Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
Rakesh Nayak Manchi
|

Updated on: Jun 18, 2023 | 4:27 PM

ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ರಾಜ್ಯದ ಬಿಜೆಪಿ (BJP) ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಿ ಅಕ್ಕಿ ನೀಡುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ಕಿ ಇದ್ದರೆ ಕೊಡಿಸಿ, ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ ಅಂತಾ ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ನೀಡುವುದಾಗಿ ಹೇಳಿತ್ತು. ಜೂನ್​ 12ರಂದು ಎಫ್​​ಸಿಐ ಕೂಡ ಪತ್ರ ಬರೆದಿತ್ತು. ಆದರೆ ಇದೀಗ ಎಫ್​ಸಿಐ ಅಕ್ಕಿ ನೀಡಲಾಗಲ್ಲ ಎಂದು ಪತ್ರ ಬರೆದಿದೆ. ಬಡವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​​ ಕೊಟ್ಟ ಭರವಸೆಯಂತೆ 10 ಕೆಜಿ ಅಲ್ಲ 15 ಕೆಜಿ ಅಕ್ಕಿ ನೀಡಲಿ: ಬಿವೈ ವಿಜಯೇಂದ್ರ

ಕೇಂದ್ರದವರು ಅಕ್ಕಿ ಕೊಡಲ್ಲ ಅಂದಿದ್ದಾರೆ, ಎಫ್‌‌ಸಿಐ ಅಧಿಕಾರಿಗಳು ಕೊಡುತ್ತೇವೆ ಅಂತ ಹೇಳಿ ಕೊಡಲಿಲ್ಲ. ನಮಗೆ 14ಕ್ಕೆ ಅಕ್ಕಿ ಕೊಡಕ್ಕಾಗಲ್ಲ ಅಂತ ಹೇಳಿದ್ದಾರೆ. ಹೀಗಾಗಿ ಆಂಧ್ರಪ್ರದೇಶದ ಜೊತೆ ಮಾತಾಡಿದ್ದೇವೆ. ಅವರು ಪೂರೈಕೆ ಮಾಡುತ್ತೇವೆ ಅಂತ ಹೇಳಿಲ್ಲ. ತೆಲಂಗಾಣ ಸರ್ಕಾರ ಆಗಲ್ಲ ಅಂತ ಹೇಳಿದೆ. ಛತ್ತೀಸಗಢ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುತ್ತೇವೆ ಅಂದಿದ್ದಾರೆ, ಆದರೆ ನೀವು ಕೇಳಿದ 2.28 ಲಕ್ಷ ಮೆಟ್ರಿಕ್ ಟನ್ ಕೊಡಲು ಸಾಧ್ಯವಿಲ್ಲ ಅಂತ ತಿಳಿಸಿದ್ದಾಗಿ ಹೇಳಿದರು.

ಅಕ್ಕಿ ಇದ್ದರೆ ಕೊಡಿಸಿ: ಸಿದ್ದರಾಮಯ್ಯ

ನಮ್ಮ ರಾಜ್ಯದಲ್ಲಿ ಅಕ್ಕಿ ಇಲ್ಲ. ಅಕ್ಕಿ ಇದ್ದರೆ ಕೊಡಿಸಿ ನೀವೇ ಎಂದು ಹೇಳಿದ ಸಿದ್ದರಾಮಯ್ಯ, ರಾಯಚೂರಿನಲ್ಲಿ ಸೋನಾ ಮಸೂರಿ ಇರುವುದು. ಅದು ಒಂದು ಕೆ.ಜಿಗೆ 55 ರೂಪಾಯಿ ಅಂತ ಹೇಳುವ ಮೂಲಕ ರಾಜ್ಯದ ರೈತರಿಂದ ಅಕ್ಕಿ ಖರೀದಿಸಲ್ಲ ಅಂತ ಪರೋಕ್ಷವಾಗಿ ಹೇಳಿದರು. ಅಲ್ಲದೆ, ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಅಂತ ಸವಾಲು ಹಾಕಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು