AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಡಾ.ಮಂಜುನಾಥ್​​ಗೆ ಹೆಚ್ಚಿದ ಒತ್ತಡ: ಬೆಂಬಲ ಘೋಷಿಸಿದ ಕರವೇ ಪ್ರವೀಣ್ ಶೆಟ್ಟಿ

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರ ಹೆಸರಾಂತ ಖ್ಯಾತ ವೈದ್ಯ ಡಾ. ಮಂಜುನಾಥ್ ಅವರನ್ನು ರಾಜಕಾರಣಕ್ಕೆ ಕರೆತರಲು ಜೆಡಿಎಸ್​ ಇನ್ನಿಲ್ಲದ ಕಸರತ್ತು ನಡೆಸಿದೆ. ದೇವೇಗೌಡರ ಅಳಿಯ ಆಗಿರುವ ಮಂಜುನಾಥ್ ಅವರನ್ನು ಈ ಬಾರಿ ಲೋಕಸಭಾ ಚುನಾವಣೆ ಕಣಕ್ಕಿಳಿಸಲು ಚರ್ಚೆಗಳು ನಡೆದಿವೆ. ಅಲ್ಲದೇ ಮಂಜುನಾಥ್ ಅವರು ಲೋಕಸಭಾ ಚುನಾವಣೆಗ ಸ್ಪರ್ಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ಸಹ ಒತ್ತಾಯಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಡಾ.ಮಂಜುನಾಥ್​​ಗೆ ಹೆಚ್ಚಿದ ಒತ್ತಡ: ಬೆಂಬಲ ಘೋಷಿಸಿದ ಕರವೇ ಪ್ರವೀಣ್ ಶೆಟ್ಟಿ
ಪ್ರವೀಣ್ ಶೆಟ್ಟಿ, ಡಾ.ಮಂಜುನಾಥ್
TV9 Web
| Edited By: |

Updated on: Feb 06, 2024 | 4:21 PM

Share

ಬೆಂಗಳೂರು, (ಪೆಬ್ರವರಿ 06): ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕರ ಡಾ. ಮಂಜುನಾಥ್(Dr CN Manjunath)  ಅವರು ಈ ಬಾರಿ ಲೋಕಸಭಾ ಚುನಾವಣೆಗೆ (Loksabha Poll 2024)ಸ್ಪರ್ಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ(praveen shetty) ಅವರು ಒತ್ತಾಯಿಸಿದ್ದಾರೆ. ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸಹ ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ಅವರಿಗಾಗಿ ಕೆಲಸ ಮಾಡುತ್ತೇವೆ ಎಂದು ಬೆಂಬಲ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಶೆಟ್ಟಿ, ಜಯದೇವ ಆಸ್ಪತ್ರೆಯನ್ನ ದೇಶವೇ ನೋಡುವಂತೆ ಮಾಡಿದ್ದಾರೆ. ದೇಶದ ಹಿತದೃಷ್ಟಿಯಿಂದ ಸೂಕ್ತವಾದ ಸಲಹೆ ನೀಡುತ್ತಾರೆ. ಪ್ರಧಾನ ಮಂತ್ರಿಗಳಿಗೆ ಮತ್ತು ಸಂಸದರಿಗೆ ಸಲಹೆ ನೀಡುತ್ತಾರೆ. ಹೀಗಾಗಿ ಅವರು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಜಯದೇವ ಮಾಜಿ ನಿರ್ದೇಶಕ ಡಾ ಮಂಜುನಾಥ್ ಕರೆತರಲು ಜೆಡಿಎಸ್ ಕಸರತ್ತು

ಇದೀಗ ತಾನೇ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸಿ ಡಾ. ಸಿಎನ್ ಮಂಜುನಾಥ್ ನಿವೃತ್ತರಾಗಿದ್ದಾರೆ. ಜಯದೇವ ಆಸ್ಪತ್ರೆಯನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ. ಜೆಡಿಎಸ್, ಕಾಂಗ್ರೆಸ್, ಅಥವಾ ಬಿಜೆಪಿ ಯಾವ ಪಕ್ಷದಿಂದ ಆದರೂ ಸಹ ಅವರು ಸ್ಪರ್ಧಿಸಬೇಕು. ಅವರ ಸೇವೆ ದೇಶಕ್ಕೆ ಅಗತ್ಯವಾಗಿದೆ ಎಂದು ಹೇಳಿದರು.

ಬೆಂಗಳೂರು ಉತ್ತರಕ್ಕೆ ಬನ್ನಿ ಅಥವಾ ರಾಜ್ಯದ ಯಾವುದಾದರೂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಕರ್ನಾಟಕ ರಕ್ಷಣಾ ವೇದಿಕೆ, ಎಲ್ಲಾ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ಅವರಿಗಾಗಿ ಕೆಲಸ ಮಾಡುತ್ತೇವೆ. ಅತ್ಯಧಿಕ ಮತಗಳಿಂದ ಗೆಲ್ಲಿಸಿಕೊಂಡು ಬರುತ್ತೇವೆ. ನಿವೃತ್ತಿಯಾಗಿ ಮನೆಯಲ್ಲಿರುವುದು ರಾಜ್ಯಕ್ಕೆ ಶೋಭೆಯಲ್ಲ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ, ನಿಮ್ಮ ಸೇವೆ ನಾಡಿಗೆ ಅವಶ್ಯಕವಾಗಿದೆ ಎಂದು ಒತ್ತಾಯಿಸಿದರು.

Follow Us
Web contact
Web contact

TV9 Kannada

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!