‌ನ 16 ಮತಗಳು ಚಲಾವಣೆಯಾದರೂ ಗೆಲುವಿಗೆ ಇನ್ನೂ 8 ಮತಗಳ ಅಗತ್ಯವಿದೆ. ಈ ಅಗತ್ಯ ಮತಗಳನ್ನು ಎಲ್ಲಿಂದ ಪಡೆಯುತ್ತಾರೆ ಎಂಬುದು ಈಗ ಸದ್ಯದ ಕುತೂಹಲ. ಈ ಕಾರಣಕ್ಕೆ ಜೆಡಿಎಸ್‌ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕುವ ಪ್ರಯತ್ನ ನಡೆಸುತ್ತಿದೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಬೆನ್ನಿಗೆ ನಿಂತ ಬಿಎಸ್​ವೈ: ಟಿಕೆಟ್​ ಕನ್ಫರ್ಮ್, ಸಿಟಿ ರವಿಗೆ ಶಾಕ್

ಕಾಂಗ್ರೆಸ್​​ಗೆ ಲಾಸ್​?

ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‌ನ ಎಲ್ಲ 135 ಶಾಸಕರ ಮತಗಳು ಚಲಾವಣೆಯಾದರೆ ಮೂವರು ಆತಂಕ ಇಲ್ಲದೇ ಜಯಗಳಿಸುತ್ತಿದ್ದರು. ಆದ್ರೆ, ಇದೀಗ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ಒಂದು ಮತ ಕಡಿಮೆಯಾಗಿದೆ. ಈ ಮೂಲಕ ಕಾಂಗ್ರೆಸ್​​ ಮತಗಳು 135ರಿಂದ 134ಕ್ಕೆ ಇಳಿದಿದೆ. ಹೀಗಾಗಿ ಕಾಂಗ್ರೆಸ್​ನ ಮೂರನೇ ಅಭ್ಯರ್ಥಿಗೆ ಒಂದು ಮತ ಕೊರತೆಯಾಗಿದೆ. . ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‌ನಲ್ಲಿ ಈಗ 135 ಶಾಸಕರನ್ನು ಹೊಂದಿದ್ದ ಕಾಂಗ್ರೆಸ್​ನ ಎಲ್ಲಾ ಶಾಸಕರು ಯಾವುದೇ ಅಡ್ಡ ಮತದಾನ ಮಾಡದೆ ಮತ ಹಾಕಿದರೆ ತಲಾ 45 ಮತಗಳು ಬೀಳುವುದರಿಂದ ಮೂವರು ಗೆಲುವು ಸಾಧಿಸುತ್ತಿದ್ದರು. ಈಗ ಒಂದು ಮತ ಕಡಿಮೆಯಾಗಿದ್ದರಿಂದ ಕಾಂಗ್ರೆಸ್​ಗೆ ಟೆನ್ಷನ್ ಶುರುವಾಗಿದೆ.

ಎಲೆಕ್ಷನ್​ ಮತದಾನ ಲೆಕ್ಕಾಚಾರ ಬದಲಾಗಬಹುದು?

ಹೌದು…ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ಒಂದು ಮತ ಕಾಂಗ್ರೆಸ್​ ಕಳೆದುಕೊಂಡಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ವೆಂಕಟಪ್ಪ ಸಾವಿಗೂ ಮೊದಲೇ ಅವರಿಂದ ರಾಜ್ಯಸಭಾ ಚುನಾವಣೆ ಫಾರಂಗೆ ಸಹಿ ಹಾಕಿಸಿಕೊಂಡಿದ್ದಾರಂತೆ. ಹೀಗಾಗಿ ಅವರ ಮತ ಸ್ವೀಕೃತವಾಗಬಹುದು. ಇಲ್ಲ ಮತದಾನದ ಲೆಕ್ಕಾಚಾರ ಬದಲಾಗಬಹುದು. ಈ ಬಗ್ಗೆ ಚುನಾವಣೆ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಮೂವರಲ್ಲಿ ಒಬ್ಬರನ್ನು ಸೆಳೆದರೆ ಕಾಂಗ್ರೆಸ್ ಸೇಫ್

ಕಾಂಗ್ರೆಸ್ ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು 135 ಬೇಕು. ಹೀಗಾಗಿ ಕಡಿಮೆಯಾಗುವ ಒಂದು ಮತವನ್ನು ಪಕ್ಷೇತರ ಮೂಲಕ ಹಾಕಿಸುವ ಆಪ್ಷನ್​ ಕಾಂಗ್ರೆಸ್ ಮುಂದಿದೆ. ಹರಪನಹಳ್ಳಿ ಕ್ಷೇತ್ರದ ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣಯ್ಯ ಸೇರಿದಂತೆ ಮೂವರು ​ಪಕ್ಷೇತರ ಶಾಸಕರಿದ್ದು, ಇವರಲ್ಲಿ ಒಂದು ಮತ ಸೆಳೆದು ಪಕ್ಷದ ಎಲ್ಲಾ ಶಾಸಕರು ಸರಿಯಾಗಿ ಮತದಾನ ಮಾಡಿದರೆ ಸಾಕು ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳು ಸುಲಭವಾಗಿ ಗೆಲ್ಲಬಹುದು.

ಇಷ್ಟಕ್ಕೆ ಸುಮ್ಮನಿದರ ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಆಪರೇಷನ್​ಗೆ ರಿವರ್ಸ್​ ಆಪರೇಷನ್​ ಮಾಡುವ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್​ ಕೆಲ ಶಾಸಕ ಮತ ಸೆಳೆಯಲು ಮೈತ್ರಿ ಪಕ್ಷದ ನಾಯಕರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಅವರು ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್​ ಮೇಲೆ ಕಟ್ಟಿದ್ದಾರೆ. ಇನ್ನು ಜೆಡಿಎಸ್​​ನ ಶರಣಗೌಡ ಕಂದಕೂರು ಅವರಿಗೂ ಗಾಳ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿಲ್ಲಿ ಸುಲಭವಾಗಿ ಜಯ ಸಾಧಿಸಿಬೇಕೆದ್ದ ಕಾಂಗ್ರೆಸ್​ ಮೂವರು ಅಭ್ಯರ್ಥಿಗಳ ಪೈಕಿ ಮೂರನೇ ಅಭ್ಯರ್ಥಿ ಒಂದು ಮತ ಕಡಿಮೆಯಾಗಲಿದ್ದು, ರಾಜ್ಯಸಭಾ ಚುನಾವಣೆ ಲೆಕ್ಕಾಚಾರ ಕುತೂಹಲ ಮೂಡಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?