AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್​​ನಲ್ಲಿ ದಲಿತ ಸಿಎಂ ಬಳಿಕ ಈಗ ಮಹಿಳಾ ಮುಖ್ಯಮಂತ್ರಿ ಬೇಡಿಕೆ

ಇಷ್ಟು ದಿನ ಕರ್ನಾಟಕದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳಿಬಂದಿತ್ತು. ಇದರ ಮಧ್ಯೆ ಇದೀಗ ಮಹಿಳಾ ಮುಖ್ಯಮಂತ್ರಿ ಮಾತು ಕೇಳಿಬಂದಿದೆ.

Karnataka Politics: ಕಾಂಗ್ರೆಸ್​​ನಲ್ಲಿ ದಲಿತ ಸಿಎಂ ಬಳಿಕ ಈಗ ಮಹಿಳಾ ಮುಖ್ಯಮಂತ್ರಿ ಬೇಡಿಕೆ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್
TV9 Web
| Edited By: |

Updated on:Dec 13, 2022 | 2:48 PM

Share

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಚರ್ಚೆಗ ಜೋರಾಗಿದೆ. ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಸಿಎಂ ಕುರ್ಚಿ ಕಾಳಗ ನಡೆದಿದ್ದರೆ, ಇತ್ತ ದಲಿತ ಸಿಎಂ ಬಗ್ಗೆ ಡಾ.ಜಿ. ಪರಮೇಶ್ವರ್ ಮಾತನಾಡುವ ಮೂಲಕ ಮುಖ್ಯಮಂತ್ರಿ ಕುರ್ಚಿ ಮೇಲೆ ಟವೆಲ್ ಹಾಕಿದ್ದಾರೆ. ಇನ್ನು ಇದರ ನಡುವೆ ಇದೀಗ ಮಹಿಳಾ ಮುಖ್ಯಮಂತ್ರಿ ಮಾತು ಕೇಳಿಬಂದಿದೆ. ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಪರೋಕ್ಷವಾಗಿ ಮಹಿಳಾ ಸಿಎಂ ಬೇಡಿಕೆಯಿಟ್ಟಿದ್ದಾರೆ.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದರೂ ನಿರ್ಧಾರಕ್ಕಾಗಿ ಗಾಂಧಿ ಕುಟುಂಬಕ್ಕೆ ಜೋತು ಬಿದ್ದಿರುವ ಕಾಂಗ್ರೆಸ್: ಬಿಜೆಪಿ

ಹುಬ್ಬಳ್ಳಿಯಲ್ಲಿ ಇಂದು(ಡಿಸೆಂಬರ್ 13) ಸುದ್ದಿಗಾರರೊಂದಿಗೆ ಮಾತನಾಡಿದ ಪುಷ್ಪಾ ಅಮರನಾಥ್, ಮಹಿಳಾ ಮುಖ್ಯಮಂತ್ರಿ ಬರಬೇಕೆಂಬುದು ನಮ್ಮೆಲ್ಲರ ಆಶಯ. ನಾವು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಯಾಕೆ ಕೊಡಬಾರದು. ಅದಕ್ಕೆ ತಕ್ಕ ವಾತಾವರಣ ಸೃಷ್ಟಿಯಾಗಬೇಕಿದೆ ಎಂದು ಹೇಳುವ ಮೂಲಕಮಹಿಳಾ ಸಿಎಂ ಬೇಡಿಕೆ ಇಟ್ಟರು

ಟಿಕೆಟ್​ ಹಂಚಿಕೆ ವೇಳೆ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಈಗಾಗಲೇ ನಮ್ಮ ನಾಯಕರ ಗಮನಕ್ಕೆ ತಂದಿದ್ದು, ಮಹಿಳೆಯರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದಲ್ಲೂ ಚರ್ಚಿಸಿದ್ದೇವೆ. ಜ.8ರಂದು ಚಿತ್ರದುರ್ಗದಲ್ಲಿ ಡಾ.ಜಿ.ಪರಮೇಶ್ವರ್ ನಾಯಕತ್ವದಲ್ಲಿ ಐಕ್ಯತಾ ಸಮಾವೇಶ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಸಹ ಇದೆ. ಕಾಂಗ್ರೆಸ್​ನಿಂದ ಮಾತ್ರ ದಲಿತ ಸಿಎಂ ಸಾಧ್ಯ. ಬಿಜೆಪಿಯವರು ದಲಿತರನ್ನು ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಅಂಬೇಡ್ಕರ್ ಬಗ್ಗೆ ಮಾತಾಡುವುದಕ್ಕೆ ಯೋಗ್ಯತೆ ಇರಲಿಲ್ಲ. ಅದು ಇತ್ತೀಚೆಗೆ ಆರಂಭವಾಗಿದೆ. ಬೊಮ್ಮಾಯಿ ಅವರು ಕೇವಲ ಎರಡು ಪದಗಳಿಗೆ ಮಹತ್ವ ಕೊಟ್ಟಿದ್ದಾರೆ. ಅದು ಕೇವಲ ತಾಕತ್ ಧಮ್. ನಾನು ನಿಮ್ಮದೇ ಪದದಲ್ಲಿ ತಾಕತ್ ಧಮ್ ಇದ್ರೆ ಮಹಿಳಾ ಮೀಸಲಾತಿ ಕೊಡಿ ಎಂದು ಬೊಮ್ಮಾಯಿ ದಾಟಿಯಲೇ ಟಾಂಗ್ ಕೊಟ್ಟರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:46 pm, Tue, 13 December 22

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!